ಮೊಹಾಲಿ: ಇಲ್ಲಿನ ಮಹಾರಾಜ ಯದ್ವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಹದಿನೇಳನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನ ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ 4 ವಿಕೆಟ್ಗಳ ಅಂತರದ ಗೆಲುವನ್ನು ದಾಖಲಿಸಿ ಶುಭಾರಂಭ ಮಾಡಿದೆ.
ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 20 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 174 ರನ್ ಕಲೆಹಾಕಿ ಎದುರಾಳಿ ಪಂಜಾಬ್ ಕಿಂಗ್ಸ್ ತಂಡಕ್ಕೆ ಗೆಲ್ಲಲು 175 ರನ್ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ 19.2 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 177 ರನ್ ಕಲೆಹಾಕಿತು.
ಡೆಲ್ಲಿ ಇನ್ನಿಂಗ್ಸ್: ಡೆಲ್ಲಿ ಪರ ಆರಂಭಿಕರಾಗಿ ಬಂದ ಮಿಚೆಲ್ ಮಾರ್ಷ್ ಮತ್ತು ಡೇವಿಡ್ ವಾರ್ನರ್ ಜೋಡಿ ಉತ್ತಮ ಆಟವಾಡಿದರು. ಮಿಚೆಲ್ ಮಾರ್ಷ್ (20), ಡೇವಿಡ್ ವಾರ್ನರ್ (29) ರನ್ ಗಳಿಸಿ ಔಟಾದರು. ಬಳಿಕ ಬಂದ ಶಾಯ್ ಹೋಪ್ (33) ರಬಡಾಗೆ ವಿಕೆಟ್ ಒಪ್ಪಿಸಿ ಹೊರನಡೆದರು.
ನಂತರ ಬಂದ ನಾಯಕ ರಿಷಭ್ ಪಂತ್ (18) ರನ್ ಗಳಿಸಿ ವಿಕೆಟ್ ಒಪ್ಪಿಸಿ ಹೊರನಡೆದರು. ಅಕ್ಷರ್ ಪಟೇಲ್ (21) ಹಾಗೂ ಕೊನೆಯಲ್ಲಿ ಅಬ್ಬರಿಸಿದ ಅಭಿಷೇಕ್ ಪೊರೆಲ್ 10 ಎಸೆತಗಳಲ್ಲಿ 32 ರನ್ ಗಳಿಸಿ ತಂಡವನ್ನು ಸ್ಪಧಾತ್ಮಕ ಮೊತ್ತದತ್ತ ಕೊಂಡೊಯ್ದರು.
ಪಂಜಾಬ್ ಪರ ಹರ್ಷಲ್ ಪಟೇಲ್ ಮತ್ತು ಅರ್ಶ್ದೀಪ್ ಸಿಂಗ್ ತಲಾ 2 ವಿಕೆಟ್ ಪಡೆದರು.
ಪಂಜಾಬ್ ಕಿಂಗ್ಸ್ ಇನ್ನಿಂಗ್ಸ್: ಸ್ಪರ್ಧಾತ್ಮಕ ಮೊತ್ತ ಚೇಸ್ ಮಾಡಲು ಮುಂದಾದ ಪಂಜಾಬ್ಗೆ ಆರಂಭಿಕ ಆಘಾತ ಉಂಟಾಯಿತು. ಜಾನಿ ಬೇರ್ಸ್ಟೋ ಕೇವಲ (9) ರನ್ಗಳಿಸಿ ಮೊದಲ ವಿಕೆಟ್ ಒಪ್ಪಿಸಿ ಹೊರ ನಡೆದರು. ಬಳಿಕ ಬಂದ ಪ್ರಭ್ಸಿಮ್ರಾನ್, ನಾಯಕ ಶಿಖರ್ ಧವನ್ ಜೊತೆ ಇನ್ನಿಂಗ್ಸ್ ಕಟ್ಟಿದರು. ಈ ಇಬ್ಬರು ಕ್ರಮವಾಗಿ (26) ಮತ್ತು (22) ರನ್ ಬಾರಿಸಿ ಔಟಾದರು.
ನಂತರ ಜೊತೆಯಾದ ಇಂಗ್ಲೆಂಡ್ ಆಟಗಾರರಾದ ಸ್ಯಾಮ್ ಕರನ್ ಹಾಗೂ ದಾಂಡಿಗ ಲಿವಿಂಗ್ಸ್ಟೋನ್ ತಂಡದ ದಿಕ್ಕನ್ನೇ ಬದಲಿಸಿದರು. ಸ್ಯಾಮ್ ಕರನ್ 47 ಎಸೆತಗಳನ್ನು ಎದುರಿಸಿ 6 ಬೌಂಡರಿ 1 ಸಿಕ್ಸರ್ ಸಹಿತ 63 ರನ್ ಕೆಲಹಾಕಿದರು. ಕೊನೆಯಲ್ಲಿ ಅಬ್ಬರಿಸಿದ ಲಿವಿಂಗ್ಸ್ಟೋನ್ (38), ಕೊನೆಯ ೬ ಎಸೆತಗಳಲ್ಲಿ ನಾಲ್ಕು ರನ್ ಬೇಕಾಗಿದ್ದಾಗ ಸುಮಿತ್ ಕುಮಾರ್ ಎಸೆತವನ್ನು ಲಾಂಗ್ ಕಡೆ ಸಿಕ್ಸರ್ಗೆ ಅಟ್ಟುವ ಮೂಲಕ ತಂಡಕ್ಕೆ ಗೆಲುವು ತಂದುಕೊಟ್ಟರು.
ಡೆಲ್ಲಿ ಪರ ಕುಲ್ದೀಪ್ ಯಾದವ್, ಖಲೀಲ್ ಅಹ್ಮದ್ ತಲಾ ಎರಡು ವಿಕೆಟ್ ಕಬಳಿಸಿದರು.
ಪಂದ್ಯ ಶ್ರೇಷ್ಠ: ಸ್ಯಾಮ್ ಕರನ್
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…