ಜೈಪುರ: ಇಲ್ಲಿನ ಸವಾಯಿ ಮಾನ್ಸಿಂಗ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 17ನೇ ಆವೃತ್ತಿಯ ಐಪಿಎಲ್ನ ನಾಲ್ಕನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ 20 ರನ್ಗಳ ಗೆಲುವನ್ನು ದಾಖಲಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.
ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಅಬ್ಬರದ ಬ್ಯಾಟಿಂಗ್ ನೆರವಿನಿಂದ 20 ಓವರ್ಗಳಳಲ್ಲಿ 4 ವಿಕೆಟ್ ನಷ್ಟಕ್ಕೆ 193 ರನ್ ಕಲೆಹಾಕಿ ಎದುರಾಳಿ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಗೆಲ್ಲಲು 194 ರನ್ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಲಕ್ನೋ ಸೂಪರ್ ಜೈಂಟ್ಸ್ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 173 ರನ್ ಕಲೆಹಾಕಿತು.
ರಾಜಸ್ಥಾನ್ ರಾಯಲ್ಸ್ ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಹಾಗೂ ಜೋಸ್ ಬಟ್ಲರ್ ಅಬ್ಬರದ ಆರಂಭವನ್ನು ಕಟ್ಟಿಕೊಡುವಲ್ಲಿ ವಿಫಲರಾದರು. ಬಟ್ಲರ್ 11 (9) ರನ್ಗಳಿಗೆ ಔಟ್ ಆದರೆ, ಜೈಸ್ವಾಲ್ 24 (12) ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಹೀಗೆ ಮೊದಲೆರಡು ವಿಕೆಟ್ಗಳನ್ನು ಪವರ್ಪ್ಲೇನಲ್ಲಿಯೇ ಕಳೆದುಕೊಂಡ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸ್ಯಾಮ್ಸನ್ ಹಾಗೂ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಯಾನ್ ಪರಾಗ್ ಆಸರೆಯಾದರು. 52 ಎಸೆತಗಳಲ್ಲಿ 3 ಬೌಂಡರಿ ಹಾಗೂ 6 ಸಿಕ್ಸರ್ ಒಳಗೊಂಡಂತೆ 82 ರನ್ ಬಾರಿಸಿದ ಸಂಜು ಸ್ಯಾಮ್ಸನ್ ಅಜೇಯರಾಗಿ ಉಳಿದರು. ರಿಯಾನ್ ಪರಾಗ್ 29 ಎಸೆತಗಳಲ್ಲಿ 43 ರನ್ ಬಾರಿಸಿದರು. ಇನ್ನುಳಿದಂತೆ ಹೆಟ್ಮಾಯೆರ್ 5 (7) ರನ್ ಕಲೆಹಾಕಿದರೆ, 12 ಎಸೆತಗಳಲ್ಲಿ 20 ರನ್ ಬಾರಿಸಿದ ಧ್ರುವ್ ಜುರೆಲ್ ಅಜೇಯರಾಗಿ ಉಳಿದರು.
ಲಕ್ನೋ ಸೂಪರ್ ಜೈಂಟ್ಸ್ ಪರ ನವೀನ್ ಉಲ್ ಹಕ್ 2 ವಿಕೆಟ್ ಮತ್ತು ಮೊಹ್ಸಿನ್ ಖಾನ್ ಹಾಗೂ ರವಿ ಬಿಷ್ಣೋಯಿ ತಲಾ ಒಂದೊಂದು ವಿಕೆಟ್ ಪಡೆದರು.
ಲಕ್ನೋ ಸೂಪರ್ ಜೈಂಟ್ಸ್ ಇನ್ನಿಂಗ್ಸ್: ರಾಜಸ್ಥಾನ್ ನೀಡಿದ ಗುರಿಯನ್ನು ಬೆನ್ನಟ್ಟಿದ ಲಕ್ನೋ ಮೊದಲನೇ ಓವರ್ನಲ್ಲಿಯೇ ಕ್ವಿಂಟನ್ ಡಿಕಾಕ್ ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿತು. ಡಿಕಾಕ್ 4 (5) ರನ್ ಗಳಿಸಿ ಔಟ್ ಆದರೆ, ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ದೇವದತ್ ಪಡಿಕ್ಕಲ್ ಶೂನ್ಯ ಸುತ್ತಿದರು. ಆಯುಷ್ ಬದೋನಿ 1 (5) ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಇತ್ತ ವಿಕೆಟ್ಗಳು ಉರುಳುತ್ತಿದ್ದರೆ ಅತ್ತ ಏಕಾಂಗಿಯಾಗಿ ಹೋರಾಟ ನಡೆಸಿದ್ದ ಕೆಎಲ್ರಾಹುಲ್ಗೆ ದೀಪಕ್ ಹೂಡಾ ಕೈಜೋಡಿಸಿದರಾದರೂ 26 (13) ರನ್ಗಳಿಗೆ ನಿರ್ಗಮಿಸಿದರು. ಹೀಗೆ 60 ರನ್ಗಳಿಗೆ ತನ್ನ 4 ವಿಕೆಟ್ ಕಳೆದುಕೊಂಡಿದ್ದ ತಂಡಕ್ಕೆ ಐದನೇ ವಿಕೆಟ್ಗೆ ಜತೆಯಾದ ಕೆಎಲ್ ರಾಹುಲ್ ಹಾಗೂ ನಿಕೋಲಸ್ ಪೂರನ್ ಜೋಡಿ ಗೆಲುವಿನ ನಿರೀಕ್ಷೆ ಹುಟ್ಟಿಸಿತ್ತು. ಆದರೆ 17ನೇ ಓವರ್ನಲ್ಲಿ ಕೆಎಲ್ ರಾಹುಲ್ 58 (44) ರನ್ ಗಳಿಸಿದ್ದಾಗ ಔಟ್ ಆದರು. ಮಾರ್ಕಸ್ ಸ್ಟಾಯ್ನಿಸ್ 3 (4) ರನ್ ಗಳಿಸಿದರೆ, ಕೃನಾಲ್ ಪಾಂಡ್ಯ ಅಜೇಯ 3 (5) ರನ್ ಕಲೆಹಾಕಿದರು ಮತ್ತು ನಿಕೋಲಸ್ ಪೂರನ್ ಅಜೇಯ 64 (41) ರನ್ ಬಾರಿಸಿದರು.
ರಾಜಸ್ಥಾನ್ ರಾಯಲ್ಸ್ ಪರ ಟ್ರೆಂಟ್ ಬೌಲ್ಟ್ 2 ವಿಕೆಟ್ ಪಡೆದರೆ, ನಾಂಡ್ರೆ ಬರ್ಗರ್, ರವಿಚಂದ್ರನ್ ಅಶ್ವಿನ್, ಯುಜುವೇಂದ್ರ ಚಹಾಲ್ ಹಾಗೂ ಸಂದೀಪ್ ಶರ್ಮಾ ತಲಾ ಒಂದೊಂದು ವಿಕೆಟ್ ಪಡೆದರು.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…