ಕ್ರೀಡೆ

IPL 2024: ವಿರಾಟ್‌ ಕೊಹ್ಲಿ ಅರ್ಧಶತಕ ವ್ಯರ್ಥ; ಕೆಕೆಆರ್‌ ಮುಂದೆ ಮಂಡಿಯೂರಿದ ಆರ್‌ಸಿಬಿ!

ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ 17ನೇ ಆವೃತ್ತಿಯ ಐಪಿಎಲ್‌ಲೀಗ್‌ನ 10 ನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಕೊಲ್ಕತ್ತಾ ನೈಟ್‌ ರೈಡರ್ಸ್‌ ನಡುವಿನ ಪಂದ್ಯದಲ್ಲಿ ಕೆಕೆಆರ್‌ 7 ವಿಕೆಟ್‌ಗಳ ಸುಲಭ ಜಯ ದಾಖಲಿಸಿದ್ದಾರೆ. ಆ ಮೂಲಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಜೇಯ ಓಟ ಮುಂದುವರೆಸಿದ್ದಾರೆ.

2016 ರಿಂದ ಇಲ್ಲಿಯವರೆಗೆ ಇತ್ತಂಡಗಳು 6 ಬಾರಿ ಮುಖಾಮುಖಿಯಾಗಿದ್ದು, ಒಂದೇ ಒಂದು ಪಂದ್ಯವನ್ನು ಸಹಾ ಕೊಲ್ಕತ್ತಾ ಸೋತಿಲ್ಲ. ಆರ್‌ಸಿಬಿ ಮೇಲಿನ ಅಜೇಯ ಓಟ ಮುಂದುವರೆಸಿದ್ದಾರೆ.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಆರ್‌ಸಿಬಿ ತಂಡವು ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 182 ರನ್‌ ಕಲೆಹಾಕಿ 183 ರನ್‌ಗಳ ಗುರಿ ನೀಡಿತು. ಇದನ್ನು ಬೆನ್ನಟ್ಟಿದ ಕೆಕೆಆರ್‌ ತಂಡ ನಿಗದಿತ 16.5 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 186 ರನ್‌ ಕಲೆ ಹಾಕಿ ಗೆದ್ದು ಬೀಗಿತು.

ಆರ್‌ಸಿಬಿ ಇನ್ನಿಂಗ್ಸ್‌: ಆರ್‌ಸಿಬಿ ಪರವಾಗಿ ಆರಂಭಿಕರಾಗಿ ಬಂದ ನಾಯಕ ಫಾಫ್‌ (8) ಬೇಗನೆ ನಿರ್ಗಮಿಸಿದರು. ಬಳಿಕ ಬಂದ ಕ್ಯಾಮರೋನ್‌ ಗ್ರೀನ್‌ (33) ಮತ್ತು ಗ್ಲೇನ್‌ ಮ್ಯಾಕ್ಸ್‌ವೆಲ್‌ (28) ಕೊಂಚ ಕಾಡಿದರು. ರಜತ್‌ ಪಟಿದರ್‌ (3), ಅನುಜ್‌ ರಾವತ್‌ (3), ಕೊನೆಯಲ್ಲಿ ಅಬ್ಬರಿಸಿದ ದಿನೇಶ್‌ ಕಾರ್ತಿಕ್‌ (20) ಕ್ಯಾಮಿಯೋ ನೀಡಿದರು.

ವಿರಾಟ್‌ ಇನ್ನಿಂಗ್ಸ್‌: ಇತ್ತ ಆರಂಭದಲ್ಲೇ ವಿಕೆಟ್‌ ಕಳೆದುಕೊಂಡ ಆರ್‌ಸಿಬಿಗೆ ಮತ್ತೊಮ್ಮೆ ರನ್‌ ಮೆಷಿನ್‌ ಆಸರೆಯಾದರು. ಒಂದೆಡೆ ವಿಕೆಟ್‌ ಬೀಳುತ್ತಿದ್ದರೂ ಮತ್ತೊಂದೆಡೆ ಗಟ್ಟಿಯಾಗಿ ನಿಂತು ಇನ್ನಿಂಗ್ಸ್‌ ಕಟ್ಟಿದ ಕೊಹ್ಲಿ ಕೆಕೆಆರ್‌ ಬೌಲರ್‌ಗಳನ್ನು ಕಾಡಿದರು. ಸಂಪೂರ್ಣ ಇನ್ನಿಂಗ್ಸ್‌ ನಾಟ್‌ಔಟ್‌ ಆದ ಕೊಹ್ಲಿ ತಂಡವನ್ನು ಸ್ಪರ್ಧಾತ್ಮಕ ಮೊತ್ತದತ್ತ ಕೊಂಡೊಯ್ದರು. ಅವರು ತಮ್ಮ ಇನ್ನಿಂಗ್ಸ್‌ನಲ್ಲಿ 59 ಎಸೆತಗಳನ್ನು ಎದುರಿಸಿ 4 ಬೌಂಡರಿ ಮತ್ತು 4 ಸಿಕ್ಸರ್‌ ಸಹಿತ 83 ರನ್‌ ಕಲೆಹಾಕಿದರು.

ಕೆಕೆಆರ್ ಪರ ಹರ್ಷಿತ್‌ ರಾಣಾ ಮತ್ತು ರಸೆಲ್ ಅವರು ತಲಾ ಎರಡು ವಿಕೆಟ್ ಕಬಳಿಸಿದರು. ಸುನಿಲ್ ನರೇನ್ ಒಂದು ವಿಕೆಟ್ ಪಡೆದು ಗಮನ ಸೆಳೆದರು

ಕೊಲ್ಕತ್ತಾ ಇನಿಂಗ್ಸ್: ಅರ್ಸಿಬಿ ನೀಡಿದ ಸ್ಪರ್ಧಾತ್ಮಕ ಮೊತ್ತ ಬೆನ್ನಟ್ಟಿದ ಕೆಕೆಆರ್ ಉತ್ತಮ ಆರಂಭ ಪಡೆಯಿತು. ಅರಂಭಿಕರಾಗಿ ಬಂದ ಫಿಲಿಪ್ ಸಾಲ್ಟ್ (30) ಮತ್ತು ಬೌಲರ್ ಕಂ ಬ್ಯಾಟ್ಸ್‌ಮನ್‌ ಸುನೀಲ್‌ ನರೈನ್‌ 22 ಎಸೆತಗಳಲ್ಲಿ 2 ಬೌಂಡರಿ 5 ಸಿಕ್ಸರ್ ಸಹಿತ 47 ರನ್ ಬಾರಿಸಿದರು. ಈ ಜೋಡಿ ಮೊದಲ ವಿಕೆಟ್‌ಗೆ 86 ರನ್ ಗಳ ಭರ್ಜರಿ ಜೊತೆಯಾಟ ನೀಡಿದರು.

ಈ ಇಬ್ಬರು ಆರಂಭಿಕರ ನಿರ್ಗಮನದ ನಂತರ ಜೊತೆಯಾದ ಶ್ರೇಯಸ್ ಆಯ್ಯರ್ ಹಾಗೂ ವೆಂಕಟೇಶ್ ಅಯ್ಯರ್ ಪಂದ್ಯವನ್ನು ಕೆಕೆಆರ್ ನತ್ತ ವಾಲಿಸಿದರು. ವೆಂಕಟೇಶ್‌ ಅಯ್ಯರ್‌ 30 ಎಸೆತಗಳಲ್ಲಿ 3 ಬೌಂಡರಿ ಮತ್ತು 4 ಸಿಕ್ಸರ್‌ ಸೇರಿದಂತೆ 50 ರನ್‌ ಬಾರಿಸಿದರೇ, ನಾಯಕ ಶ್ರೇಯಸ್‌ ಅಯ್ಯರ್‌ ಓಟಾಗದೇ (39) ರನ್‌ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ರಿಂಕು ಸಿಂಗ್‌ ಗೆಲುವಿಗೆ (5) ರನ್‌ ಕಾಣಿಕೆ ನೀಡಿದರು.

ಆರ್‌ಸಿಬಿ ಪರ ವಿಜಯ್‌ ಕುಮಾರ್‌, ಮಾಯಾಂಕ್‌ ಡಾಗರ್‌ ಮತ್ತು ಯಶ್‌ ದಯಾಳ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

8 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

13 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

17 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

17 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

17 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

20 hours ago