ನವದೆಹಲಿ: ಇಲ್ಲಿನ ಅರುಣ್ ಜೆಟ್ಲಿ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್ ಸೀಸನ್ನ 64ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ, ಲಖನೌ ಸೂಪರ್ ಜೈಂಟ್ಸ್ ತಂಡದ ವಿರುದ್ಧ 19 ರನ್ಗಳ ಅಂತರದಿಂದ ಗೆದ್ದು ಬೀಗಿದೆ. ಈ ಪಂದ್ಯ ಸೋಲುವ ಮೂಲಕ ಲಖನೌ ಸೂಪರ್ ಜೈಂಟ್ಸ್ ತಂಡ ಭಾಗಶಃ ಟೂರ್ನಿಯಿಂದ ಹೊರ ಬಿದ್ದಂತೆಯೇ ಆಗಿದೆ.
ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 208 ರನ್ಗಳಿಸಿತು. ಈ ಬೃಹತ್ ಮೊತ್ತ ಬೆನ್ನತ್ತಿದ ಲಖನೌ ಸೂಪರ್ ಜೈಂಟ್ಸ್ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 189 ರನ್ ಗಳಿಸಿ, 19 ರನ್ಗಳ ಅಂತರದಿಂದ ಸೋಲೊಪ್ಪಿಕೊಂಡಿತು.
ಡೆಲ್ಲಿ ಇನ್ನಿಂಗ್ಸ್: ಟೂರ್ನಿಯ ಕೊನೆಯ ಪಂದ್ಯ ಆಡುತ್ತಿರುವ ಡೆಲ್ಲಿ ತವರಿನಂಗಳದಲ್ಲಿ ಉತ್ತಮ ಪ್ರದರ್ಶನ ತೋರಿತು. ಆರಂಭಿಕ ಜೇಕ್ ಪ್ರೇಸರ್ ಮೆಕ್ ಗಾರ್ಕ್ ಶೂನ್ಯಕ್ಕೆ ಔಟಾದರು. ಬಳಿಕ ಜತೆಯಾದ ಅಭಿಷೇಕ್ ಪೋರೆಲ್ ಹಾಗೂ ಶಾಯ್ ಹೋಪ್ ತಂಡಕ್ಕೆ ಚೇತರಿಕೆ ನೀಡಿದರು. ಈ ಜೋಡಿ ತಂಡಕ್ಕೆ 90 ರನ್ಗಳ ಕೊಡುಗೆ ನೀಡಿತು. ಅಭಿಷೇಕ್ ಪೋರೆಲ್ 58(33), ಶಾಯ್ ಹೋಪ್ 38(27), ನಾಯಕ ಪಂತ್ 33(23) ರನ್ ಗಳಿಸಿದರು.
ಕೊನೆಯಲ್ಲಿ ಔಟಾಗದೇ ಅಬ್ಬರಿಸಿದ ಟ್ರಿಸ್ಟನ್ ಸ್ಟಬ್ಸ್ 25 ಎಸೆತ ಎದುರಿಸಿ 3ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 57ರನ್ ಬಾರಿಸಿದರು. ಇವರಿಗೆ ಅಕ್ಷರ್ ಪಟೇಲ್ 14(10) ರನ್ ಗಳಿಸಿ ಸಾಥ್ ನೀಡಿದರು.
ಲಖನೌ ಪರ ನವೀನ್ ಉಲ್-ಹಕ್ 2, ಹರ್ಷದ್ ಖಾನ್ ಹಾಗೂ ರವಿ ಬಿಷ್ಣೋಯಿ ತಲಾ ಒಂದೊಂದು ವಿಕೆಟ್ ಪಡೆದರು.
ಲಖನೌ ಇನ್ನಿಂಗ್ಸ್: ಈ ಬೃಹತ್ ಮೊತ್ತ ಬೆನ್ನತ್ತಿದ ಲಖನೌ ತಂಡಕ್ಕೆ ಉತ್ತಮ ಆರಂಭ ಒದಗಿಸುವಲ್ಲಿ ಆರಂಭಿಕರಿಬ್ಬರು ಕೈಕೊಟ್ಟರು. ನಾಯಕ ಕೆ.ಎಲ್ ರಾಹುಲ್ 5(3), ಡಿಕಾಕ್ 12(8)ರನ್ ಗಳಿಸಿ ಬೇಗನೇ ನಿರ್ಗಮಿಸಿದರು. ನಿಕೋಲಸ್ ಪೂರನ್ ಆಟ ತಂಡಕ್ಕೆ ಚೇತರಿಕೆ ನೀಡಿತು. ನಿಕೊಲಸ್ ಪೂರನ್ 27ಎಸೆತಗಳಲ್ಲಿ 6ಬೌಂಡರಿ ಹಾಗೂ 4ಸಿಕ್ಸರ್ ಸಹಿತ 61ರನ್ ಗಳಿಸಿದರು.
ಉಳಿದಂತೆ ಸ್ಟೋಯ್ನಿಸ್ 5(7), ದೀಪಕ್ ಹೂಡಾ ಶೂನ್ಯ, ಆಯೂಷ್ ಬದೋನಿ 6(9), ಕೃನಾಲ್ ಪಾಂಡ್ಯ 18(18), ಯದುವೀರ್ ಸಿಂಗ್ 14(7), ರವಿ ಬಿಷ್ಣೋಯಿ 2(2) ರನ್ಗಳಿಸಿ ಮಧ್ಯಮ ಕ್ರಮಾಂಕದಲ್ಲಿ ತಂಡ ರನ್ ಗಳಿಸುವಲ್ಲಿ ಪರದಾಡಿತು.
ಔಟಾಗದೇ ಕೊನೆಯಲ್ಲಿ ಅಬ್ಬರಿಸಿದ ಅರ್ಷದ್ ಸಿಂಗ್ ಕೇವಲ 33ಎಸೆತಗಳನ್ನು ಎದುರಿಸಿ 3 ಬೌಂಡರಿ ಮತ್ತು 5 ಸಿಕ್ಸರ್ ಸಹಿತ 58 ರನ್ ಗಳಿಸಿ ಐಪಿಎಲ್ ಚೊಚ್ಚಲ ಅರ್ಧಶತಕ ದಾಖಲಿಸಿದರು. ಆಗಿದ್ದರೂ ತಂಡವನ್ನು ಗೆಲ್ಲಿಸಿಕೊಡಲು ಸಾಧ್ಯವಾಗಲಿಲ್ಲ. ಇವರಿಗೆ ಜತೆಯಾಗಿ ನವೀನ್ ಉಲ್-ಹಕ್ 2(4) ರನ್ ಗಳಿಸಿದರು.
ಡೆಲ್ಲಿ ಪರ ಇಶಾಂತ್ ಶರ್ಮಾ 3, ಖಲೀಲ್ ಅಹ್ಮದ್, ಅಕ್ಷರ್ ಪಟೇಲ್, ಮುಖೇಶ್ ಕುಮಾರ್, ಕುಲ್ದೀಪ್ ಯಾದವ್ ಹಾಗೂ ಸ್ಟಬ್ಸ್ ತಲಾ ಒಂದೊಂದು ವಿಕೆಟ್ ಪಡೆದು ಮಿಂಚಿದರು.
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…