ಬೆಂಗಳೂರು: ಇದೇ ಮೇ 18 ರಂದು ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಮಹತ್ವದ ಪಂದ್ಯದಲ್ಲಿ ಆರ್ಸಿಬಿಗೆ ಬಿಗ್ ಶಾಕ್ ಎದುರಾಗಿದೆ.
ಸತತ ಐದು ಪಂದ್ಯಗಳನ್ನು ಗೆದ್ದು, ಕ್ವಾಲಿಫೈ ಹಂತದಲ್ಲಿರುವ ಆರ್ಸಿಬಿ ತಂಡದಿಂದ ಇಂಗ್ಲೆಂಡ್ನ ಪ್ರಮುಖ ಆಟಗಾರರು ದೂರವಾಗಿದ್ದಾರೆ. ಇಂಗ್ಲೆಂಡ್ನ ವಿಲ್ ಜಾಕ್ ಮತ್ತು ರೀಸ್ ಟಾಪ್ಲಿ ಅವರು ತಮ್ಮ ತವರಿಗೆ ಮರಳಿದ್ದಾರೆ. ಪ್ಲೇಆಫ್ನಲ್ಲಿ ಜೀವಂತವಾಗಿರಲು ಆರ್ಸಿಬಿ ಸಿಎಸ್ಕೆ ನಡುವಿನ ಪಂದ್ಯವನ್ನು ಗೆಲ್ಲಲೇ ಬೇಕಾದ ಅನಿವಾರ್ಯತೆ ಇತ್ತು. ಇನ್ನು ಈ ಪಂದ್ಯದಲ್ಲಿ ಸ್ಟಾರ್ ಆಲ್ರೌಂಡರ್ ವಿಲ್ ಜಾಕ್ ಅವಶ್ಯಕತೆ ಬಹಳ ಇತ್ತು. ಆದ್ರೆ ಇವರ ಅನುಪಸ್ಥಿತಿ ತಂಡಕ್ಕೆ ದೊಡ್ಡ ಹೊಡೆತ ನೀಡಿದೆ.
ಇದೇ ಜೂನ್ ಒಂದರಿಂದ ಆರಂಭವಾಗುವ ವಿಶ್ವಕಪ್ಗೆ ಸಿದ್ಧತೆ ನಡೆಸಲು ಇಂಗ್ಲೆಂಡ್ ತಂಡದ ವಿಲ್ಜಾಕ್ ಹಾಗೂ ರೀಸ್ ಟಾಪ್ಲಿ ತಮ್ಮ ತವರಿಗೆ ವಾಪಸಾಗಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಜಾಕ್ಸ್ ಹಾಗೂ ಟಾಪ್ಲಿ ಅವರು ಅಂತರಾಷ್ಟ್ರೀಯ ಪಂದ್ಯಗಳಿಗಾಗಿ ತಮ್ಮ ತವರಿಗೆ ಹಿಂತಿರುಗುತ್ತಿದ್ದಾರೆ. ನಾವು ಅವರಿಗೆ ಶುಭ ಆರೈಸುತ್ತೇವೆ. ಈ ಐಪಿಎಲ್ನಲ್ಲಿ ಆರ್ಸಿಬಿ ಕ್ಯಾಂಪ್ ಹಾಗೂ ಮೈದಾನಗಳಲ್ಲಿ ನಿಮ್ಮ ಪ್ರದರ್ಶನ ಅತ್ಯುತ್ತಮವಾಗಿತ್ತು. ಶೀಘ್ರವೇ ನಿಮ್ಮನ್ನು ಭೇಟಿಯಾಗಲಿದ್ದೇವೆ ಎಂದು ಬರೆದುಕೊಂಡಿದ್ದಾರೆ.
ಜೊತೆಗೆ ಇಂಗ್ಲೆಂಡ್ ಕ್ಯಾಪ್ಟನ್ ಜೋಶ್ ಬಟ್ಲರ್, ಲಿವಿಂಗ್ಸ್ಟೋನ್ ಹಾಗೂ ಸ್ಯಾಮ್ ಕರನ್ ಸಹಾ ತಂಡಗಳನ್ನು ತೊರೆದು ತಮ್ಮ ತವರಿಗೆ ಮರಳಿದ್ದಾರೆ ಎನ್ನಲಾಗಿದೆ.
ಆರ್ಸಿಬಿ ತಂಡಕ್ಕೆ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲಿಯೂ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದ ವಿಲ್ ಜಾಕ್ ಅವರ ಅನುಪಸ್ಥಿತಿ ತಂಡಕ್ಕೆ ಕಾಡದೇ ಇರಲಾರದು. ಸಿಎಸ್ಕೆ ಮೇಲೆ ಗೆಲ್ಲಲೇಬೇಕಾದ ಪಂದ್ಯದಲ್ಲಿ ಆರ್ಸಿಬಿ ಯಾರನ್ನು ಕಣಕ್ಕಿಳಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…
ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…
ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್ ನ್ಯೂಸ್ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…
ಕಲಬುರ್ಗಿ: ಟಾರ್ಚ್ ಹಿಡಿದು ಬಸ್ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಡ್ರೈವರ್ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…
ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…
ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…