ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟಾಪ್ ಆರ್ಡರ್ನ ಉತ್ತಮ ಬ್ಯಾಟಿಂಗ್ ನೆರವಿನಿಂದ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 218 ರನ್ ಕಲೆಹಾಕಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಗೆಲ್ಲಲು 219 ರನ್ಗಳ ಗುರಿ ನೀಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಆಫ್ ಪ್ರವೇಶಿಸಬೇಕೆಂದರೆ ಕನಿಷ್ಠ 18 ರನ್ಗಳ ಗೆಲುವನ್ನು ದಾಖಲಿಸಲೇಬೇಕಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ನಾಯಕ ಫಾಫ್ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಕಣಕ್ಕಿಳಿದು ಉತ್ತಮ ಇನ್ನಿಂಗ್ಸ್ ಕಟ್ಟಿಕೊಟ್ಟರು. ಕೊಹ್ಲಿ 47 (29) ರನ್ ಗಳಿಸಿದರೆ, ಡುಪ್ಲೆಸಿಸ್ 54 (39) ರನ್ ಗಳಿಸಿದರು. ಮಧ್ಯಮ ಕ್ರಮಾಂಕದಲ್ಲಿ ಅಬ್ಬರಿಸಿದ ರಜತ್ ಪಟಿದಾರ್ 41 (23) ರನ್ ಮತ್ತು ಕೆಮರಾನ್ ಗ್ರೀನ್ ಅಜೇಯ 38 (17) ರನ್ ಬಾರಿಸಿದರು. ಇನ್ನುಳಿದಂತೆ ದಿನೇಶ್ ಕಾರ್ತಿಕ್ 14 (6) ರನ್, ಗ್ಲೆನ್ ಮ್ಯಾಕ್ಸ್ವೆಲ್ 16 (5) ರನ್ ಮತ್ತು ಮಹಿಪಾಲ್ ಲೊಮ್ರೊರ್ ಒಂದು ಎಸೆತ ಎದುರಿಸಿ ಯಾವುದೇ ರನ್ ಗಳಿಸದೇ ಅಜೇಯರಾಗಿ ಉಳಿದರು.
ಚೆನ್ನೈ ಸೂಪರ್ ಕಿಂಗ್ಸ್ ಪರ ಶಾರ್ದೂಲ್ ಠಾಕೂರ್ 2 ವಿಕೆಟ್ ಮತ್ತು ಮಿಚೆಲ್ ಸ್ಯಾಂಟ್ನರ್ ಹಾಗೂ ತುಷಾರ್ ದೇಶಪಾಂಡೆ ತಲಾ ಒಂದೊಂದು ವಿಕೆಟ್ ಪಡೆದರು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…