ಚೆನ್ನೈ: ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಸಿಎಸ್ಕೆ ಮತ್ತು ಎಲ್ಎಸ್ಜಿ ನಡುವಿನ ಲೀಗ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಋತುರಾಜ್ ಗಾಯಕ್ವಾಡ್ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ.
ಹೌದು, ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಸಿಎಸ್ಕೆ ತಂಡಕ್ಕೆ ನಿರೀಕ್ಷಿತ ಆರಂಭ ಸಿಗಲಿಲ್ಲ. ಇದರ ಹೊರತಾಗಿಯೂ ನಾಯಕ ಋತುರಾಜ್ ಗಾಯಕ್ವಾಡ್ ಭರ್ಜರಿಯಾಗಿ ಬ್ಯಾಟ್ ಬೀಸಿ ತಂಡಕ್ಕೆ ಬದ್ರ ಬುನಾದಿ ಹಾಕಿದರು.
ನಾಯಕ ಗಾಯಕ್ವಾಡ್ 56 ಎಸೆತಗಳಲ್ಲಿ ಶತಕ ಪೂರೈಸಿದರು. ಇದರೊಂದಿಗೆ ಅವರು ಸಿಎಸ್ಕೆ ಬಳಗದಲ್ಲಿ ಹೊಸ ಮೈಲಿಗಲ್ಲು ಮುಟ್ಟಿದರು. ಅದೇನೆಂದರೇ, ಐಪಿಎಲ್ ಇತಿಹಾಸದಲ್ಲಿಯೇ ಸಿಎಸ್ಕೆ ಪರ ಶತಕ ದಾಖಲಿಸಿದ ಮೊದಲ ನಾಯಕ ಎಂಬ ಹೆಗ್ಗಳಿಕೆಗೆ ಕ್ಯಾಪ್ಟನ್ ಋತುರಾಜ ಭಾಜನರಾದರು.
ಮಾಜಿ ಕಪ್ತಾನ್ ಎಂ.ಎಸ್ ಧೋನಿ ಅವರು ಐಪಿಎಲ್ನಲ್ಲಿ 84ರನ್ ಗಳಿಸಿದ್ದೇ ಸಿಎಸ್ಕೆ ನಾಯಕನ ಈವರೆಗಿನ ಗರಿಷ್ಠ ಮೊತ್ತವಾಗಿತ್ತು. ಋತುರಾಜ್ ಶತಕ ಬಾರಿಸುವ ಮೂಲಕ 16 ವರ್ಷಗಳ ಕ್ಯಾಪ್ಟನ್ ಸೆಂಚುರಿ ಬರವನ್ನು ಋತುರಾಜ್ ನೀಗಿಸಿದ್ದಾರೆ.
ಇನ್ನು ಈ ಪಂದ್ಯದಲ್ಲಿ ಸಿಎಸ್ಕೆ ನೀಡಿದ 210ರನ್ಗಳ ಗುರಿಯನ್ನು ಸಾರಾಗವಾಗಿ ಬೆನ್ನಟ್ಟಿದ ಎಲ್ಎಸ್ಜಿ, ಮಾರ್ಕಸ್ ಸ್ಟೋಯ್ನಿಸ್ ಶತಕದ ನೆರವಿನಿಂದ 19.3 ಓವರ್ಗಳಲ್ಲಿಯೇ 213 ಬಾರಿಸಿ ಗೆಲುವಿನ ನಗೆ ಬೀರಿತು.
ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್ನಲ್ಲಿ…
ಹೊಸದಿಲ್ಲಿ : ಇರಾನ್ ಮೇಲಿನ ಯುದ್ಧದ ನಡುವೆಯೇ ಇಂಧನ ದರಗಳನ್ನು ಒಂದು ವಾರಕ್ಕೂ ಕಡಿಮೆ ಅವಧಿಯಲ್ಲಿ ಎರಡನೇ ಬಾರಿ ಕೇಂದ್ರ…
ಸಾರ್ಥಕ ಸೇವೆಯ ಸಮರ್ಪಣೆ ಸಮಾವೇಶದಲ್ಲಿ ಡಿಸಿಎಂ ವಿಶ್ವಾಸ ತುಮಕೂರು: 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ.…
ತುಮಕೂರು : ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆ-ಸಾರ್ಥಕ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಏಕಕಾಲಕ್ಕೆ ಕಂದಾಯ ಇಲಾಖೆಯಿಂದ ಅತ್ಯಧಿಕ ಹಕ್ಕು…
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸಂಶೋಧಕರುಗಳಿಗೆ ಶಿಷ್ಯವೇತನ ನೀಡಬೇಕೆಂದು ಒತ್ತಾಯಿಸಿ ಶಿಷ್ಯವೇತನರಹಿತ ಸಂಶೋಧಕರ ಬಳಗದ ವತಿಯಿಂದ ಮೈಸೂರು ವಿ.ವಿ…
ತುಮಕೂರು : ನೀಟ್ ಪರೀಕ್ಷೆ ರದ್ದಾಗಿ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿ, ಹಲವು ವಿದ್ಯಾರ್ಥಿಗಳ ಆತಹತ್ಯೆಗೆ…