ಬೆಂಗಳೂರು: ಐಪಿಎಲ್ ೨೦೨೪ರ ಎಲಿಮಿನೇಟರ್ ಪಂದ್ಯ ಆರ್ಸಿಬಿ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ಅಹಮದಾಬಾದ್ನ ನರೇಂದ್ರ ಮೋದಿ ಕ್ರಿಡಾಂಗಣದಲ್ಲಿ ಇಂದು(ಮೇ.22) ರಾತ್ರಿ 7:30ಕ್ಕೆ ನಡೆಯಲಿದೆ. ಈ ಹಿನ್ನೆಲೆ ಕರ್ನಾಟಕದ ಜನತೆ ಪಂದ್ಯ ಗೆಲ್ಲವು ಕಾತುರದಲ್ಲಿದ್ದಾರೆ ಜತೆಗೆ ಅಭಿಮಾನಿಗಳು ಹರ್ಷದಲ್ಲಿ ಮುಳುಗಿದ್ದಾರೆ, ಮತ್ತೊಂದೆಡೆ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರಿಗೆ ಭದ್ರತೆ ಕುರಿತು ಆತಂಕ ಆವರಿಸಿದೆ. ಹೀಗಾಗಿ ಎಲಿಮಿನೇಟರ್ ಪಂದ್ಯಕ್ಕೂ ಮುನ್ನ ಆರ್ಸಿಬಿ ಅಭ್ಯಾಸವನ್ನು ರದ್ದುಗೊಳಿಸಲಾಗಿದೆ ಎಂದು ಫ್ರಾಂಚೈಸಿ ಮೂಲಕಗಳು ತಿಳಿಸಿವೆ.
ಅಲ್ಲದೇ ವಾಡಿಕೆಯಂತೆ ನಡೆಯುವ ಸುದ್ದಿಗೋಷ್ಠಿಯನ್ನೂ ಕೂಡ ಆರ್ಸಿಬಿ ನಡೆಸಲಿಲ್ಲ. ಈ ಅಸಹಜ ಬೆಳವಣಿವೆಯು ಹಲವರಲ್ಲಿ ಗೊಂದಲ ಮೂಡಿಸಿತು.
ಘಟನೆ ಸಂಬಂಧ ಭಯೋತ್ಪಾದನಾ ಚಟುವಟಿಕೆಯಲ್ಲಿ ತೊಡಗಿದ್ದ ನಾಲ್ಕು ಮಂದಿಯನ್ನು ಅಹಮದಾಬಾದ್ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಈ ಭಯೋತ್ಪಾದಕರು ಇಂದು ನಡೆಯುವ ಆರ್ಸಿಬಿ, ಆರ್ಆರ್ ಪಂದ್ಯಗಳನ್ನು ಅದರಲ್ಲೂ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಯನ್ನು ಗುರಿಯಾಗಿಸಿದ್ದರು ಎನ್ನಲಾಗುತ್ತಿದೆ. ಈ ಹಿನ್ನೆಲೆ ಪೊಲೀಸರು ಇಂದಿನ ಅಭ್ಯಾಸ ಹಾಗೂ ಪತ್ರಿಕಗೋಷ್ಠಿಯನ್ನು ರದ್ದುಗೊಳಿಸಿವಂತೆ ಪ್ರಾಂಚೈಸಿಗಳಿಗೆ ಸೂಚಿಸಿದ್ದರು ಎಂದು ತಿಳಿದುಬಂದಿದೆ.
ಅಹಮದಾಬಾದ್ಗೆ ವಿರಾಟ್ ಕೊಹ್ಲಿ ಬಂದಿಳಿದ ನಂತರ ಭಯೋತ್ಪಾದಕರ ಬಂಧನದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಅವರು ದೇಶದ ಸಂಪತ್ತು. ಅವರಿಗೆ ಸೂಕ್ತ ಭದ್ರತೆ ಒದಗಿಸುವುದು ನಮ್ಮ ಪ್ರಮುಖ ಆದ್ಯತೆ. ಹೀಗಾಗಿ ಆರ್ಸಿಬಿ ತಂಡದ ಆಟಗಾರರು ಅಭ್ಯಾಸ ನಡೆಸದಿರಲು ನಿರ್ಧರಿಸಿದರು. ಈ ಬೆಳವಣಿಗೆ ಕುರಿತು ರಾಜಸ್ಥಾನ ರಾಯಲ್ಸ್ ತಂಡಕ್ಕೂ ಮಾಹಿತಿ ನೀಡಲಾಗಿದೆ. ಆದರೆ ಆರ್ಆರ್ ಅಭ್ಯಾಸ ನಡೆಸಲು ನಮಗೆ ಯಾವುದೇ ಸಮಸ್ಯೆ ಇಲ್ಲ ಎಂದು ಅಭ್ಯಾಸ ಮುಂದುವರೆಸಿದರು ಎಂದು ಪೊಲೀಸ್ ಅಧಿಕಾರಿ ವಿಜಯ್ ಸಿಂಗ್ ಜ್ವಾಲಾ ತಿಳಿಸಿದ್ದಾರೆ.
ಆರ್ಸಿಬಿ ತಂಡ ತಂಗಿರುವ ಹೋಟೆಲಿನ ಸುತ್ತ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಐಪಿಎಲ್ ಮಾನ್ಯತೆ ಹೊಂದಿರುವ ಸದಸ್ಯರಿಗೂ ಹೋಟೆಲ್ ಒಳಗೆ ಹೋಗಲು ಅನುಮತಿ ನೀಡಲಾಗುತ್ತಿಲ್ಲ. ಪಂದ್ಯ ನಡೆಯುವಾಗ ಬಿಗಿ ಭದ್ರತೆ ಹೆಚ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…