ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟಾಪ್ ಆರ್ಡರ್ನ ಉತ್ತಮ ಬ್ಯಾಟಿಂಗ್ ನೆರವಿನಿಂದ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 218 ರನ್ ಕಲೆಹಾಕಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಗೆಲ್ಲಲು 219 ರನ್ಗಳ ಗುರಿ ನೀಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಆಫ್ ಪ್ರವೇಶಿಸಬೇಕೆಂದರೆ ಕನಿಷ್ಠ 18 ರನ್ಗಳ ಗೆಲುವನ್ನು ದಾಖಲಿಸಲೇಬೇಕಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ನಾಯಕ ಫಾಫ್ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಕಣಕ್ಕಿಳಿದು ಉತ್ತಮ ಇನ್ನಿಂಗ್ಸ್ ಕಟ್ಟಿಕೊಟ್ಟರು. ಕೊಹ್ಲಿ 47 (29) ರನ್ ಗಳಿಸಿದರೆ, ಡುಪ್ಲೆಸಿಸ್ 54 (39) ರನ್ ಗಳಿಸಿದರು. ಮಧ್ಯಮ ಕ್ರಮಾಂಕದಲ್ಲಿ ಅಬ್ಬರಿಸಿದ ರಜತ್ ಪಟಿದಾರ್ 41 (23) ರನ್ ಮತ್ತು ಕೆಮರಾನ್ ಗ್ರೀನ್ ಅಜೇಯ 38 (17) ರನ್ ಬಾರಿಸಿದರು. ಇನ್ನುಳಿದಂತೆ ದಿನೇಶ್ ಕಾರ್ತಿಕ್ 14 (6) ರನ್, ಗ್ಲೆನ್ ಮ್ಯಾಕ್ಸ್ವೆಲ್ 16 (5) ರನ್ ಮತ್ತು ಮಹಿಪಾಲ್ ಲೊಮ್ರೊರ್ ಒಂದು ಎಸೆತ ಎದುರಿಸಿ ಯಾವುದೇ ರನ್ ಗಳಿಸದೇ ಅಜೇಯರಾಗಿ ಉಳಿದರು.
ಚೆನ್ನೈ ಸೂಪರ್ ಕಿಂಗ್ಸ್ ಪರ ಶಾರ್ದೂಲ್ ಠಾಕೂರ್ 2 ವಿಕೆಟ್ ಮತ್ತು ಮಿಚೆಲ್ ಸ್ಯಾಂಟ್ನರ್ ಹಾಗೂ ತುಷಾರ್ ದೇಶಪಾಂಡೆ ತಲಾ ಒಂದೊಂದು ವಿಕೆಟ್ ಪಡೆದರು.
ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…
ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…
ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…
ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…
ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…