ಚೆನ್ನೈ: ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಸಿಎಸ್ಕೆ ಮತ್ತು ಎಲ್ಎಸ್ಜಿ ನಡುವಿನ ಲೀಗ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಋತುರಾಜ್ ಗಾಯಕ್ವಾಡ್ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ.
ಹೌದು, ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಸಿಎಸ್ಕೆ ತಂಡಕ್ಕೆ ನಿರೀಕ್ಷಿತ ಆರಂಭ ಸಿಗಲಿಲ್ಲ. ಇದರ ಹೊರತಾಗಿಯೂ ನಾಯಕ ಋತುರಾಜ್ ಗಾಯಕ್ವಾಡ್ ಭರ್ಜರಿಯಾಗಿ ಬ್ಯಾಟ್ ಬೀಸಿ ತಂಡಕ್ಕೆ ಬದ್ರ ಬುನಾದಿ ಹಾಕಿದರು.
ನಾಯಕ ಗಾಯಕ್ವಾಡ್ 56 ಎಸೆತಗಳಲ್ಲಿ ಶತಕ ಪೂರೈಸಿದರು. ಇದರೊಂದಿಗೆ ಅವರು ಸಿಎಸ್ಕೆ ಬಳಗದಲ್ಲಿ ಹೊಸ ಮೈಲಿಗಲ್ಲು ಮುಟ್ಟಿದರು. ಅದೇನೆಂದರೇ, ಐಪಿಎಲ್ ಇತಿಹಾಸದಲ್ಲಿಯೇ ಸಿಎಸ್ಕೆ ಪರ ಶತಕ ದಾಖಲಿಸಿದ ಮೊದಲ ನಾಯಕ ಎಂಬ ಹೆಗ್ಗಳಿಕೆಗೆ ಕ್ಯಾಪ್ಟನ್ ಋತುರಾಜ ಭಾಜನರಾದರು.
ಮಾಜಿ ಕಪ್ತಾನ್ ಎಂ.ಎಸ್ ಧೋನಿ ಅವರು ಐಪಿಎಲ್ನಲ್ಲಿ 84ರನ್ ಗಳಿಸಿದ್ದೇ ಸಿಎಸ್ಕೆ ನಾಯಕನ ಈವರೆಗಿನ ಗರಿಷ್ಠ ಮೊತ್ತವಾಗಿತ್ತು. ಋತುರಾಜ್ ಶತಕ ಬಾರಿಸುವ ಮೂಲಕ 16 ವರ್ಷಗಳ ಕ್ಯಾಪ್ಟನ್ ಸೆಂಚುರಿ ಬರವನ್ನು ಋತುರಾಜ್ ನೀಗಿಸಿದ್ದಾರೆ.
ಇನ್ನು ಈ ಪಂದ್ಯದಲ್ಲಿ ಸಿಎಸ್ಕೆ ನೀಡಿದ 210ರನ್ಗಳ ಗುರಿಯನ್ನು ಸಾರಾಗವಾಗಿ ಬೆನ್ನಟ್ಟಿದ ಎಲ್ಎಸ್ಜಿ, ಮಾರ್ಕಸ್ ಸ್ಟೋಯ್ನಿಸ್ ಶತಕದ ನೆರವಿನಿಂದ 19.3 ಓವರ್ಗಳಲ್ಲಿಯೇ 213 ಬಾರಿಸಿ ಗೆಲುವಿನ ನಗೆ ಬೀರಿತು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…