ಕ್ರೀಡೆ

IPL 2024: RCB vs CSK ನಡುವಿನ ಮಹತ್ವದ ಪಂದ್ಯಕ್ಕೆ ಈ ಆರ್‌ಸಿಬಿ ಆಟಗಾರರ ಗೈರು

ಬೆಂಗಳೂರು: ಇದೇ ಮೇ 18 ರಂದು ನಡೆಯಲಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ನಡುವಿನ ಮಹತ್ವದ ಪಂದ್ಯದಲ್ಲಿ ಆರ್‌ಸಿಬಿಗೆ ಬಿಗ್‌ ಶಾಕ್‌ ಎದುರಾಗಿದೆ.

ಸತತ ಐದು ಪಂದ್ಯಗಳನ್ನು ಗೆದ್ದು, ಕ್ವಾಲಿಫೈ ಹಂತದಲ್ಲಿರುವ ಆರ್‌ಸಿಬಿ ತಂಡದಿಂದ ಇಂಗ್ಲೆಂಡ್‌ನ ಪ್ರಮುಖ ಆಟಗಾರರು ದೂರವಾಗಿದ್ದಾರೆ. ಇಂಗ್ಲೆಂಡ್‌ನ ವಿಲ್‌ ಜಾಕ್‌ ಮತ್ತು ರೀಸ್‌ ಟಾಪ್ಲಿ ಅವರು ತಮ್ಮ ತವರಿಗೆ ಮರಳಿದ್ದಾರೆ. ಪ್ಲೇಆಫ್‌ನಲ್ಲಿ ಜೀವಂತವಾಗಿರಲು ಆರ್‌ಸಿಬಿ ಸಿಎಸ್‌ಕೆ ನಡುವಿನ ಪಂದ್ಯವನ್ನು ಗೆಲ್ಲಲೇ ಬೇಕಾದ ಅನಿವಾರ್ಯತೆ ಇತ್ತು. ಇನ್ನು ಈ ಪಂದ್ಯದಲ್ಲಿ ಸ್ಟಾರ್‌ ಆಲ್‌ರೌಂಡರ್‌ ವಿಲ್‌ ಜಾಕ್‌ ಅವಶ್ಯಕತೆ ಬಹಳ ಇತ್ತು. ಆದ್ರೆ ಇವರ ಅನುಪಸ್ಥಿತಿ ತಂಡಕ್ಕೆ ದೊಡ್ಡ ಹೊಡೆತ ನೀಡಿದೆ.

ಇದೇ ಜೂನ್‌ ಒಂದರಿಂದ ಆರಂಭವಾಗುವ ವಿಶ್ವಕಪ್‌ಗೆ ಸಿದ್ಧತೆ ನಡೆಸಲು ಇಂಗ್ಲೆಂಡ್‌ ತಂಡದ ವಿಲ್‌ಜಾಕ್‌ ಹಾಗೂ ರೀಸ್‌ ಟಾಪ್ಲಿ ತಮ್ಮ ತವರಿಗೆ ವಾಪಸಾಗಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಜಾಕ್ಸ್‌ ಹಾಗೂ ಟಾಪ್ಲಿ ಅವರು ಅಂತರಾಷ್ಟ್ರೀಯ ಪಂದ್ಯಗಳಿಗಾಗಿ ತಮ್ಮ ತವರಿಗೆ ಹಿಂತಿರುಗುತ್ತಿದ್ದಾರೆ. ನಾವು ಅವರಿಗೆ ಶುಭ ಆರೈಸುತ್ತೇವೆ. ಈ ಐಪಿಎಲ್‌ನಲ್ಲಿ ಆರ್‌ಸಿಬಿ ಕ್ಯಾಂಪ್‌ ಹಾಗೂ ಮೈದಾನಗಳಲ್ಲಿ ನಿಮ್ಮ ಪ್ರದರ್ಶನ ಅತ್ಯುತ್ತಮವಾಗಿತ್ತು. ಶೀಘ್ರವೇ ನಿಮ್ಮನ್ನು ಭೇಟಿಯಾಗಲಿದ್ದೇವೆ ಎಂದು ಬರೆದುಕೊಂಡಿದ್ದಾರೆ.

ಜೊತೆಗೆ ಇಂಗ್ಲೆಂಡ್‌ ಕ್ಯಾಪ್ಟನ್‌ ಜೋಶ್‌ ಬಟ್ಲರ್‌, ಲಿವಿಂಗ್‌ಸ್ಟೋನ್‌ ಹಾಗೂ ಸ್ಯಾಮ್‌ ಕರನ್‌ ಸಹಾ ತಂಡಗಳನ್ನು ತೊರೆದು ತಮ್ಮ ತವರಿಗೆ ಮರಳಿದ್ದಾರೆ ಎನ್ನಲಾಗಿದೆ.

ಆರ್‌ಸಿಬಿ ತಂಡಕ್ಕೆ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ಎರಡೂ ವಿಭಾಗದಲ್ಲಿಯೂ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದ ವಿಲ್‌ ಜಾಕ್‌ ಅವರ ಅನುಪಸ್ಥಿತಿ ತಂಡಕ್ಕೆ ಕಾಡದೇ ಇರಲಾರದು. ಸಿಎಸ್‌ಕೆ ಮೇಲೆ ಗೆಲ್ಲಲೇಬೇಕಾದ ಪಂದ್ಯದಲ್ಲಿ ಆರ್‌ಸಿಬಿ ಯಾರನ್ನು ಕಣಕ್ಕಿಳಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮೇ.20ರಿಂದ ಸಾರಿಗೆ ಮುಷ್ಕರ : ಪರ್ಯಾಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಕೆಎಸ್‌ಆರ್‌ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…

4 hours ago

ಸರ್ಕಾರದ ಸಂಧಾನ ಸಭೆ ವಿಫಲ ; ಪ್ರತಿಭಟನೆ ನಿಶ್ಚಿತ

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…

5 hours ago

ರಷ್ಯಾದಿಂದ ತೈಲ ಆಮದು ಮುಂದುವರಿಸಿದ ಭಾರತ

ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…

6 hours ago

ವಸ್ತುಸಂಗ್ರಹಾಲಯ ದಿನಾಚರಣೆ : ಗಮನಸೆಳೆದ ಸ್ಮಾರಕಗಳು ಮತ್ತು ಪ್ರಾಚ್ಯವಸ್ತುಗಳು

ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…

6 hours ago

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

7 hours ago

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

9 hours ago