ಜೈಪುರ: ಇಲ್ಲಿನ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆದ 17ನೇ ಆವೃತ್ತಿಯ ಐಪಿಎಲ್ ಟೂರ್ನಿಯ 9ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ 12 ರನ್ಗಳ ಗೆಲುವು ಸಾಧಿಸಿದೆ.
ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಡೆಲ್ಲಿ ಕ್ಯಾಪಿಟಲ್ಸ್ ಎದುರಾಳಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ರಿಯಾನ್ ಪರಾಗ್ ಅಬ್ಬರದ ಆಟದ ನೆರವಿನಿಂದ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 185 ರನ್ ಕಲೆಹಾಕಿ ಡೆಲ್ಲಿ ಕ್ಯಾಪಿಟಲ್ಸ್ಗೆ 186 ರನ್ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 173 ರನ್ ದಾಖಲಿಸಿತು.
ಕೊ
ರಾಜಸ್ಥಾನ್ ರಾಯಲ್ಸ್ ಇನ್ನಿಂಗ್ಸ್: ತಂಡ 36 ರನ್ಗಳಿಗೆ ತನ್ನ ಮೊದಲ ಮೂರು ವಿಕೆಟ್ಗಳನ್ನು ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿತು. ಆರಂಭಿಕರಾದ ಯಶಸ್ವಿ ಜೈಸ್ವಾಲ್ 5 (7) ರನ್ ಮತ್ತು ಜೋಸ್ ಬಟ್ಲರ್ 11 (16) ರನ್ ಗಳಿಸಿ ಔಟ್ ಆದರೆ, ನಾಯಕ ಸಂಜು ಸ್ಯಾಮ್ಸನ್ 15 (14) ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಯಾನ್ ಪರಾಗ್ ರವಿಚಂದ್ರನ್ ಅಶ್ವಿನ್ ಜತೆಗೂಡಿ ತಂಡ ಸುಧಾರಿಸಿಕೊಳ್ಳುವಂತೆ ಮಾಡಿದರು. ಅಶ್ವಿನ್ 29 (19) ರನ್ ಗಳಿಸಿ ಹಾಗೂ ಧ್ರುವ್ ಜುರೆಲ್ 20 (12) ರನ್ ಗಳಿಸಿ ಔಟ್ ಆದರು. ಅಂತ್ಯದವರೆಗೂ ಹೋರಾಡಿದ ರಿಯಾನ್ ಪರಾಗ್ 45 ಎಸೆತಗಳಲ್ಲಿ 7 ಬೌಂಡರಿ ಮತ್ತು 6 ಸಿಕ್ಸರ್ ಸಹಿತ ಅಜೇಯ 84 ರನ್ ಬಾರಿಸಿದರು. ಶಿಮ್ರಾನ್ ಹೆಟ್ಮೈರ್ ಅಜೇಯ 14 (7) ರನ್ ಗಳಿಸಿದರು.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಖಲೀಲ್ ಅಹ್ಮದ್, ಮುಖೇಶ್ ಕುಮಾರ್, ಎನ್ರಿಚ್ ನಾರ್ಕಿಯಾ, ಅಕ್ಷರ್ ಪಟೇಲ್ ಹಾಗೂ ಕುಲ್ದೀಪ್ ಯಾದವ್ ತಲಾ ಒಂದೊಂದು ವಿಕೆಟ್ ಪಡೆದರು.
ಡೆಲ್ಲಿ ಕ್ಯಾಪಿಟಲ್ಸ್ ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ಡೇವಿಡ್ ವಾರ್ನರ್ ಹಾಗೂ ಮಿಚೆಲ್ ಮಾರ್ಷ್ ಕಣಕ್ಕಿಳಿದರು. ಮಿಚೆಲ್ ಮಾರ್ಷ್ 23 (12) ರನ್ ಗಳಿಸಿದರೆ, ಡೇವಿಡ್ ವಾರ್ನರ್ 49 (35) ರನ್ ಗಳಿಸಿದರು. ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಕಿ ಭುಯಿ ಡಕ್ಔಟ್, ನಾಯಕ ರಿಷಭ್ ಪಂತ್ 28 (26) ರನ್, ಅಭಿಷೇಕ್ ಪೊರೆಲ್ 9 (10) ರನ್, ಅಕ್ಷರ್ ಪಟೇಲ್ ಅಜೇಯ 15 (13) ರನ್ ಮತ್ತು ಕೊನೆಯಲ್ಲಿ ಗೆಲುವಿನ ನಿರೀಕ್ಷೆ ಹುಟ್ಟಿಸಿದ್ದ ಟ್ರಿಸ್ಟನ್ ಸ್ಟಬ್ಸ್ ಅಜೇಯ 44 (23) ರನ್ ಬಾರಿಸಿದರು.
ರಾಜಸ್ಥಾನ್ ರಾಯಲ್ಸ್ ಪರ ನಾಂಡ್ರೆ ಬರ್ಗರ್ 2 ವಿಕೆಟ್, ಯುಜ್ವೇಂದ್ರ ಚಹಲ್ 2 ವಿಕೆಟ್ ಹಾಗೂ ಅವೇಶ್ ಖಾನ್ ಒಂದು ವಿಕೆಟ್ ಪಡೆದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…