ಕ್ರೀಡೆ

IPL 2024: ಭಯೋತ್ಪಾದಕರ ಶಂಕೆ ಹಿನ್ನೆಲೆ ಆರ್‌ಸಿಬಿ ಅಭ್ಯಾಸ ಪಂದ್ಯ ರದ್ದು.!

ಬೆಂಗಳೂರು:‌ ಐಪಿಎಲ್‌ ೨೦೨೪ರ ಎಲಿಮಿನೇಟರ್‌ ಪಂದ್ಯ ಆರ್‌ಸಿಬಿ ಮತ್ತು ರಾಜಸ್ಥಾನ್‌ ರಾಯಲ್ಸ್‌ ನಡುವೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಡಾಂಗಣದಲ್ಲಿ ಇಂದು(ಮೇ.22) ರಾತ್ರಿ 7:30ಕ್ಕೆ ನಡೆಯಲಿದೆ.‌‌ ಈ ಹಿನ್ನೆಲೆ ಕರ್ನಾಟಕದ ಜನತೆ ಪಂದ್ಯ ಗೆಲ್ಲವು ಕಾತುರದಲ್ಲಿದ್ದಾರೆ ಜತೆಗೆ ಅಭಿಮಾನಿಗಳು ಹರ್ಷದಲ್ಲಿ ಮುಳುಗಿದ್ದಾರೆ, ಮತ್ತೊಂದೆಡೆ ಸ್ಟಾರ್‌ ಬ್ಯಾಟರ್‌ ವಿರಾಟ್ ಕೊಹ್ಲಿ ಅವರಿಗೆ ಭದ್ರತೆ ಕುರಿತು ಆತಂಕ ಆವರಿಸಿದೆ. ಹೀಗಾಗಿ ಎಲಿಮಿನೇಟರ್‌ ಪಂದ್ಯಕ್ಕೂ ಮುನ್ನ ಆರ್‌ಸಿಬಿ ಅಭ್ಯಾಸವನ್ನು ರದ್ದುಗೊಳಿಸಲಾಗಿದೆ ಎಂದು ಫ್ರಾಂಚೈಸಿ ಮೂಲಕಗಳು ತಿಳಿಸಿವೆ.

ಅಲ್ಲದೇ ವಾಡಿಕೆಯಂತೆ ನಡೆಯುವ ಸುದ್ದಿಗೋಷ್ಠಿಯನ್ನೂ ಕೂಡ ಆರ್‌ಸಿಬಿ ನಡೆಸಲಿಲ್ಲ. ಈ ಅಸಹಜ ಬೆಳವಣಿವೆಯು ಹಲವರಲ್ಲಿ ಗೊಂದಲ ಮೂಡಿಸಿತು.

ಘಟನೆ ಸಂಬಂಧ ಭಯೋತ್ಪಾದನಾ ಚಟುವಟಿಕೆಯಲ್ಲಿ ತೊಡಗಿದ್ದ ನಾಲ್ಕು ಮಂದಿಯನ್ನು ಅಹಮದಾಬಾದ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಈ ಭಯೋತ್ಪಾದಕರು ಇಂದು ನಡೆಯುವ ಆರ್‌ಸಿಬಿ, ಆರ್‌ಆರ್‌ ಪಂದ್ಯಗಳನ್ನು ಅದರಲ್ಲೂ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿಯನ್ನು ಗುರಿಯಾಗಿಸಿದ್ದರು ಎನ್ನಲಾಗುತ್ತಿದೆ. ಈ ಹಿನ್ನೆಲೆ ಪೊಲೀಸರು ಇಂದಿನ ಅಭ್ಯಾಸ ಹಾಗೂ ಪತ್ರಿಕಗೋಷ್ಠಿಯನ್ನು ರದ್ದುಗೊಳಿಸಿವಂತೆ ಪ್ರಾಂಚೈಸಿಗಳಿಗೆ ಸೂಚಿಸಿದ್ದರು ಎಂದು ತಿಳಿದುಬಂದಿದೆ.

ಅಹಮದಾಬಾದ್‌ಗೆ ವಿರಾಟ್‌ ಕೊಹ್ಲಿ ಬಂದಿಳಿದ ನಂತರ ಭಯೋತ್ಪಾದಕರ ಬಂಧನದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಅವರು ದೇಶದ ಸಂಪತ್ತು. ಅವರಿಗೆ ಸೂಕ್ತ ಭದ್ರತೆ ಒದಗಿಸುವುದು ನಮ್ಮ ಪ್ರಮುಖ ಆದ್ಯತೆ. ಹೀಗಾಗಿ ಆರ್‌ಸಿಬಿ ತಂಡದ ಆಟಗಾರರು ಅಭ್ಯಾಸ ನಡೆಸದಿರಲು ನಿರ್ಧರಿಸಿದರು. ಈ ಬೆಳವಣಿಗೆ ಕುರಿತು ರಾಜಸ್ಥಾನ ರಾಯಲ್ಸ್‌ ತಂಡಕ್ಕೂ ಮಾಹಿತಿ ನೀಡಲಾಗಿದೆ. ಆದರೆ ಆರ್‌ಆರ್‌ ಅಭ್ಯಾಸ ನಡೆಸಲು ನಮಗೆ ಯಾವುದೇ ಸಮಸ್ಯೆ ಇಲ್ಲ ಎಂದು ಅಭ್ಯಾಸ ಮುಂದುವರೆಸಿದರು ಎಂದು ಪೊಲೀಸ್‌ ಅಧಿಕಾರಿ ವಿಜಯ್‌ ಸಿಂಗ್‌ ಜ್ವಾಲಾ ತಿಳಿಸಿದ್ದಾರೆ.

ಆರ್‌ಸಿಬಿ ತಂಡ ತಂಗಿರುವ ಹೋಟೆಲಿನ ಸುತ್ತ ಪೊಲೀಸ್‌ ಭದ್ರತೆ ಹೆಚ್ಚಿಸಲಾಗಿದೆ. ಐಪಿಎಲ್‌ ಮಾನ್ಯತೆ ಹೊಂದಿರುವ ಸದಸ್ಯರಿಗೂ ಹೋಟೆಲ್‌ ಒಳಗೆ ಹೋಗಲು ಅನುಮತಿ ನೀಡಲಾಗುತ್ತಿಲ್ಲ. ಪಂದ್ಯ ನಡೆಯುವಾಗ ಬಿಗಿ ಭದ್ರತೆ ಹೆಚ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

9 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

9 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

9 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

9 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

21 hours ago