ಕ್ರೀಡೆ

IPL-2024: ಡೆಲ್ಲಿ ವಿರುದ್ಧ ಗೆದ್ದು ಶುಭಾರಂಭ ಮಾಡಿದ ಪಂಜಾಬ್‌!

ಮೊಹಾಲಿ: ಇಲ್ಲಿನ ಮಹಾರಾಜ ಯದ್ವೀಂದ್ರ ಸಿಂಗ್‌ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಹದಿನೇಳನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್ ಲೀಗ್‌ನ ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಪಂಜಾಬ್‌ ಕಿಂಗ್ಸ್‌ 4 ವಿಕೆಟ್‌ಗಳ ಅಂತರದ ಗೆಲುವನ್ನು ದಾಖಲಿಸಿ ಶುಭಾರಂಭ ಮಾಡಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 174 ರನ್‌ ಕಲೆಹಾಕಿ ಎದುರಾಳಿ ಪಂಜಾಬ್‌ ಕಿಂಗ್ಸ್‌ ತಂಡಕ್ಕೆ ಗೆಲ್ಲಲು 175 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿದ ಪಂಜಾಬ್‌ ಕಿಂಗ್ಸ್‌ 19.2 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 177 ರನ್‌ ಕಲೆಹಾಕಿತು.

ಡೆಲ್ಲಿ ಇನ್ನಿಂಗ್ಸ್‌: ಡೆಲ್ಲಿ ಪರ ಆರಂಭಿಕರಾಗಿ ಬಂದ ಮಿಚೆಲ್ ಮಾರ್ಷ್ ಮತ್ತು ಡೇವಿಡ್ ವಾರ್ನರ್ ಜೋಡಿ ಉತ್ತಮ ಆಟವಾಡಿದರು. ಮಿಚೆಲ್ ಮಾರ್ಷ್ (20), ಡೇವಿಡ್ ವಾರ್ನರ್ (29) ರನ್‌ ಗಳಿಸಿ ಔಟಾದರು. ಬಳಿಕ ಬಂದ ಶಾಯ್ ಹೋಪ್ (33) ರಬಡಾಗೆ ವಿಕೆಟ್‌ ಒಪ್ಪಿಸಿ ಹೊರನಡೆದರು.

ನಂತರ ಬಂದ ನಾಯಕ ರಿಷಭ್‌ ಪಂತ್‌ (18) ರನ್ ಗಳಿಸಿ ವಿಕೆಟ್ ಒಪ್ಪಿಸಿ ಹೊರನಡೆದರು. ಅಕ್ಷರ್‌ ಪಟೇಲ್‌ (21) ಹಾಗೂ ಕೊನೆಯಲ್ಲಿ ಅಬ್ಬರಿಸಿದ ಅಭಿಷೇಕ್ ಪೊರೆಲ್ 10 ಎಸೆತಗಳಲ್ಲಿ 32 ರನ್ ಗಳಿಸಿ ತಂಡವನ್ನು ಸ್ಪಧಾತ್ಮಕ ಮೊತ್ತದತ್ತ ಕೊಂಡೊಯ್ದರು.

ಪಂಜಾಬ್‌ ಪರ ಹರ್ಷಲ್‌ ಪಟೇಲ್‌ ಮತ್ತು ಅರ್ಶ್‌ದೀಪ್‌ ಸಿಂಗ್‌ ತಲಾ 2 ವಿಕೆಟ್‌ ಪಡೆದರು.

ಪಂಜಾಬ್‌ ಕಿಂಗ್ಸ್‌ ಇನ್ನಿಂಗ್ಸ್‌: ಸ್ಪರ್ಧಾತ್ಮಕ ಮೊತ್ತ ಚೇಸ್‌ ಮಾಡಲು ಮುಂದಾದ ಪಂಜಾಬ್‌ಗೆ ಆರಂಭಿಕ ಆಘಾತ ಉಂಟಾಯಿತು. ಜಾನಿ ಬೇರ್‌ಸ್ಟೋ ಕೇವಲ (9) ರನ್‌ಗಳಿಸಿ ಮೊದಲ ವಿಕೆಟ್‌ ಒಪ್ಪಿಸಿ ಹೊರ ನಡೆದರು. ಬಳಿಕ ಬಂದ ಪ್ರಭ್‌ಸಿಮ್ರಾನ್‌, ನಾಯಕ ಶಿಖರ್‌ ಧವನ್‌ ಜೊತೆ ಇನ್ನಿಂಗ್ಸ್‌ ಕಟ್ಟಿದರು. ಈ ಇಬ್ಬರು ಕ್ರಮವಾಗಿ (26) ಮತ್ತು (22) ರನ್‌ ಬಾರಿಸಿ ಔಟಾದರು.

ನಂತರ ಜೊತೆಯಾದ ಇಂಗ್ಲೆಂಡ್‌ ಆಟಗಾರರಾದ ಸ್ಯಾಮ್‌ ಕರನ್‌ ಹಾಗೂ ದಾಂಡಿಗ ಲಿವಿಂಗ್‌ಸ್ಟೋನ್‌ ತಂಡದ ದಿಕ್ಕನ್ನೇ ಬದಲಿಸಿದರು. ಸ್ಯಾಮ್‌ ಕರನ್‌ 47 ಎಸೆತಗಳನ್ನು ಎದುರಿಸಿ 6 ಬೌಂಡರಿ 1 ಸಿಕ್ಸರ್‌ ಸಹಿತ 63 ರನ್‌ ಕೆಲಹಾಕಿದರು. ಕೊನೆಯಲ್ಲಿ ಅಬ್ಬರಿಸಿದ ಲಿವಿಂಗ್‌ಸ್ಟೋನ್‌ (38), ಕೊನೆಯ ೬ ಎಸೆತಗಳಲ್ಲಿ ನಾಲ್ಕು ರನ್‌ ಬೇಕಾಗಿದ್ದಾಗ ಸುಮಿತ್‌ ಕುಮಾರ್‌ ಎಸೆತವನ್ನು ಲಾಂಗ್‌ ಕಡೆ ಸಿಕ್ಸರ್‌ಗೆ ಅಟ್ಟುವ ಮೂಲಕ ತಂಡಕ್ಕೆ ಗೆಲುವು ತಂದುಕೊಟ್ಟರು.

ಡೆಲ್ಲಿ ಪರ ಕುಲ್ದೀಪ್‌ ಯಾದವ್‌, ಖಲೀಲ್‌ ಅಹ್ಮದ್‌ ತಲಾ ಎರಡು ವಿಕೆಟ್‌ ಕಬಳಿಸಿದರು.

ಪಂದ್ಯ ಶ್ರೇಷ್ಠ: ಸ್ಯಾಮ್‌ ಕರನ್‌

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

7 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

8 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

9 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

10 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

11 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

11 hours ago