ಕ್ರೀಡೆ

IPL 2024: ವಿರಾಟ್‌ ಕೊಹ್ಲಿ ಅರ್ಧಶತಕ ವ್ಯರ್ಥ; ಕೆಕೆಆರ್‌ ಮುಂದೆ ಮಂಡಿಯೂರಿದ ಆರ್‌ಸಿಬಿ!

ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ 17ನೇ ಆವೃತ್ತಿಯ ಐಪಿಎಲ್‌ಲೀಗ್‌ನ 10 ನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಕೊಲ್ಕತ್ತಾ ನೈಟ್‌ ರೈಡರ್ಸ್‌ ನಡುವಿನ ಪಂದ್ಯದಲ್ಲಿ ಕೆಕೆಆರ್‌ 7 ವಿಕೆಟ್‌ಗಳ ಸುಲಭ ಜಯ ದಾಖಲಿಸಿದ್ದಾರೆ. ಆ ಮೂಲಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಜೇಯ ಓಟ ಮುಂದುವರೆಸಿದ್ದಾರೆ.

2016 ರಿಂದ ಇಲ್ಲಿಯವರೆಗೆ ಇತ್ತಂಡಗಳು 6 ಬಾರಿ ಮುಖಾಮುಖಿಯಾಗಿದ್ದು, ಒಂದೇ ಒಂದು ಪಂದ್ಯವನ್ನು ಸಹಾ ಕೊಲ್ಕತ್ತಾ ಸೋತಿಲ್ಲ. ಆರ್‌ಸಿಬಿ ಮೇಲಿನ ಅಜೇಯ ಓಟ ಮುಂದುವರೆಸಿದ್ದಾರೆ.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಆರ್‌ಸಿಬಿ ತಂಡವು ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 182 ರನ್‌ ಕಲೆಹಾಕಿ 183 ರನ್‌ಗಳ ಗುರಿ ನೀಡಿತು. ಇದನ್ನು ಬೆನ್ನಟ್ಟಿದ ಕೆಕೆಆರ್‌ ತಂಡ ನಿಗದಿತ 16.5 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 186 ರನ್‌ ಕಲೆ ಹಾಕಿ ಗೆದ್ದು ಬೀಗಿತು.

ಆರ್‌ಸಿಬಿ ಇನ್ನಿಂಗ್ಸ್‌: ಆರ್‌ಸಿಬಿ ಪರವಾಗಿ ಆರಂಭಿಕರಾಗಿ ಬಂದ ನಾಯಕ ಫಾಫ್‌ (8) ಬೇಗನೆ ನಿರ್ಗಮಿಸಿದರು. ಬಳಿಕ ಬಂದ ಕ್ಯಾಮರೋನ್‌ ಗ್ರೀನ್‌ (33) ಮತ್ತು ಗ್ಲೇನ್‌ ಮ್ಯಾಕ್ಸ್‌ವೆಲ್‌ (28) ಕೊಂಚ ಕಾಡಿದರು. ರಜತ್‌ ಪಟಿದರ್‌ (3), ಅನುಜ್‌ ರಾವತ್‌ (3), ಕೊನೆಯಲ್ಲಿ ಅಬ್ಬರಿಸಿದ ದಿನೇಶ್‌ ಕಾರ್ತಿಕ್‌ (20) ಕ್ಯಾಮಿಯೋ ನೀಡಿದರು.

ವಿರಾಟ್‌ ಇನ್ನಿಂಗ್ಸ್‌: ಇತ್ತ ಆರಂಭದಲ್ಲೇ ವಿಕೆಟ್‌ ಕಳೆದುಕೊಂಡ ಆರ್‌ಸಿಬಿಗೆ ಮತ್ತೊಮ್ಮೆ ರನ್‌ ಮೆಷಿನ್‌ ಆಸರೆಯಾದರು. ಒಂದೆಡೆ ವಿಕೆಟ್‌ ಬೀಳುತ್ತಿದ್ದರೂ ಮತ್ತೊಂದೆಡೆ ಗಟ್ಟಿಯಾಗಿ ನಿಂತು ಇನ್ನಿಂಗ್ಸ್‌ ಕಟ್ಟಿದ ಕೊಹ್ಲಿ ಕೆಕೆಆರ್‌ ಬೌಲರ್‌ಗಳನ್ನು ಕಾಡಿದರು. ಸಂಪೂರ್ಣ ಇನ್ನಿಂಗ್ಸ್‌ ನಾಟ್‌ಔಟ್‌ ಆದ ಕೊಹ್ಲಿ ತಂಡವನ್ನು ಸ್ಪರ್ಧಾತ್ಮಕ ಮೊತ್ತದತ್ತ ಕೊಂಡೊಯ್ದರು. ಅವರು ತಮ್ಮ ಇನ್ನಿಂಗ್ಸ್‌ನಲ್ಲಿ 59 ಎಸೆತಗಳನ್ನು ಎದುರಿಸಿ 4 ಬೌಂಡರಿ ಮತ್ತು 4 ಸಿಕ್ಸರ್‌ ಸಹಿತ 83 ರನ್‌ ಕಲೆಹಾಕಿದರು.

ಕೆಕೆಆರ್ ಪರ ಹರ್ಷಿತ್‌ ರಾಣಾ ಮತ್ತು ರಸೆಲ್ ಅವರು ತಲಾ ಎರಡು ವಿಕೆಟ್ ಕಬಳಿಸಿದರು. ಸುನಿಲ್ ನರೇನ್ ಒಂದು ವಿಕೆಟ್ ಪಡೆದು ಗಮನ ಸೆಳೆದರು

ಕೊಲ್ಕತ್ತಾ ಇನಿಂಗ್ಸ್: ಅರ್ಸಿಬಿ ನೀಡಿದ ಸ್ಪರ್ಧಾತ್ಮಕ ಮೊತ್ತ ಬೆನ್ನಟ್ಟಿದ ಕೆಕೆಆರ್ ಉತ್ತಮ ಆರಂಭ ಪಡೆಯಿತು. ಅರಂಭಿಕರಾಗಿ ಬಂದ ಫಿಲಿಪ್ ಸಾಲ್ಟ್ (30) ಮತ್ತು ಬೌಲರ್ ಕಂ ಬ್ಯಾಟ್ಸ್‌ಮನ್‌ ಸುನೀಲ್‌ ನರೈನ್‌ 22 ಎಸೆತಗಳಲ್ಲಿ 2 ಬೌಂಡರಿ 5 ಸಿಕ್ಸರ್ ಸಹಿತ 47 ರನ್ ಬಾರಿಸಿದರು. ಈ ಜೋಡಿ ಮೊದಲ ವಿಕೆಟ್‌ಗೆ 86 ರನ್ ಗಳ ಭರ್ಜರಿ ಜೊತೆಯಾಟ ನೀಡಿದರು.

ಈ ಇಬ್ಬರು ಆರಂಭಿಕರ ನಿರ್ಗಮನದ ನಂತರ ಜೊತೆಯಾದ ಶ್ರೇಯಸ್ ಆಯ್ಯರ್ ಹಾಗೂ ವೆಂಕಟೇಶ್ ಅಯ್ಯರ್ ಪಂದ್ಯವನ್ನು ಕೆಕೆಆರ್ ನತ್ತ ವಾಲಿಸಿದರು. ವೆಂಕಟೇಶ್‌ ಅಯ್ಯರ್‌ 30 ಎಸೆತಗಳಲ್ಲಿ 3 ಬೌಂಡರಿ ಮತ್ತು 4 ಸಿಕ್ಸರ್‌ ಸೇರಿದಂತೆ 50 ರನ್‌ ಬಾರಿಸಿದರೇ, ನಾಯಕ ಶ್ರೇಯಸ್‌ ಅಯ್ಯರ್‌ ಓಟಾಗದೇ (39) ರನ್‌ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ರಿಂಕು ಸಿಂಗ್‌ ಗೆಲುವಿಗೆ (5) ರನ್‌ ಕಾಣಿಕೆ ನೀಡಿದರು.

ಆರ್‌ಸಿಬಿ ಪರ ವಿಜಯ್‌ ಕುಮಾರ್‌, ಮಾಯಾಂಕ್‌ ಡಾಗರ್‌ ಮತ್ತು ಯಶ್‌ ದಯಾಳ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ವೋಟ್‌ ಚೋರಿ | ಸತ್ಯದ ಬೆನ್ನಿಗೆ ನಿಂತು ಮೋದಿ, ಶಾ, ಆರ್‌ಎಸ್‌ಎಸ್‌ ಅನ್ನು ಖಾಲಿ ಮಾಡಿಸುತ್ತೇವೆ : ಕಾಂಗ್ರೆಸ್‌ ಶಪಥ

ಹೊಸದಿಲ್ಲಿ : ವೋಟ್ ಚೋರಿ ವಿರುದ್ಧ ಮತ್ತೆ ರಾಷ್ಟ್ರ ಮಟ್ಟದಲ್ಲಿ ಅಬ್ಬರಿಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮತ್ತು…

34 mins ago

ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಬೆಂಗಳೂರು : ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ(95) ಅವರು ನಿಧನರಾಗಿದ್ದಾರೆ.…

2 hours ago

ಆಯ್ತಪ್ಪ ನಾಳೆ ʻಗ್ಯಾರಂಟಿʼ ನಿಲ್ಲಿಸಿತ್ತೀವಿ ಬಿಡಿ : ಪರಮೇಶ್ವರ್‌ ಹೀಗೆ ಹೇಳಿದ್ಯಾಕೆ?

ತುಮಕೂರು : ವಿರೋಧ ಪಕ್ಷದವರು ಪದೇ ಪದೆ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ವಿರೋಧಿಸುತ್ತಾರೆ. ಗ್ಯಾರಂಟಿ ಕೊಡದೆ ರಸ್ತೆ,…

2 hours ago

ಇಂದಿರಾಗಾಂಧಿ ತ್ಯಾಗದ ಮುಂದೆ ನಮ್ಮದೇನು ಇಲ್ಲ : ಖರ್ಗೆ ಭಾವುಕ ನುಡಿ

ಹೊಸದಿಲ್ಲಿ : ಇಂದು ನನ್ನ ಮಗನಿಗೆ ಎಂಟು ಗಂಟೆಯ ಆಪರೇಷನ್‌ ಇತ್ತು. ಪತ್ನಿ, ಮಗಳು ಎಲ್ಲರೂ ಫೋನ್‌ ಮಾಡಿ ಬಹಳ…

2 hours ago

ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ ; ಸಾರ್ವಜನಿಕರಲ್ಲಿ ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ!

ಮೈಸೂರು : ನಿರ್ದಿಷ್ಟ ಬ್ರಾಂಡ್‌ನ ಮೊಟ್ಟೆಗಳಲ್ಲಿ ಕ್ಯಾನ್ಸರ್‌ಗೆ ಕಾರಣವಾಗುವ 'ಜಿನೋಟಾಕ್ಸಿಕ್ ಅಂಶ' ಪತ್ತೆಯಾಗಿದೆ ಎಂದು ಹೇಳುವ ವೈರಲ್ ವಿಡಿಯೋ ಇದೀಗ…

2 hours ago

ಯತ್ನಾಳ್‌, ಸಂತೋಷ್‌ ಲಾಡ್‌ ಮಧ್ಯ ಸೈದ್ಧಾಂತಿಕ ವಾರ್‌ : ಶಿವಾಜಿ ಮುಸ್ಮಿಂ ವಿರೋಧಿಗಳಲ್ಲ ; ಲಾಡ್‌

ಬೆಳಗಾವಿ : ಮರಾಠರು ಮುಸ್ಲಿಂ ವಿರೋಧಿ ಅಂತ‌ ಹಣೆಪಟ್ಟಿ ಕಟ್ಟಿಕೊಂಡಿದ್ದೇವೆ. ನಾವು ಮೊಘಲರ ವಿರುದ್ಧ ಇದ್ದೆವು. ಆದರೆ ಮುಸ್ಲಿಂರ ವಿರೋಧಿಗಳಾಗಿರಲಿಲ್ಲ.…

3 hours ago