ಚೆನ್ನೈ: ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಸಿಎಸ್ಕೆ ಮತ್ತು ಎಲ್ಎಸ್ಜಿ ನಡುವಿನ ಲೀಗ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಋತುರಾಜ್ ಗಾಯಕ್ವಾಡ್ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ.
ಹೌದು, ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಸಿಎಸ್ಕೆ ತಂಡಕ್ಕೆ ನಿರೀಕ್ಷಿತ ಆರಂಭ ಸಿಗಲಿಲ್ಲ. ಇದರ ಹೊರತಾಗಿಯೂ ನಾಯಕ ಋತುರಾಜ್ ಗಾಯಕ್ವಾಡ್ ಭರ್ಜರಿಯಾಗಿ ಬ್ಯಾಟ್ ಬೀಸಿ ತಂಡಕ್ಕೆ ಬದ್ರ ಬುನಾದಿ ಹಾಕಿದರು.
ನಾಯಕ ಗಾಯಕ್ವಾಡ್ 56 ಎಸೆತಗಳಲ್ಲಿ ಶತಕ ಪೂರೈಸಿದರು. ಇದರೊಂದಿಗೆ ಅವರು ಸಿಎಸ್ಕೆ ಬಳಗದಲ್ಲಿ ಹೊಸ ಮೈಲಿಗಲ್ಲು ಮುಟ್ಟಿದರು. ಅದೇನೆಂದರೇ, ಐಪಿಎಲ್ ಇತಿಹಾಸದಲ್ಲಿಯೇ ಸಿಎಸ್ಕೆ ಪರ ಶತಕ ದಾಖಲಿಸಿದ ಮೊದಲ ನಾಯಕ ಎಂಬ ಹೆಗ್ಗಳಿಕೆಗೆ ಕ್ಯಾಪ್ಟನ್ ಋತುರಾಜ ಭಾಜನರಾದರು.
ಮಾಜಿ ಕಪ್ತಾನ್ ಎಂ.ಎಸ್ ಧೋನಿ ಅವರು ಐಪಿಎಲ್ನಲ್ಲಿ 84ರನ್ ಗಳಿಸಿದ್ದೇ ಸಿಎಸ್ಕೆ ನಾಯಕನ ಈವರೆಗಿನ ಗರಿಷ್ಠ ಮೊತ್ತವಾಗಿತ್ತು. ಋತುರಾಜ್ ಶತಕ ಬಾರಿಸುವ ಮೂಲಕ 16 ವರ್ಷಗಳ ಕ್ಯಾಪ್ಟನ್ ಸೆಂಚುರಿ ಬರವನ್ನು ಋತುರಾಜ್ ನೀಗಿಸಿದ್ದಾರೆ.
ಇನ್ನು ಈ ಪಂದ್ಯದಲ್ಲಿ ಸಿಎಸ್ಕೆ ನೀಡಿದ 210ರನ್ಗಳ ಗುರಿಯನ್ನು ಸಾರಾಗವಾಗಿ ಬೆನ್ನಟ್ಟಿದ ಎಲ್ಎಸ್ಜಿ, ಮಾರ್ಕಸ್ ಸ್ಟೋಯ್ನಿಸ್ ಶತಕದ ನೆರವಿನಿಂದ 19.3 ಓವರ್ಗಳಲ್ಲಿಯೇ 213 ಬಾರಿಸಿ ಗೆಲುವಿನ ನಗೆ ಬೀರಿತು.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…