ಜೈಪುರ: ಇಲ್ಲಿನ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆದ 17ನೇ ಆವೃತ್ತಿಯ ಐಪಿಎಲ್ ಟೂರ್ನಿಯ 9ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ 12 ರನ್ಗಳ ಗೆಲುವು ಸಾಧಿಸಿದೆ.
ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಡೆಲ್ಲಿ ಕ್ಯಾಪಿಟಲ್ಸ್ ಎದುರಾಳಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ರಿಯಾನ್ ಪರಾಗ್ ಅಬ್ಬರದ ಆಟದ ನೆರವಿನಿಂದ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 185 ರನ್ ಕಲೆಹಾಕಿ ಡೆಲ್ಲಿ ಕ್ಯಾಪಿಟಲ್ಸ್ಗೆ 186 ರನ್ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 173 ರನ್ ದಾಖಲಿಸಿತು.
ಕೊ
ರಾಜಸ್ಥಾನ್ ರಾಯಲ್ಸ್ ಇನ್ನಿಂಗ್ಸ್: ತಂಡ 36 ರನ್ಗಳಿಗೆ ತನ್ನ ಮೊದಲ ಮೂರು ವಿಕೆಟ್ಗಳನ್ನು ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿತು. ಆರಂಭಿಕರಾದ ಯಶಸ್ವಿ ಜೈಸ್ವಾಲ್ 5 (7) ರನ್ ಮತ್ತು ಜೋಸ್ ಬಟ್ಲರ್ 11 (16) ರನ್ ಗಳಿಸಿ ಔಟ್ ಆದರೆ, ನಾಯಕ ಸಂಜು ಸ್ಯಾಮ್ಸನ್ 15 (14) ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಯಾನ್ ಪರಾಗ್ ರವಿಚಂದ್ರನ್ ಅಶ್ವಿನ್ ಜತೆಗೂಡಿ ತಂಡ ಸುಧಾರಿಸಿಕೊಳ್ಳುವಂತೆ ಮಾಡಿದರು. ಅಶ್ವಿನ್ 29 (19) ರನ್ ಗಳಿಸಿ ಹಾಗೂ ಧ್ರುವ್ ಜುರೆಲ್ 20 (12) ರನ್ ಗಳಿಸಿ ಔಟ್ ಆದರು. ಅಂತ್ಯದವರೆಗೂ ಹೋರಾಡಿದ ರಿಯಾನ್ ಪರಾಗ್ 45 ಎಸೆತಗಳಲ್ಲಿ 7 ಬೌಂಡರಿ ಮತ್ತು 6 ಸಿಕ್ಸರ್ ಸಹಿತ ಅಜೇಯ 84 ರನ್ ಬಾರಿಸಿದರು. ಶಿಮ್ರಾನ್ ಹೆಟ್ಮೈರ್ ಅಜೇಯ 14 (7) ರನ್ ಗಳಿಸಿದರು.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಖಲೀಲ್ ಅಹ್ಮದ್, ಮುಖೇಶ್ ಕುಮಾರ್, ಎನ್ರಿಚ್ ನಾರ್ಕಿಯಾ, ಅಕ್ಷರ್ ಪಟೇಲ್ ಹಾಗೂ ಕುಲ್ದೀಪ್ ಯಾದವ್ ತಲಾ ಒಂದೊಂದು ವಿಕೆಟ್ ಪಡೆದರು.
ಡೆಲ್ಲಿ ಕ್ಯಾಪಿಟಲ್ಸ್ ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ಡೇವಿಡ್ ವಾರ್ನರ್ ಹಾಗೂ ಮಿಚೆಲ್ ಮಾರ್ಷ್ ಕಣಕ್ಕಿಳಿದರು. ಮಿಚೆಲ್ ಮಾರ್ಷ್ 23 (12) ರನ್ ಗಳಿಸಿದರೆ, ಡೇವಿಡ್ ವಾರ್ನರ್ 49 (35) ರನ್ ಗಳಿಸಿದರು. ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಕಿ ಭುಯಿ ಡಕ್ಔಟ್, ನಾಯಕ ರಿಷಭ್ ಪಂತ್ 28 (26) ರನ್, ಅಭಿಷೇಕ್ ಪೊರೆಲ್ 9 (10) ರನ್, ಅಕ್ಷರ್ ಪಟೇಲ್ ಅಜೇಯ 15 (13) ರನ್ ಮತ್ತು ಕೊನೆಯಲ್ಲಿ ಗೆಲುವಿನ ನಿರೀಕ್ಷೆ ಹುಟ್ಟಿಸಿದ್ದ ಟ್ರಿಸ್ಟನ್ ಸ್ಟಬ್ಸ್ ಅಜೇಯ 44 (23) ರನ್ ಬಾರಿಸಿದರು.
ರಾಜಸ್ಥಾನ್ ರಾಯಲ್ಸ್ ಪರ ನಾಂಡ್ರೆ ಬರ್ಗರ್ 2 ವಿಕೆಟ್, ಯುಜ್ವೇಂದ್ರ ಚಹಲ್ 2 ವಿಕೆಟ್ ಹಾಗೂ ಅವೇಶ್ ಖಾನ್ ಒಂದು ವಿಕೆಟ್ ಪಡೆದರು.
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…