ಕ್ರೀಡೆ

IPL 2024: ನಾಯಕ ಫಾಫ್‌ ಅರ್ಧಶತಕ: ಆರ್‌ಸಿಬಿಗೆ ಮತ್ತೊಂದು ಗೆಲುವು

ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಆಲ್‌ರೌಂಡರ್‌ ಆಟದ ಮುಂದೆ ಮಂಕಾದ ಗುಜರಾತ್‌ ಟೈಟನ್ಸ್‌ ತಂಡ 4 ವಿಕೆಟ್‌ಗಳ ಅಂತರದ ಹೀನಾಯ ಸೋಲು ಅನುಭವಿಸಿದೆ.

ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ನ 52ನೇ ಪಂದ್ಯದಲ್ಲಿ ಆರ್‌ಸಿಬಿ ಮತ್ತು ಜಿಟಿ ಎದುರಾಗಿದ್ದವು. ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದದ ಗುಜರಾತ್‌ ಜೈಂಟ್ಸ್‌ ನಿಗದಿತ 19.3 ಓವರ್‌ಗಳಲ್ಲಿ ಆಲ್‌ಔಟ್‌ ಆಗಿ 147ರನ್‌ ಗಳಿಸಿ ಆರ್‌ಸಿಬಿಗೆ 148 ರನ್‌ಗಳ ಗುರಿ ನೀಡಿತ್ತು. ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಆರ್‌ಸಿಬಿಗೆ ನಾಯಕ ಫಾಫ್‌ ಡುಪ್ಲೆಸಿ ಅವರ ಅರ್ಧಶತಕದ ನೆರವಿನಿಂದ ಕೇವಲ 13.4 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 152 ರನ್‌ ಕಲೆ ಹಾಕಿ ಗುರಿ ಮುಟ್ಟಿತು.

ಜಿಟಿ ಇನ್ನಿಂಗ್ಸ್‌: ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಗುಜರಾತ್‌ ತಂಡಕ್ಕೆ ಆರಂಭಿಕ ಆಘಾತ ಉಂಟಾಯಿತು. ನಾಯಕ ಗಿಲ್‌ 2(7) ಹಾಗೂ ವೃದ್ಧಿಮಾನ್‌ ಸಾಹಾ 1(7) ರನ್‌ಗಳಿಸಿ ಔಟಾದರು. ಇವರೊಂದಿಗೆ ಸಾಯ್‌ ಸುದರ್ಶನ್‌ 6(14) ಕೂಡಾ ಬಂದ ದಾರಿಯಲ್ಲೇ ಹಿಂತಿರುಗಿದರು. ಮಧ್ಯಮ ಕ್ರಮಾಂಕದಲ್ಲಿ ಸ್ವಲ್ಪ ಮಟ್ಟಿಗೆ ಅಬ್ಬರಿಸಿದ ಶಾರುಖ್‌ ಖಾನ್‌ 37(24), ಡೇವಿಡ್‌ ಮಿಲ್ಲರ್‌ 30(20) ಹಾಗೂ ರಾಹುಲ್‌ ತೆವಾಟಿಯಾ 35(21) ರನ್‌ ಗಳಿಸಿ ತಂಡಕ್ಕೆ ಚೇತರಿಕೆಯ ಆಟವಾಡಿದರು.

ಉಳಿದಂತೆ ರಶೀದ್‌ ಖಾನ್‌ 18(14), ವಿಜಯ್‌ ಶಂಕರ್‌ 10(7), ಸುತಾರ್‌ 1(2), ಮೋಹಿತ್‌ ಶರ್ಮಾ ಶೂನ್ಯ ಸುತ್ತಿ ಔಟಾಗುವ ಮೂಲಕ ತಂಡ ಸ್ಪರ್ಧಾತ್ಮಕ ಮೊತ್ತ ಕೂಡಿಸುವಲ್ಲಿ ಸಹಕರಿಸಿದರು.

ಆರ್‌ಸಿಬಿ ಪರ ವೈಶಾಖ್‌, ಸಿರಾಜ್‌ ಹಾಗೂ ಯಶ್‌ ದಯಾಳ್‌ ತಲಾ 2 ವಿಕೆಟ್‌ ಪಡೆದರು. ಕ್ಯಾಮರೋನ್‌ ಗ್ರೀನ್‌ ಹಾಗೂ ಕರಣ್‌ ಶರ್ಮಾ ತಲಾ ಒಂದೊಂದು ವಿಕೆಟ್‌ ಪಡೆದು ಗಮನ ಸೆಳೆದರು.

ಆರ್‌ಸಿಬಿ ಇನ್ನಿಂಗ್ಸ್‌: ತವರಿನಂಗಳದಲ್ಲಿ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಆರ್‌ಸಿಬಿಗೆ ನಾಯಕ ಫಾಫ್‌ ಹಾಗೂ ವಿರಾಟ್‌ ಕೊಹ್ಲಿ ಬರ್ಜರಿ ಓಪನಿಂಗ್‌ ನೀಡಿದರು. ಪವರ್‌ ಪ್ಲೇನಲ್ಲಿ ಜಿಟಿ ಬೌಲರ್‌ಗಳನ್ನು ಈ ಇಬ್ಬರು ಆಟಗಾರರು ಮನಬಂದಂತೆ ದಂಡಿಸಿದರು. ನಾಯಕ ಫಾಫ್‌ ಕೇವಲ 18 ಎಸೆತಗಳಲ್ಲಿಯೇ ಅರ್ಧಶತಕ ಪೂರೈಸಿದರು. ಇವರು 23 ಎಸೆತ ಎದುರಿಸಿ 10ಬೌಂಡರಿ ಹಾಗೂ 3 ಸಿಕ್ಸರ್‌ ಸಹಿತ 64 ರನ್‌ ಗಳಿಸಿ ಔಟಾದರು. ಆರ್‌ಸಿಬಿ ಪವರ್‌ ಪ್ಲೇ ನಲ್ಲಿ ಫಾಫ್‌ ವಿಕೆಟ್‌ ಕಳೆದುಕೊಂಡು ಬರೋಬ್ಬರಿ 92 ರನ್‌ ಪೇರಿಸಿತು.

ಭರ್ಜರಿ ಓಪನಿಂಗ್‌ ಸಿಕ್ಕರೂ ಆರ್‌ಸಿಬಿಗೆ ಮಧ್ಯಮ ಕ್ರಮಾಂಕ ಕೈಕೊಟ್ಟಿತು. ವಿಲ್‌ ಜಾಕ್‌ 1(3), ಪಟಿದರ್‌ 2(3) ಹಾಗೂ ಗ್ಲೇನ್‌ ಮ್ಯಾಕ್ಸ್‌ವೆಲ್‌ 4(3) ಹಾಗೂ ಕ್ಯಾಮರೋನ್‌ ಗ್ರೀನ್‌ 1(2) ವಿಕೆಟ್‌ ಕಳೆದುಕೊಂಡ ಆರ್‌ಸಿಬಿ ಸಂಕಷ್ಟಕ್ಕೆ ಸಿಲುಕಿತು.

ಒಂದೆಡೆ ವಿಕೆಟ್‌ ಬೀಳುತ್ತಿದ್ದರೂ ಮತ್ತೊಂದೆಡೆ ಏಕಾಂಗಿ ಹೋರಾಟ ನೀಡಿದ ವಿರಾಟ್‌ ಕೊಹ್ಲಿ 42(27) ರನ್‌ ಬಾರಿಸಿ ತಂಡಕ್ಕೆ ನೆರವಾದರು. ಬಳಿಕ ಬಂದ ದಿನೇಶ್‌ ಕಾರ್ತಿಕ್‌ 21(12) ಹಾಗೂ ಸ್ವಪ್ನಿಲ್‌ 15(9) ಪಂದ್ಯವನ್ನು ಮುಗಿಸಿ, ಆರ್‌ಸಿಬಿಗೆ ಜಯ ತಂದುಕೊಟ್ಟರು.

ಗುಜರಾತ್‌ ಪರ ಲಿಟ್ಲ್‌ 4 ಹಾಗೂ ನೂರ್‌ ಅಹ್ಮದ್‌ 2 ವಿಕೆಟ್‌ ಪಡೆದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

8 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

10 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

11 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

11 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

11 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

13 hours ago