ಕ್ರೀಡೆ

IPL 2024: ಆರ್‌ಸಿಬಿಯ ಹೊಸ ಅಧ್ಯಾಯ; ನಿರ್ಣಾಯಕ ಪಂದ್ಯದಲ್ಲಿ ಸಿಎಸ್‌ಕೆ ಸೋಲಿಸಿ ಪ್ಲೇಆಫ್‌ ಪ್ರವೇಶಿಸಿದ ಆರ್‌ಸಿಬಿ

ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 17 ನೇ ಐಪಿಎಲ್ ಆವೃತ್ತಿಯ 68ನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ 27 ರನ್‌ಗಳ ಗೆಲುವು ಸಾಧಿಸುವುದರ ಮೂಲಕ ಪ್ಲೇಆಫ್‌ ಪ್ರವೇಶಿಸಿದೆ. ರಾಯಲ್‌ ಚಾಲೆಂಜರ್ಸ್ ಬೆಂಗಳೂರು ಪ್ಲೇಆಫ್‌ ಪ್ರವೇಶಿಸಬೇಕಾದರೆ 18 ರನ್‌ಗಳಿಂದ ಗೆಲ್ಲಲೇಬೇಕಾಗಿದ್ದ ಅನಿವಾರ್ಯತೆ ಎದುರಾಗಿದ್ದಾಗ ಈ ಗೆಲುವನ್ನು ಕಂಡಿದ್ದು, ಚೆನ್ನೈ ಸೂಪರ್‌ ಕಿಂಗ್ಸ್‌ ಟೂರ್ನಿಯಿಂದ ಹೊರಬಿದ್ದಿದೆ ಹಾಗೂ ಆರ್‌ಸಿಬಿ ಪ್ಲೇಆಫ್‌ಗೆ ಲಗ್ಗೆ ಇಟ್ಟಿದೆ.

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟಾಪ್‌ ಆರ್ಡರ್‌ನ ಉತ್ತಮ ಬ್ಯಾಟಿಂಗ್‌ ನೆರವಿನಿಂದ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 218 ರನ್‌ ಕಲೆಹಾಕಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಕ್ಕೆ ಗೆಲ್ಲಲು 219 ರನ್‌ಗಳ ಗುರಿ ನೀಡಿತು. ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಚೆನ್ನೈ ಸೂಪರ್‌ ಕಿಂಗ್ಸ್‌ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 191 ರನ್‌ ಕಲೆಹಾಕಿತು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ನಾಯಕ ಫಾಫ್ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಕಣಕ್ಕಿಳಿದು ಉತ್ತಮ ಇನ್ನಿಂಗ್ಸ್ ಕಟ್ಟಿಕೊಟ್ಟರು. ಕೊಹ್ಲಿ 47 (29) ರನ್ ಗಳಿಸಿದರೆ, ಡುಪ್ಲೆಸಿಸ್ 54 (39) ರನ್ ಗಳಿಸಿದರು‌. ಮಧ್ಯಮ ಕ್ರಮಾಂಕದಲ್ಲಿ ಅಬ್ಬರಿಸಿದ ರಜತ್‌ ಪಟಿದಾರ್‌ 41 (23) ರನ್‌ ಮತ್ತು ಕೆಮರಾನ್‌ ಗ್ರೀನ್‌ ಅಜೇಯ 38 (17) ರನ್‌ ಬಾರಿಸಿದರು. ಇನ್ನುಳಿದಂತೆ ದಿನೇಶ್‌ ಕಾರ್ತಿಕ್‌ 14 (6) ರನ್‌, ಗ್ಲೆನ್‌ ಮ್ಯಾಕ್ಸ್‌ವೆಲ್‌ 16 (5) ರನ್‌ ಮತ್ತು ಮಹಿಪಾಲ್‌ ಲೊಮ್ರೊರ್‌ ಒಂದು ಎಸೆತ ಎದುರಿಸಿ ಯಾವುದೇ ರನ್‌ ಗಳಿಸದೇ ಅಜೇಯರಾಗಿ ಉಳಿದರು.

ಚೆನ್ನೈ ಸೂಪರ್‌ ಕಿಂಗ್ಸ್‌ ಪರ ಶಾರ್ದೂಲ್‌ ಠಾಕೂರ್‌ 2 ವಿಕೆಟ್ ಮತ್ತು ಮಿಚೆಲ್‌ ಸ್ಯಾಂಟ್ನರ್‌ ಹಾಗೂ ತುಷಾರ್‌ ದೇಶಪಾಂಡೆ ತಲಾ ಒಂದೊಂದು ವಿಕೆಟ್‌ ಪಡೆದರು.

ಚೆನ್ನೈ ಸೂಪರ್‌ ಕಿಂಗ್ಸ್‌ ಇನ್ನಿಂಗ್ಸ್: ಆರ್‌ಸಿಬಿ ನೀಡಿದ ಗುರಿಯನ್ನು ಬೆನ್ನಟ್ಟಲು ಯತ್ನಿಸಿದ ಚೆನ್ನೈ ಪರ ಆರಂಭಿಕರಾಗಿ ನಾಯಕ ರುತುರಾಜ್‌ ಗಾಯಕ್ವಾಡ್‌ ಮತ್ತು ರಚಿನ್‌ ರವೀಂದ್ರ ಕಣಕ್ಕಿಳಿದರು. ರುತುರಾಜ್‌ ಗಾಯಕ್ವಾಡ್‌ ಗೋಲ್ಡನ್‌ ಡಕ್‌ಔಟ್‌ ಆದರೆ, ಅಬ್ಬರಿಸಿದ ರಚಿನ್‌ ರವೀಂದ್ರ 61 (37) ರನ್‌ ಗಳಿಸಿದರು. ಇನ್ನುಳಿದಂತೆ ಡೇರಿಲ್‌ ಮಿಚೆಲ್‌ 4 (6) ರನ್‌, ಅಜಿಂಕ್ಯಾ ರಹಾನೆ 33 (22) ರನ್‌, ಶಿವಮ್‌ ದುಬೆ 7 (15) ರನ್‌, ಮಿಚೆಲ್‌ ಸ್ಯಾಂಟ್ನರ್‌ 3 (4) ರನ್‌, ಶಾರ್ದೂಲ್‌ ಠಾಕೂರ್‌ ಅಜೇಯ 1 (2) ರನ್‌ ಗಳಿಸಿದರು. ಅಬ್ಬರಿಸಿದ ಎಂಎಸ್ ಧೋನಿ 25 (13) ರನ್‌ ಹಾಗೂ ರವೀಂದ್ರ ಜಡೇಜಾ ಅಜೇಯ 42 22) ರನ್‌ ಗಳಿಸಿದರಾದರೂ ತಂಡವನ್ನು ಪ್ಲೇಆಫ್‌ ತಲುಪಿಸಲಾಗಲಿಲ್ಲ.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಪರ ಯಶ್‌ ದಯಾಳ್‌ 2, ಗ್ಲೆನ್‌ ಮ್ಯಾಕ್ಸ್‌ವೆಲ್‌, ಮೊಹಮ್ಮದ್‌ ಸಿರಾಜ್‌, ಲಾಕಿ ಫರ್ಗ್ಯುಸನ್‌ ಹಾಗೂ ಕೆಮರಾನ್‌ ಗ್ರೀನ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

1 hour ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

2 hours ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

2 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

2 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

4 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

4 hours ago