ಕ್ರೀಡೆ

IPL 2024: ಆರ್‌ಸಿಬಿಯ ಹೊಸ ಅಧ್ಯಾಯ; ನಿರ್ಣಾಯಕ ಪಂದ್ಯದಲ್ಲಿ ಸಿಎಸ್‌ಕೆ ಸೋಲಿಸಿ ಪ್ಲೇಆಫ್‌ ಪ್ರವೇಶಿಸಿದ ಆರ್‌ಸಿಬಿ

ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 17 ನೇ ಐಪಿಎಲ್ ಆವೃತ್ತಿಯ 68ನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ 27 ರನ್‌ಗಳ ಗೆಲುವು ಸಾಧಿಸುವುದರ ಮೂಲಕ ಪ್ಲೇಆಫ್‌ ಪ್ರವೇಶಿಸಿದೆ. ರಾಯಲ್‌ ಚಾಲೆಂಜರ್ಸ್ ಬೆಂಗಳೂರು ಪ್ಲೇಆಫ್‌ ಪ್ರವೇಶಿಸಬೇಕಾದರೆ 18 ರನ್‌ಗಳಿಂದ ಗೆಲ್ಲಲೇಬೇಕಾಗಿದ್ದ ಅನಿವಾರ್ಯತೆ ಎದುರಾಗಿದ್ದಾಗ ಈ ಗೆಲುವನ್ನು ಕಂಡಿದ್ದು, ಚೆನ್ನೈ ಸೂಪರ್‌ ಕಿಂಗ್ಸ್‌ ಟೂರ್ನಿಯಿಂದ ಹೊರಬಿದ್ದಿದೆ ಹಾಗೂ ಆರ್‌ಸಿಬಿ ಪ್ಲೇಆಫ್‌ಗೆ ಲಗ್ಗೆ ಇಟ್ಟಿದೆ.

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟಾಪ್‌ ಆರ್ಡರ್‌ನ ಉತ್ತಮ ಬ್ಯಾಟಿಂಗ್‌ ನೆರವಿನಿಂದ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 218 ರನ್‌ ಕಲೆಹಾಕಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಕ್ಕೆ ಗೆಲ್ಲಲು 219 ರನ್‌ಗಳ ಗುರಿ ನೀಡಿತು. ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಚೆನ್ನೈ ಸೂಪರ್‌ ಕಿಂಗ್ಸ್‌ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 191 ರನ್‌ ಕಲೆಹಾಕಿತು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ನಾಯಕ ಫಾಫ್ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಕಣಕ್ಕಿಳಿದು ಉತ್ತಮ ಇನ್ನಿಂಗ್ಸ್ ಕಟ್ಟಿಕೊಟ್ಟರು. ಕೊಹ್ಲಿ 47 (29) ರನ್ ಗಳಿಸಿದರೆ, ಡುಪ್ಲೆಸಿಸ್ 54 (39) ರನ್ ಗಳಿಸಿದರು‌. ಮಧ್ಯಮ ಕ್ರಮಾಂಕದಲ್ಲಿ ಅಬ್ಬರಿಸಿದ ರಜತ್‌ ಪಟಿದಾರ್‌ 41 (23) ರನ್‌ ಮತ್ತು ಕೆಮರಾನ್‌ ಗ್ರೀನ್‌ ಅಜೇಯ 38 (17) ರನ್‌ ಬಾರಿಸಿದರು. ಇನ್ನುಳಿದಂತೆ ದಿನೇಶ್‌ ಕಾರ್ತಿಕ್‌ 14 (6) ರನ್‌, ಗ್ಲೆನ್‌ ಮ್ಯಾಕ್ಸ್‌ವೆಲ್‌ 16 (5) ರನ್‌ ಮತ್ತು ಮಹಿಪಾಲ್‌ ಲೊಮ್ರೊರ್‌ ಒಂದು ಎಸೆತ ಎದುರಿಸಿ ಯಾವುದೇ ರನ್‌ ಗಳಿಸದೇ ಅಜೇಯರಾಗಿ ಉಳಿದರು.

ಚೆನ್ನೈ ಸೂಪರ್‌ ಕಿಂಗ್ಸ್‌ ಪರ ಶಾರ್ದೂಲ್‌ ಠಾಕೂರ್‌ 2 ವಿಕೆಟ್ ಮತ್ತು ಮಿಚೆಲ್‌ ಸ್ಯಾಂಟ್ನರ್‌ ಹಾಗೂ ತುಷಾರ್‌ ದೇಶಪಾಂಡೆ ತಲಾ ಒಂದೊಂದು ವಿಕೆಟ್‌ ಪಡೆದರು.

ಚೆನ್ನೈ ಸೂಪರ್‌ ಕಿಂಗ್ಸ್‌ ಇನ್ನಿಂಗ್ಸ್: ಆರ್‌ಸಿಬಿ ನೀಡಿದ ಗುರಿಯನ್ನು ಬೆನ್ನಟ್ಟಲು ಯತ್ನಿಸಿದ ಚೆನ್ನೈ ಪರ ಆರಂಭಿಕರಾಗಿ ನಾಯಕ ರುತುರಾಜ್‌ ಗಾಯಕ್ವಾಡ್‌ ಮತ್ತು ರಚಿನ್‌ ರವೀಂದ್ರ ಕಣಕ್ಕಿಳಿದರು. ರುತುರಾಜ್‌ ಗಾಯಕ್ವಾಡ್‌ ಗೋಲ್ಡನ್‌ ಡಕ್‌ಔಟ್‌ ಆದರೆ, ಅಬ್ಬರಿಸಿದ ರಚಿನ್‌ ರವೀಂದ್ರ 61 (37) ರನ್‌ ಗಳಿಸಿದರು. ಇನ್ನುಳಿದಂತೆ ಡೇರಿಲ್‌ ಮಿಚೆಲ್‌ 4 (6) ರನ್‌, ಅಜಿಂಕ್ಯಾ ರಹಾನೆ 33 (22) ರನ್‌, ಶಿವಮ್‌ ದುಬೆ 7 (15) ರನ್‌, ಮಿಚೆಲ್‌ ಸ್ಯಾಂಟ್ನರ್‌ 3 (4) ರನ್‌, ಶಾರ್ದೂಲ್‌ ಠಾಕೂರ್‌ ಅಜೇಯ 1 (2) ರನ್‌ ಗಳಿಸಿದರು. ಅಬ್ಬರಿಸಿದ ಎಂಎಸ್ ಧೋನಿ 25 (13) ರನ್‌ ಹಾಗೂ ರವೀಂದ್ರ ಜಡೇಜಾ ಅಜೇಯ 42 22) ರನ್‌ ಗಳಿಸಿದರಾದರೂ ತಂಡವನ್ನು ಪ್ಲೇಆಫ್‌ ತಲುಪಿಸಲಾಗಲಿಲ್ಲ.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಪರ ಯಶ್‌ ದಯಾಳ್‌ 2, ಗ್ಲೆನ್‌ ಮ್ಯಾಕ್ಸ್‌ವೆಲ್‌, ಮೊಹಮ್ಮದ್‌ ಸಿರಾಜ್‌, ಲಾಕಿ ಫರ್ಗ್ಯುಸನ್‌ ಹಾಗೂ ಕೆಮರಾನ್‌ ಗ್ರೀನ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಬಂಡೀಪುರ ಅರಣ್ಯದಲ್ಲಿ ನೀರಿನ ಸಮಸ್ಯೆಗೆ ಬ್ರೇಕ್: ಸೋಲಾರ್‌ ಬೋರ್‌ವೆಲ್‌ ಮೂಲಕ ನೀರು ತುಂಬಿಸಲು ಪ್ಲಾನ್‌

ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್‌ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…

14 mins ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿದೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.…

38 mins ago

ನಟಿ ರನ್ಯಾ ರಾವ್‌ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌

ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್‌ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…

58 mins ago

ಕೌಟುಂಬಿಕ ಕಲಹ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…

1 hour ago

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಎಚ್.ಡಿ.ಕುಮಾರಸ್ವಾಮಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…

2 hours ago

ಓದುಗರ ಪತ್ರ: ಸಮತೋಲನದ ಬಜೆಟ್!…

ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…

5 hours ago