ಕ್ರೀಡೆ

IPL 2024: ನಾಯಕ ಫಾಫ್‌ ಅರ್ಧಶತಕ: ಆರ್‌ಸಿಬಿಗೆ ಮತ್ತೊಂದು ಗೆಲುವು

ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಆಲ್‌ರೌಂಡರ್‌ ಆಟದ ಮುಂದೆ ಮಂಕಾದ ಗುಜರಾತ್‌ ಟೈಟನ್ಸ್‌ ತಂಡ 4 ವಿಕೆಟ್‌ಗಳ ಅಂತರದ ಹೀನಾಯ ಸೋಲು ಅನುಭವಿಸಿದೆ.

ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ನ 52ನೇ ಪಂದ್ಯದಲ್ಲಿ ಆರ್‌ಸಿಬಿ ಮತ್ತು ಜಿಟಿ ಎದುರಾಗಿದ್ದವು. ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದದ ಗುಜರಾತ್‌ ಜೈಂಟ್ಸ್‌ ನಿಗದಿತ 19.3 ಓವರ್‌ಗಳಲ್ಲಿ ಆಲ್‌ಔಟ್‌ ಆಗಿ 147ರನ್‌ ಗಳಿಸಿ ಆರ್‌ಸಿಬಿಗೆ 148 ರನ್‌ಗಳ ಗುರಿ ನೀಡಿತ್ತು. ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಆರ್‌ಸಿಬಿಗೆ ನಾಯಕ ಫಾಫ್‌ ಡುಪ್ಲೆಸಿ ಅವರ ಅರ್ಧಶತಕದ ನೆರವಿನಿಂದ ಕೇವಲ 13.4 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 152 ರನ್‌ ಕಲೆ ಹಾಕಿ ಗುರಿ ಮುಟ್ಟಿತು.

ಜಿಟಿ ಇನ್ನಿಂಗ್ಸ್‌: ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಗುಜರಾತ್‌ ತಂಡಕ್ಕೆ ಆರಂಭಿಕ ಆಘಾತ ಉಂಟಾಯಿತು. ನಾಯಕ ಗಿಲ್‌ 2(7) ಹಾಗೂ ವೃದ್ಧಿಮಾನ್‌ ಸಾಹಾ 1(7) ರನ್‌ಗಳಿಸಿ ಔಟಾದರು. ಇವರೊಂದಿಗೆ ಸಾಯ್‌ ಸುದರ್ಶನ್‌ 6(14) ಕೂಡಾ ಬಂದ ದಾರಿಯಲ್ಲೇ ಹಿಂತಿರುಗಿದರು. ಮಧ್ಯಮ ಕ್ರಮಾಂಕದಲ್ಲಿ ಸ್ವಲ್ಪ ಮಟ್ಟಿಗೆ ಅಬ್ಬರಿಸಿದ ಶಾರುಖ್‌ ಖಾನ್‌ 37(24), ಡೇವಿಡ್‌ ಮಿಲ್ಲರ್‌ 30(20) ಹಾಗೂ ರಾಹುಲ್‌ ತೆವಾಟಿಯಾ 35(21) ರನ್‌ ಗಳಿಸಿ ತಂಡಕ್ಕೆ ಚೇತರಿಕೆಯ ಆಟವಾಡಿದರು.

ಉಳಿದಂತೆ ರಶೀದ್‌ ಖಾನ್‌ 18(14), ವಿಜಯ್‌ ಶಂಕರ್‌ 10(7), ಸುತಾರ್‌ 1(2), ಮೋಹಿತ್‌ ಶರ್ಮಾ ಶೂನ್ಯ ಸುತ್ತಿ ಔಟಾಗುವ ಮೂಲಕ ತಂಡ ಸ್ಪರ್ಧಾತ್ಮಕ ಮೊತ್ತ ಕೂಡಿಸುವಲ್ಲಿ ಸಹಕರಿಸಿದರು.

ಆರ್‌ಸಿಬಿ ಪರ ವೈಶಾಖ್‌, ಸಿರಾಜ್‌ ಹಾಗೂ ಯಶ್‌ ದಯಾಳ್‌ ತಲಾ 2 ವಿಕೆಟ್‌ ಪಡೆದರು. ಕ್ಯಾಮರೋನ್‌ ಗ್ರೀನ್‌ ಹಾಗೂ ಕರಣ್‌ ಶರ್ಮಾ ತಲಾ ಒಂದೊಂದು ವಿಕೆಟ್‌ ಪಡೆದು ಗಮನ ಸೆಳೆದರು.

ಆರ್‌ಸಿಬಿ ಇನ್ನಿಂಗ್ಸ್‌: ತವರಿನಂಗಳದಲ್ಲಿ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಆರ್‌ಸಿಬಿಗೆ ನಾಯಕ ಫಾಫ್‌ ಹಾಗೂ ವಿರಾಟ್‌ ಕೊಹ್ಲಿ ಬರ್ಜರಿ ಓಪನಿಂಗ್‌ ನೀಡಿದರು. ಪವರ್‌ ಪ್ಲೇನಲ್ಲಿ ಜಿಟಿ ಬೌಲರ್‌ಗಳನ್ನು ಈ ಇಬ್ಬರು ಆಟಗಾರರು ಮನಬಂದಂತೆ ದಂಡಿಸಿದರು. ನಾಯಕ ಫಾಫ್‌ ಕೇವಲ 18 ಎಸೆತಗಳಲ್ಲಿಯೇ ಅರ್ಧಶತಕ ಪೂರೈಸಿದರು. ಇವರು 23 ಎಸೆತ ಎದುರಿಸಿ 10ಬೌಂಡರಿ ಹಾಗೂ 3 ಸಿಕ್ಸರ್‌ ಸಹಿತ 64 ರನ್‌ ಗಳಿಸಿ ಔಟಾದರು. ಆರ್‌ಸಿಬಿ ಪವರ್‌ ಪ್ಲೇ ನಲ್ಲಿ ಫಾಫ್‌ ವಿಕೆಟ್‌ ಕಳೆದುಕೊಂಡು ಬರೋಬ್ಬರಿ 92 ರನ್‌ ಪೇರಿಸಿತು.

ಭರ್ಜರಿ ಓಪನಿಂಗ್‌ ಸಿಕ್ಕರೂ ಆರ್‌ಸಿಬಿಗೆ ಮಧ್ಯಮ ಕ್ರಮಾಂಕ ಕೈಕೊಟ್ಟಿತು. ವಿಲ್‌ ಜಾಕ್‌ 1(3), ಪಟಿದರ್‌ 2(3) ಹಾಗೂ ಗ್ಲೇನ್‌ ಮ್ಯಾಕ್ಸ್‌ವೆಲ್‌ 4(3) ಹಾಗೂ ಕ್ಯಾಮರೋನ್‌ ಗ್ರೀನ್‌ 1(2) ವಿಕೆಟ್‌ ಕಳೆದುಕೊಂಡ ಆರ್‌ಸಿಬಿ ಸಂಕಷ್ಟಕ್ಕೆ ಸಿಲುಕಿತು.

ಒಂದೆಡೆ ವಿಕೆಟ್‌ ಬೀಳುತ್ತಿದ್ದರೂ ಮತ್ತೊಂದೆಡೆ ಏಕಾಂಗಿ ಹೋರಾಟ ನೀಡಿದ ವಿರಾಟ್‌ ಕೊಹ್ಲಿ 42(27) ರನ್‌ ಬಾರಿಸಿ ತಂಡಕ್ಕೆ ನೆರವಾದರು. ಬಳಿಕ ಬಂದ ದಿನೇಶ್‌ ಕಾರ್ತಿಕ್‌ 21(12) ಹಾಗೂ ಸ್ವಪ್ನಿಲ್‌ 15(9) ಪಂದ್ಯವನ್ನು ಮುಗಿಸಿ, ಆರ್‌ಸಿಬಿಗೆ ಜಯ ತಂದುಕೊಟ್ಟರು.

ಗುಜರಾತ್‌ ಪರ ಲಿಟ್ಲ್‌ 4 ಹಾಗೂ ನೂರ್‌ ಅಹ್ಮದ್‌ 2 ವಿಕೆಟ್‌ ಪಡೆದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಎಚ್.ಸಿ.ಮಹದೇವಪ್ಪ ಸಿಎಂ ಆದರೆ ನನಗೆ ಖುಷಿ: ಸಚಿವ ಕೆ.ವೆಂಕಟೇಶ್‌

ಮೈಸೂರು: ಸಚಿವ ಎಚ್.ಸಿ.ಮಹದೇವಪ್ಪ ಮುಖ್ಯಮಂತ್ರಿಯಾದರೆ ನನಗೆ ಖುಷಿಯಿದೆ ಎಂದು ಸಚಿವ ಕೆ.ವೆಂಕಟೇಶ್‌ ಹೇಳಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿ ದಲಿತ ಸಿಎಂ ಕೂಗು…

33 mins ago

ವಿಜಯೇಂದ್ರ ಸಿಎಂ ಆದರೆ ರಾಜ್ಯ ಸುಭಿಕ್ಷವಾಗಿ ಇರಲಿದೆ: ವಿಜಯೇಂದ್ರ ಅಭಿಮಾನಿ ಬಳಗದ ಶಶಿಕುಮಾರ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ದೂರಾಡಳಿತವನ್ನು ಅಂತ್ಯಗೊಳಿಸಿ ರಾಜ್ಯದಲ್ಲಿ ಬಿಜೆಪಿ…

1 hour ago

ಒಳ ಮೀಸಲಾತಿಯಲ್ಲಿರುವ ಗೊಂದಲ ನಿವಾರಣೆ ಮಾಡಿ: ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು

ಬೆಂಗಳೂರು: ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ಕಲ್ಪಿಸುವ ಕುರಿತು ಆದಷ್ಟು ಶೀಘ್ರವಾಗಿ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳಬೇಕೆಂದು ರಾಜ್ಯಪಾಲ ಥಾವರ್ ಚಂದ್‌ ಗೆಹ್ಲೋಟ್‍ಗೆ…

1 hour ago

ಏಪ್ರಿಲ್‌ ಹಾಗೂ ಮೇ ತಿಂಗಳಿನಲ್ಲಿ ವಿಪರೀತ ಬಿಸಿಲಿನ ತೀವ್ರತೆ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಬೇಸಿಗೆ ಆರಂಭಕ್ಕೂ ಮುನ್ನವೇ ಬಿಸಿಲಿನ ಝಳ ಹೆಚ್ಚಾಗಿದ್ದು, ಮುಂಬರುವ ದಿನಗಳಲ್ಲಿ ವಾಡಿಕೆಗಿಂತ ಅಧಿಕ ತಾಪಮಾನ…

1 hour ago

ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್‌ ನಿಷೇಧ: ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಿಷ್ಟು.!

ಬೆಂಗಳೂರು: ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್‌ ಫೋನ್‌ ಬಳಸುವುದನ್ನು ನಿಷೇಧಿಸುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ…

3 hours ago

ಸಿದ್ದರಾಮಯ್ಯ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದ್ದಾರೆ: ಸಚಿವ ಪರಮೇಶ್ವರ್‌

ಬೆಂಗಳೂರು: ಸಿಎಂ ಸಿದ್ದರಾಮಯ್ಯ-ಕೇಂದ್ರ ಸಚಿವ ಕುಮಾರಸ್ವಾಮಿ ನಡುವಿನ ಜಟಾಪಟಿಯಲ್ಲಿ ಸಾಮಾಜಿಕ ನ್ಯಾಯದ ಬಗ್ಗೆ ಸಿಎಂ ಸಿದ್ದರಾಮಯ್ಯ ನಿಲುವುಗಳನ್ನು ಸಚಿವ ಪರಮೇಶ್ವರ್‌…

3 hours ago