ಕ್ರೀಡೆ

IPL 2024: ಭಯೋತ್ಪಾದಕರ ಶಂಕೆ ಹಿನ್ನೆಲೆ ಆರ್‌ಸಿಬಿ ಅಭ್ಯಾಸ ಪಂದ್ಯ ರದ್ದು.!

ಬೆಂಗಳೂರು:‌ ಐಪಿಎಲ್‌ ೨೦೨೪ರ ಎಲಿಮಿನೇಟರ್‌ ಪಂದ್ಯ ಆರ್‌ಸಿಬಿ ಮತ್ತು ರಾಜಸ್ಥಾನ್‌ ರಾಯಲ್ಸ್‌ ನಡುವೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಡಾಂಗಣದಲ್ಲಿ ಇಂದು(ಮೇ.22) ರಾತ್ರಿ 7:30ಕ್ಕೆ ನಡೆಯಲಿದೆ.‌‌ ಈ ಹಿನ್ನೆಲೆ ಕರ್ನಾಟಕದ ಜನತೆ ಪಂದ್ಯ ಗೆಲ್ಲವು ಕಾತುರದಲ್ಲಿದ್ದಾರೆ ಜತೆಗೆ ಅಭಿಮಾನಿಗಳು ಹರ್ಷದಲ್ಲಿ ಮುಳುಗಿದ್ದಾರೆ, ಮತ್ತೊಂದೆಡೆ ಸ್ಟಾರ್‌ ಬ್ಯಾಟರ್‌ ವಿರಾಟ್ ಕೊಹ್ಲಿ ಅವರಿಗೆ ಭದ್ರತೆ ಕುರಿತು ಆತಂಕ ಆವರಿಸಿದೆ. ಹೀಗಾಗಿ ಎಲಿಮಿನೇಟರ್‌ ಪಂದ್ಯಕ್ಕೂ ಮುನ್ನ ಆರ್‌ಸಿಬಿ ಅಭ್ಯಾಸವನ್ನು ರದ್ದುಗೊಳಿಸಲಾಗಿದೆ ಎಂದು ಫ್ರಾಂಚೈಸಿ ಮೂಲಕಗಳು ತಿಳಿಸಿವೆ.

ಅಲ್ಲದೇ ವಾಡಿಕೆಯಂತೆ ನಡೆಯುವ ಸುದ್ದಿಗೋಷ್ಠಿಯನ್ನೂ ಕೂಡ ಆರ್‌ಸಿಬಿ ನಡೆಸಲಿಲ್ಲ. ಈ ಅಸಹಜ ಬೆಳವಣಿವೆಯು ಹಲವರಲ್ಲಿ ಗೊಂದಲ ಮೂಡಿಸಿತು.

ಘಟನೆ ಸಂಬಂಧ ಭಯೋತ್ಪಾದನಾ ಚಟುವಟಿಕೆಯಲ್ಲಿ ತೊಡಗಿದ್ದ ನಾಲ್ಕು ಮಂದಿಯನ್ನು ಅಹಮದಾಬಾದ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಈ ಭಯೋತ್ಪಾದಕರು ಇಂದು ನಡೆಯುವ ಆರ್‌ಸಿಬಿ, ಆರ್‌ಆರ್‌ ಪಂದ್ಯಗಳನ್ನು ಅದರಲ್ಲೂ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿಯನ್ನು ಗುರಿಯಾಗಿಸಿದ್ದರು ಎನ್ನಲಾಗುತ್ತಿದೆ. ಈ ಹಿನ್ನೆಲೆ ಪೊಲೀಸರು ಇಂದಿನ ಅಭ್ಯಾಸ ಹಾಗೂ ಪತ್ರಿಕಗೋಷ್ಠಿಯನ್ನು ರದ್ದುಗೊಳಿಸಿವಂತೆ ಪ್ರಾಂಚೈಸಿಗಳಿಗೆ ಸೂಚಿಸಿದ್ದರು ಎಂದು ತಿಳಿದುಬಂದಿದೆ.

ಅಹಮದಾಬಾದ್‌ಗೆ ವಿರಾಟ್‌ ಕೊಹ್ಲಿ ಬಂದಿಳಿದ ನಂತರ ಭಯೋತ್ಪಾದಕರ ಬಂಧನದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಅವರು ದೇಶದ ಸಂಪತ್ತು. ಅವರಿಗೆ ಸೂಕ್ತ ಭದ್ರತೆ ಒದಗಿಸುವುದು ನಮ್ಮ ಪ್ರಮುಖ ಆದ್ಯತೆ. ಹೀಗಾಗಿ ಆರ್‌ಸಿಬಿ ತಂಡದ ಆಟಗಾರರು ಅಭ್ಯಾಸ ನಡೆಸದಿರಲು ನಿರ್ಧರಿಸಿದರು. ಈ ಬೆಳವಣಿಗೆ ಕುರಿತು ರಾಜಸ್ಥಾನ ರಾಯಲ್ಸ್‌ ತಂಡಕ್ಕೂ ಮಾಹಿತಿ ನೀಡಲಾಗಿದೆ. ಆದರೆ ಆರ್‌ಆರ್‌ ಅಭ್ಯಾಸ ನಡೆಸಲು ನಮಗೆ ಯಾವುದೇ ಸಮಸ್ಯೆ ಇಲ್ಲ ಎಂದು ಅಭ್ಯಾಸ ಮುಂದುವರೆಸಿದರು ಎಂದು ಪೊಲೀಸ್‌ ಅಧಿಕಾರಿ ವಿಜಯ್‌ ಸಿಂಗ್‌ ಜ್ವಾಲಾ ತಿಳಿಸಿದ್ದಾರೆ.

ಆರ್‌ಸಿಬಿ ತಂಡ ತಂಗಿರುವ ಹೋಟೆಲಿನ ಸುತ್ತ ಪೊಲೀಸ್‌ ಭದ್ರತೆ ಹೆಚ್ಚಿಸಲಾಗಿದೆ. ಐಪಿಎಲ್‌ ಮಾನ್ಯತೆ ಹೊಂದಿರುವ ಸದಸ್ಯರಿಗೂ ಹೋಟೆಲ್‌ ಒಳಗೆ ಹೋಗಲು ಅನುಮತಿ ನೀಡಲಾಗುತ್ತಿಲ್ಲ. ಪಂದ್ಯ ನಡೆಯುವಾಗ ಬಿಗಿ ಭದ್ರತೆ ಹೆಚ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

11 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

12 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

12 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

12 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

13 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

13 hours ago