ಅಹ್ಮದಾಬಾದ್: ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 17ನೇ ಆವೃತ್ತಿಯ ಐಪಿಎಲ್ನ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 4 ವಿಕೆಟ್ಗಳ ಗೆಲುವನ್ನು ದಾಖಲಿಸುವುದರ ಮೂಲಕ ಕ್ಲಾಲಿಫೈಯರ್ 2 ಪಂದ್ಯಕ್ಕೆ ಅರ್ಹತೆ ಗಿಟ್ಟಿಸಿಕೊಂಡಿದೆ. ಸೋತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಗೆಲುವಿನ ನಾಗಾಲೋಟವನ್ನು ಕೊನೆಗೊಳಿಸಿ ಟೂರ್ನಿಯಿಂದ ಹೊರಬಿದ್ದಿದೆ. ರಾಜಸ್ಥಾನ್ ರಾಯಲ್ಸ್ 24ರಂದು ನಡೆಯಲಿರುವ ಕ್ವಾಲಿಫೈಯರ್ 2 ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಸೆಣಸಾಡಲಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 172 ರನ್ ಕಲೆಹಾಕಿ ರಾಜಸ್ಥಾನ್ಗೆ 173 ರನ್ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ 19 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 174 ರನ್ ಕಲೆಹಾಕಿತು.
ಆರ್ಸಿಬಿ ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ವಿರಾಟ್ ಕೊಹ್ಲಿ ಹಾಗೂ ನಾಯಕ ಫಾಫ್ ಡುಪ್ಲೆಸಿಸ್ ಕಣಕ್ಕಿಳಿದರು. ಕೊಹ್ಲಿ 33 (24) ರನ್ ಗಳಿಸಿದರೆ, ಡುಪ್ಲೆಸಿಸ್ 17 (14) ರನ್ ಗಳಿಸಿದರು. ಇನ್ನುಳಿದಂತೆ ಕೆಮರಾನ್ ಗ್ರೀನ್ 27 (21) ರನ್, ರಜತ್ ಪಟಿದಾರ್ 34 (22) ರನ್ ಬಾರಿಸಿದರೆ, ಗ್ಲೆನ್ ಮ್ಯಾಕ್ಸ್ವೆಲ್ ಡಕ್ಔಟ್ ಆಗಿ ನಿರಾಸೆ ಮೂಡಿಸಿದರು. ದಿನೇಶ್ ಕಾರ್ತಿಕ್ 11 (13) ರನ್, ಮಹಿಪಾಲ್ ಲೊಮ್ರೊರ್ 32 (17) ರನ್, ಕರ್ಣ್ ಶರ್ಮಾ 5 (4) ರನ್ ಮತ್ತು ಸ್ವಪ್ನಿಲ್ ಸಿಂಗ್ ಅಜೇಯ 9 (4) ರನ್ ಕಲೆಹಾಕಿದರು.
ರಾಜಸ್ಥಾನ್ ರಾಯಲ್ಸ್ ಪರ ಅವೇಶ್ ಖಾನ್ 3 ವಿಕೆಟ್, ರವಿಚಂದ್ರನ್ ಅಶ್ವಿನ್ 2 ವಿಕೆಟ್, ಯುಜ್ವೇಂದ್ರ ಚಹಲ್, ಟ್ರೆಂಟ್ ಬೌಲ್ಟ್ ಹಾಗೂ ಸಂದೀಪ್ ಶರ್ಮಾ ತಲಾ ಒಂದೊಂದು ವಿಕೆಟ್ ಪಡೆದರು.
ರಾಜಸ್ಥಾನ್ ರಾಯಲ್ಸ್ ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಹಾಗೂ ಟಾಮ್ ಕೊಹ್ಲರ್-ಕ್ಯಾಡ್ಮೋರ್ ಕಣಕ್ಕಿಳಿದರು. ಕ್ಯಾಡ್ಮೋರ್ 20 (15) ರನ್ ಗಳಿಸಿದರೆ, ಜೈಸ್ವಾಲ್ 45 (30) ರನ್ ಗಳಿಸಿದರು. ಇನ್ನುಳಿದಂತೆ ನಾಯಕ ಸಂಜು ಸಾಮ್ಸನ್ 17 (13) ರನ್, ಮಧ್ಯಮ ಕ್ರಮಾಂಕದಲ್ಲಿ ಕೈಹಿಡಿದ ರಿಯಾನ್ ಪರಾಗ್ 36 (26) ರನ್, ಧ್ರುವ್ ಜುರೆಲ್ 8 (8) ರನ್, ಉತ್ತಮ ಪ್ರದರ್ಶನ ನೀಡಿದ ಶೆಮ್ರಾನ್ ಹೆಟ್ಮೇಯರ್ 26 (14) ರನ್, ಅಂತಿಮ ಹಂತದಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ಮಾಡಿದ ರೊವ್ಮನ್ ಪೊವೆಲ್ 16 ಅಜೇಯ (8) ರನ್ ಮತ್ತು ರವಿಚಂದ್ರನ್ ಅಶ್ವಿನ್ ಯಾವುದೇ ರನ್ ಗಳಿಸದೇ ಅಜೇಯರಾಗಿ ಉಳಿದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಮೊಹಮ್ಮದ್ ಸಿರಾಜ್ 2 ವಿಕೆಟ್, ಲಾಕಿ ಫರ್ಗ್ಯುಸನ್, ಕರ್ಣ್ ಶರ್ಮಾ ಮತ್ತು ಕೆಮರಾನ್ ಗ್ರೀನ್ ತಲಾ ಒಂದೊಂದು ವಿಕೆಟ್ ಪಡೆದರು.
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…
ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ…
ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…
ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…