ಕ್ರೀಡೆ

IPL 2024: ಎಲಿಮಿನೇಟರ್‌ ಸೋತ ಆರ್‌ಸಿಬಿ; ಕ್ವಾಲಿಫೈಯರ್‌ 2ಗೆ ರಾಜಸ್ಥಾನ್ ಲಗ್ಗೆ

ಅಹ್ಮದಾಬಾದ್:‌ ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ 17ನೇ ಆವೃತ್ತಿಯ ಐಪಿಎಲ್‌ನ ಎಲಿಮಿನೇಟರ್‌ ಪಂದ್ಯದಲ್ಲಿ ರಾಜಸ್ಥಾನ್‌ ರಾಯಲ್ಸ್‌ ತಂಡ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ವಿರುದ್ಧ 4 ವಿಕೆಟ್‌ಗಳ ಗೆಲುವನ್ನು ದಾಖಲಿಸುವುದರ ಮೂಲಕ ಕ್ಲಾಲಿಫೈಯರ್‌ 2 ಪಂದ್ಯಕ್ಕೆ ಅರ್ಹತೆ ಗಿಟ್ಟಿಸಿಕೊಂಡಿದೆ. ಸೋತ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತನ್ನ ಗೆಲುವಿನ ನಾಗಾಲೋಟವನ್ನು ಕೊನೆಗೊಳಿಸಿ ಟೂರ್ನಿಯಿಂದ ಹೊರಬಿದ್ದಿದೆ. ರಾಜಸ್ಥಾನ್‌ ರಾಯಲ್ಸ್‌ 24ರಂದು ನಡೆಯಲಿರುವ ಕ್ವಾಲಿಫೈಯರ್‌ 2  ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧ ಸೆಣಸಾಡಲಿದೆ.

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 172 ರನ್‌ ಕಲೆಹಾಕಿ ರಾಜಸ್ಥಾನ್‌ಗೆ 173 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ರಾಜಸ್ಥಾನ್‌ ರಾಯಲ್ಸ್‌ 19 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 174 ರನ್‌ ಕಲೆಹಾಕಿತು.

ಆರ್‌ಸಿಬಿ ಇನ್ನಿಂಗ್ಸ್:‌ ತಂಡದ ಪರ ಆರಂಭಿಕರಾಗಿ ವಿರಾಟ್‌ ಕೊಹ್ಲಿ ಹಾಗೂ ನಾಯಕ ಫಾಫ್‌ ಡುಪ್ಲೆಸಿಸ್‌ ಕಣಕ್ಕಿಳಿದರು. ಕೊಹ್ಲಿ 33 (24) ರನ್‌ ಗಳಿಸಿದರೆ, ಡುಪ್ಲೆಸಿಸ್‌ 17 (14) ರನ್‌ ಗಳಿಸಿದರು. ಇನ್ನುಳಿದಂತೆ ಕೆಮರಾನ್‌ ಗ್ರೀನ್‌ 27 (21) ರನ್‌, ರಜತ್‌ ಪಟಿದಾರ್‌ 34 (22) ರನ್‌ ಬಾರಿಸಿದರೆ, ಗ್ಲೆನ್‌ ಮ್ಯಾಕ್ಸ್‌ವೆಲ್‌ ಡಕ್‌ಔಟ್‌ ಆಗಿ ನಿರಾಸೆ ಮೂಡಿಸಿದರು. ದಿನೇಶ್‌ ಕಾರ್ತಿಕ್‌ 11 (13) ರನ್‌, ಮಹಿಪಾಲ್‌ ಲೊಮ್ರೊರ್‌ 32 (17) ರನ್‌, ಕರ್ಣ್‌ ಶರ್ಮಾ 5 (4) ರನ್‌ ಮತ್ತು ಸ್ವಪ್ನಿಲ್‌ ಸಿಂಗ್‌ ಅಜೇಯ 9 (4) ರನ್‌ ಕಲೆಹಾಕಿದರು.

ರಾಜಸ್ಥಾನ್‌ ರಾಯಲ್ಸ್‌ ಪರ ಅವೇಶ್‌ ಖಾನ್‌ 3 ವಿಕೆಟ್‌, ರವಿಚಂದ್ರನ್‌ ಅಶ್ವಿನ್‌ 2 ವಿಕೆಟ್‌, ಯುಜ್ವೇಂದ್ರ ಚಹಲ್‌, ಟ್ರೆಂಟ್‌ ಬೌಲ್ಟ್‌ ಹಾಗೂ ಸಂದೀಪ್ ಶರ್ಮಾ ತಲಾ ಒಂದೊಂದು ವಿಕೆಟ್‌ ಪಡೆದರು.

ರಾಜಸ್ಥಾನ್‌ ರಾಯಲ್ಸ್‌ ಇನ್ನಿಂಗ್ಸ್:‌ ತಂಡದ ಪರ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್‌ ಹಾಗೂ ಟಾಮ್‌ ಕೊಹ್ಲರ್‌-ಕ್ಯಾಡ್‌ಮೋರ್‌ ಕಣಕ್ಕಿಳಿದರು. ಕ್ಯಾಡ್‌ಮೋರ್‌ 20 (15) ರನ್‌ ಗಳಿಸಿದರೆ, ಜೈಸ್ವಾಲ್‌ 45 (30) ರನ್‌ ಗಳಿಸಿದರು. ಇನ್ನುಳಿದಂತೆ ನಾಯಕ ಸಂಜು ಸಾಮ್ಸನ್‌ 17 (13) ರನ್‌, ಮಧ್ಯಮ ಕ್ರಮಾಂಕದಲ್ಲಿ ಕೈಹಿಡಿದ ರಿಯಾನ್‌ ಪರಾಗ್‌ 36 (26) ರನ್‌, ಧ್ರುವ್‌ ಜುರೆಲ್‌ 8 (8) ರನ್‌, ಉತ್ತಮ ಪ್ರದರ್ಶನ ನೀಡಿದ ಶೆಮ್ರಾನ್‌ ಹೆಟ್ಮೇಯರ್‌ 26 (14) ರನ್‌, ಅಂತಿಮ ಹಂತದಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್‌ ಮಾಡಿದ ರೊವ್‌ಮನ್‌ ಪೊವೆಲ್‌ 16 ಅಜೇಯ (8) ರನ್‌ ಮತ್ತು ರವಿಚಂದ್ರನ್‌ ಅಶ್ವಿನ್‌ ಯಾವುದೇ ರನ್‌ ಗಳಿಸದೇ ಅಜೇಯರಾಗಿ ಉಳಿದರು.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಪರ ಮೊಹಮ್ಮದ್‌ ಸಿರಾಜ್‌ 2 ವಿಕೆಟ್‌, ಲಾಕಿ ಫರ್ಗ್ಯುಸನ್‌, ಕರ್ಣ್‌ ಶರ್ಮಾ ಮತ್ತು ಕೆಮರಾನ್‌ ಗ್ರೀನ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

2 hours ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

2 hours ago

ಎಮ್ಮೆ ನಿನಗೆ ಸಾಟಿ ಇಲ್ಲ…

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…

2 hours ago

ಭಾನುವಾರದ ಪುರವಣಿಗಳಲ್ಲಿ ಸಾಹಿತ್ಯ ಯಾಕೆ ಮಾಯ?

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…

2 hours ago

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

13 hours ago