ಕ್ರೀಡೆ

ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ರಾಜಸ್ಥಾನ್‌ ರಾಯಲ್ಸ್‌ಗೆ ಗೆಲುವು

ಜೈಪುರ: ಇಲ್ಲಿನ ಸವಾಯಿ ಮಾನ್‌ಸಿಂಗ್‌ ಸ್ಟೇಡಿಯಂನಲ್ಲಿ ನಡೆದ 17ನೇ ಆವೃತ್ತಿಯ ಐಪಿಎಲ್‌ ಟೂರ್ನಿಯ 9ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ರಾಜಸ್ಥಾನ್‌ ರಾಯಲ್ಸ್‌ 12 ರನ್‌ಗಳ ಗೆಲುವು ಸಾಧಿಸಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡ ಡೆಲ್ಲಿ ಕ್ಯಾಪಿಟಲ್ಸ್‌ ಎದುರಾಳಿ ರಾಜಸ್ಥಾನ್‌ ರಾಯಲ್ಸ್‌ ತಂಡವನ್ನು ಮೊದಲು ಬ್ಯಾಟಿಂಗ್‌ ಮಾಡಲು ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್ ರಾಯಲ್ಸ್‌ ರಿಯಾನ್‌ ಪರಾಗ್‌ ಅಬ್ಬರದ ಆಟದ ನೆರವಿನಿಂದ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 185 ರನ್‌ ಕಲೆಹಾಕಿ ಡೆಲ್ಲಿ ಕ್ಯಾಪಿಟಲ್ಸ್‌ಗೆ 186 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಡೆಲ್ಲಿ ಕ್ಯಾಪಿಟಲ್ಸ್‌ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 173 ರನ್‌ ದಾಖಲಿಸಿತು.
ಕೊ
ರಾಜಸ್ಥಾನ್‌ ರಾಯಲ್ಸ್‌ ಇನ್ನಿಂಗ್ಸ್:‌ ತಂಡ 36 ರನ್‌ಗಳಿಗೆ ತನ್ನ ಮೊದಲ ಮೂರು ವಿಕೆಟ್‌ಗಳನ್ನು ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿತು. ಆರಂಭಿಕರಾದ ಯಶಸ್ವಿ ಜೈಸ್ವಾಲ್‌ 5 (7) ರನ್ ಮತ್ತು ಜೋಸ್‌ ಬಟ್ಲರ್‌ 11 (16) ರನ್‌ ಗಳಿಸಿ ಔಟ್‌ ಆದರೆ, ನಾಯಕ ಸಂಜು ಸ್ಯಾಮ್ಸನ್‌ 15 (14) ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದರು. ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಯಾನ್‌ ಪರಾಗ್‌ ರವಿಚಂದ್ರನ್‌ ಅಶ್ವಿನ್‌ ಜತೆಗೂಡಿ ತಂಡ ಸುಧಾರಿಸಿಕೊಳ್ಳುವಂತೆ ಮಾಡಿದರು. ಅಶ್ವಿನ್‌ 29 (19) ರನ್‌ ಗಳಿಸಿ ಹಾಗೂ ಧ್ರುವ್‌ ಜುರೆಲ್‌ 20 (12) ರನ್‌ ಗಳಿಸಿ ಔಟ್‌ ಆದರು. ಅಂತ್ಯದವರೆಗೂ ಹೋರಾಡಿದ ರಿಯಾನ್‌ ಪರಾಗ್‌ 45 ಎಸೆತಗಳಲ್ಲಿ 7 ಬೌಂಡರಿ ಮತ್ತು 6 ಸಿಕ್ಸರ್‌ ಸಹಿತ ಅಜೇಯ 84 ರನ್‌ ಬಾರಿಸಿದರು. ಶಿಮ್ರಾನ್‌ ಹೆಟ್ಮೈರ್‌ ಅಜೇಯ 14 (7) ರನ್‌ ಗಳಿಸಿದರು.

ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಪರ ಖಲೀಲ್‌ ಅಹ್ಮದ್‌, ಮುಖೇಶ್‌ ಕುಮಾರ್‌, ಎನ್ರಿಚ್‌ ನಾರ್ಕಿಯಾ, ಅಕ್ಷರ್‌ ಪಟೇಲ್‌ ಹಾಗೂ ಕುಲ್‌ದೀಪ್‌ ಯಾದವ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಡೆಲ್ಲಿ ಕ್ಯಾಪಿಟಲ್ಸ್‌ ಇನ್ನಿಂಗ್ಸ್:‌ ತಂಡದ ಪರ ಆರಂಭಿಕರಾಗಿ ಡೇವಿಡ್‌ ವಾರ್ನರ್‌ ಹಾಗೂ ಮಿಚೆಲ್‌ ಮಾರ್ಷ್‌ ಕಣಕ್ಕಿಳಿದರು. ಮಿಚೆಲ್‌ ಮಾರ್ಷ್‌ 23 (12) ರನ್‌ ಗಳಿಸಿದರೆ, ಡೇವಿಡ್‌ ವಾರ್ನರ್‌ 49 (35) ರನ್‌ ಗಳಿಸಿದರು. ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಕಿ ಭುಯಿ ಡಕ್‌ಔಟ್‌, ನಾಯಕ ರಿಷಭ್‌ ಪಂತ್‌ 28 (26) ರನ್, ಅಭಿಷೇಕ್‌ ಪೊರೆಲ್‌ 9 (10) ರನ್‌, ಅಕ್ಷರ್‌ ಪಟೇಲ್ ಅಜೇಯ 15 (13) ರನ್‌ ಮತ್ತು ಕೊನೆಯಲ್ಲಿ ಗೆಲುವಿನ ನಿರೀಕ್ಷೆ ಹುಟ್ಟಿಸಿದ್ದ ಟ್ರಿಸ್ಟನ್‌ ಸ್ಟಬ್ಸ್‌ ಅಜೇಯ 44 (23) ರನ್‌ ಬಾರಿಸಿದರು.

ರಾಜಸ್ಥಾನ್‌ ರಾಯಲ್ಸ್‌ ಪರ ನಾಂಡ್ರೆ ಬರ್ಗರ್‌ 2 ವಿಕೆಟ್‌, ಯುಜ್ವೇಂದ್ರ ಚಹಲ್‌ 2 ವಿಕೆಟ್‌ ಹಾಗೂ ಅವೇಶ್‌ ಖಾನ್‌ ಒಂದು ವಿಕೆಟ್‌ ಪಡೆದರು.

andolana

Recent Posts

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

11 hours ago

ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…

11 hours ago

ರೈತ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಬೇಕು: ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಗ್ರಹ

ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…

12 hours ago

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ…

12 hours ago

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್…

12 hours ago

ಹಾಸನ| ಮಗುವಿಗೆ ಜನ್ಮ ನೀಡಿದ ಬಾಲಕಿ: ಆರೋಪಿ ಬಂಧನ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್‌ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…

12 hours ago