ಕ್ರೀಡೆ

IPL-2024: ಡೆಲ್ಲಿ ವಿರುದ್ಧ ಗೆದ್ದು ಶುಭಾರಂಭ ಮಾಡಿದ ಪಂಜಾಬ್‌!

ಮೊಹಾಲಿ: ಇಲ್ಲಿನ ಮಹಾರಾಜ ಯದ್ವೀಂದ್ರ ಸಿಂಗ್‌ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಹದಿನೇಳನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್ ಲೀಗ್‌ನ ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಪಂಜಾಬ್‌ ಕಿಂಗ್ಸ್‌ 4 ವಿಕೆಟ್‌ಗಳ ಅಂತರದ ಗೆಲುವನ್ನು ದಾಖಲಿಸಿ ಶುಭಾರಂಭ ಮಾಡಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 174 ರನ್‌ ಕಲೆಹಾಕಿ ಎದುರಾಳಿ ಪಂಜಾಬ್‌ ಕಿಂಗ್ಸ್‌ ತಂಡಕ್ಕೆ ಗೆಲ್ಲಲು 175 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿದ ಪಂಜಾಬ್‌ ಕಿಂಗ್ಸ್‌ 19.2 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 177 ರನ್‌ ಕಲೆಹಾಕಿತು.

ಡೆಲ್ಲಿ ಇನ್ನಿಂಗ್ಸ್‌: ಡೆಲ್ಲಿ ಪರ ಆರಂಭಿಕರಾಗಿ ಬಂದ ಮಿಚೆಲ್ ಮಾರ್ಷ್ ಮತ್ತು ಡೇವಿಡ್ ವಾರ್ನರ್ ಜೋಡಿ ಉತ್ತಮ ಆಟವಾಡಿದರು. ಮಿಚೆಲ್ ಮಾರ್ಷ್ (20), ಡೇವಿಡ್ ವಾರ್ನರ್ (29) ರನ್‌ ಗಳಿಸಿ ಔಟಾದರು. ಬಳಿಕ ಬಂದ ಶಾಯ್ ಹೋಪ್ (33) ರಬಡಾಗೆ ವಿಕೆಟ್‌ ಒಪ್ಪಿಸಿ ಹೊರನಡೆದರು.

ನಂತರ ಬಂದ ನಾಯಕ ರಿಷಭ್‌ ಪಂತ್‌ (18) ರನ್ ಗಳಿಸಿ ವಿಕೆಟ್ ಒಪ್ಪಿಸಿ ಹೊರನಡೆದರು. ಅಕ್ಷರ್‌ ಪಟೇಲ್‌ (21) ಹಾಗೂ ಕೊನೆಯಲ್ಲಿ ಅಬ್ಬರಿಸಿದ ಅಭಿಷೇಕ್ ಪೊರೆಲ್ 10 ಎಸೆತಗಳಲ್ಲಿ 32 ರನ್ ಗಳಿಸಿ ತಂಡವನ್ನು ಸ್ಪಧಾತ್ಮಕ ಮೊತ್ತದತ್ತ ಕೊಂಡೊಯ್ದರು.

ಪಂಜಾಬ್‌ ಪರ ಹರ್ಷಲ್‌ ಪಟೇಲ್‌ ಮತ್ತು ಅರ್ಶ್‌ದೀಪ್‌ ಸಿಂಗ್‌ ತಲಾ 2 ವಿಕೆಟ್‌ ಪಡೆದರು.

ಪಂಜಾಬ್‌ ಕಿಂಗ್ಸ್‌ ಇನ್ನಿಂಗ್ಸ್‌: ಸ್ಪರ್ಧಾತ್ಮಕ ಮೊತ್ತ ಚೇಸ್‌ ಮಾಡಲು ಮುಂದಾದ ಪಂಜಾಬ್‌ಗೆ ಆರಂಭಿಕ ಆಘಾತ ಉಂಟಾಯಿತು. ಜಾನಿ ಬೇರ್‌ಸ್ಟೋ ಕೇವಲ (9) ರನ್‌ಗಳಿಸಿ ಮೊದಲ ವಿಕೆಟ್‌ ಒಪ್ಪಿಸಿ ಹೊರ ನಡೆದರು. ಬಳಿಕ ಬಂದ ಪ್ರಭ್‌ಸಿಮ್ರಾನ್‌, ನಾಯಕ ಶಿಖರ್‌ ಧವನ್‌ ಜೊತೆ ಇನ್ನಿಂಗ್ಸ್‌ ಕಟ್ಟಿದರು. ಈ ಇಬ್ಬರು ಕ್ರಮವಾಗಿ (26) ಮತ್ತು (22) ರನ್‌ ಬಾರಿಸಿ ಔಟಾದರು.

ನಂತರ ಜೊತೆಯಾದ ಇಂಗ್ಲೆಂಡ್‌ ಆಟಗಾರರಾದ ಸ್ಯಾಮ್‌ ಕರನ್‌ ಹಾಗೂ ದಾಂಡಿಗ ಲಿವಿಂಗ್‌ಸ್ಟೋನ್‌ ತಂಡದ ದಿಕ್ಕನ್ನೇ ಬದಲಿಸಿದರು. ಸ್ಯಾಮ್‌ ಕರನ್‌ 47 ಎಸೆತಗಳನ್ನು ಎದುರಿಸಿ 6 ಬೌಂಡರಿ 1 ಸಿಕ್ಸರ್‌ ಸಹಿತ 63 ರನ್‌ ಕೆಲಹಾಕಿದರು. ಕೊನೆಯಲ್ಲಿ ಅಬ್ಬರಿಸಿದ ಲಿವಿಂಗ್‌ಸ್ಟೋನ್‌ (38), ಕೊನೆಯ ೬ ಎಸೆತಗಳಲ್ಲಿ ನಾಲ್ಕು ರನ್‌ ಬೇಕಾಗಿದ್ದಾಗ ಸುಮಿತ್‌ ಕುಮಾರ್‌ ಎಸೆತವನ್ನು ಲಾಂಗ್‌ ಕಡೆ ಸಿಕ್ಸರ್‌ಗೆ ಅಟ್ಟುವ ಮೂಲಕ ತಂಡಕ್ಕೆ ಗೆಲುವು ತಂದುಕೊಟ್ಟರು.

ಡೆಲ್ಲಿ ಪರ ಕುಲ್ದೀಪ್‌ ಯಾದವ್‌, ಖಲೀಲ್‌ ಅಹ್ಮದ್‌ ತಲಾ ಎರಡು ವಿಕೆಟ್‌ ಕಬಳಿಸಿದರು.

ಪಂದ್ಯ ಶ್ರೇಷ್ಠ: ಸ್ಯಾಮ್‌ ಕರನ್‌

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

36 mins ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

53 mins ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

1 hour ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

1 hour ago

SIR ನೋಟಿಸ್: ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…

4 hours ago

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

9 hours ago