ಕ್ರೀಡೆ

IPL 2024: ಪಂಜಾಬ್‌ ಕಿಂಗ್ಸ್‌ ಮಣಿಸಿ ಪಾಯಿಂಟ್ಸ್‌ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದ ಎಸ್‌ಆರ್‌ಎಚ್‌!

ಹೈದರಾಬಾದ್‌: ಇಲ್ಲಿನ ರಾಜೀವ್‌ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಸನ್‌ರೈಸರ್ಸ್‌ ಹೈದರಾಬಾದ್‌ ಮತ್ತು ಪಂಜಾಬ್‌ ಕಿಂಗ್ಸ್‌ ನಡುವಿನ 69ನೇ ಐಪಿಎಲ್‌ ಪಂದ್ಯದಲ್ಲಿ ಎಸ್‌ಆರ್‌ಎಚ್‌ 4 ವಿಕೆಟ್‌ಗಳ ಅಂತರದಿಂದ ಗೆದ್ದು ಬೀಗಿದೆ. ಆ ಮೂಲಕ ಪಾಯಿಂಟ್ಸ್‌ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿತ ಕಂಡಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಪಂಜಾಬ್‌ ಕಿಂಗ್ಸ್‌ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 214 ರನ್‌ ಬಾರಿಸಿ 215 ರನ್‌ಗಳ ಬೃಹತ್‌ ಟಾರ್ಗೆಟ್‌ ನೀಡಿತು. ಈ ಬೃಹತ್‌ ಮೊತ್ತ ಬೆನ್ನತ್ತಿದ ಸನ್‌ರೈಸರ್ಸ್‌ ಹೈದರಾಬಾದ್‌ 19.1 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 216 ರನ್‌ ಬಾರಿಸಿ ಗೆಲುವಿನ ನಗೆ ಬೀರಿತು.

ಪಂಜಾಬ್‌ ಕಿಂಗ್ಸ್‌ ಇನ್ನಿಂಗ್ಸ್‌: ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಪಂಜಾಬ್‌ ಕಿಂಸ್‌ಗೆ ಉತ್ತಮ ಆರಂಭ ದೊರೆಯಿತು. ಆರಂಭಿಕರಾಗಿ ಬಂದ ಅಥರ್ವಾ ತೈಡೆ ಹಾಗೂ ಪ್ರಭ್‌ಸಿಮ್ರಾನ್‌ ಪವರ್‌ಪ್ಲೇ ನಲ್ಲಿ ಉತ್ತಮ ರನ್‌ ಕಲೆಹಾಕಿದರು. ಅಥರ್ವಾ ತೈಡೆ 46(27), ಪ್ರಭ್‌ಸಿಮ್ರಾನ್‌ ಸಿಂಗ್‌ 71(45) ರನ್ ಕಲೆಹಾಕಿದರು. ಈ ಇಬ್ಬರು 97ರನ್‌ಗಳ ಜತೆಯಾಟ ನೀಡಿದರು.

ಬಳಿಕ ಬಂದ ರಿಲ್ಲಿ ರೂಸೋ 49(24) ರನ್‌, ಶಶಾಂಕ್‌ ಸಿಂಗ್‌ 2(4) ರನ್‌, ನಾಯಕ ಜಿತೇಶ್‌ ಶರ್ಮಾ ಔಟಾಗದೇ 32(15) ರನ್‌, ಅಶುತೋಷ್‌ ಶರ್ಮಾ 2(3) ರನ್‌ ಹಾಗೂ ಶಿವಂ ಸಿಂಗ್‌ ಔಟಾಗದೇ 2(3) ರನ್‌ ಬಾರಿಸಿದರು.

ಹೈದರಾಬಾದ್‌ ಪರ ನಟರಾಜ್‌ 2 ವಿಕೆಟ್‌ ಪಡೆದರೇ, ನಾಯಕ ಕಮಿನ್ಸ್‌ ಮತ್ತು ವಿಜಯಕಾಂತ್‌ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

ಸನ್‌ರೈಸರ್ಸ್‌ ಹೈದರಾಬಾದ್‌ ಇನ್ನಿಂಗ್ಸ್‌: ತಮ್ಮ ತವರಿನಂಗಳದಲ್ಲಿ ಪಂಜಾಬ್‌ ನೀಡಿದ ಬೃಹತ್‌ ಮೊತ್ತ ಬೆನ್ನತ್ತಿದ ಎಸ್‌ಆರ್‌ಎಚ್‌ಗೆ ಆರಂಭಿಕ ಆಘಾತ ಎದುರಾಯಿತು. ಹರ್ಷ್‌ದೀಪ್‌ ಸಿಂಗ್‌ ದಾಳಿಗೆ ಡ್ರಾವಿಸ್‌ ಹೆಡ್ ಕ್ಲೀನ್‌ ಬೌಲ್ಡ್‌ ಆಗಿ ಖಾತೆ ತೆರೆಯದೆ ನಿರ್ಗಮಿಸಿದರು.

ಇತ್ತ ಜತೆಯಾದ ಅಭಿಷೇಕ್‌ ಶರ್ಮಾ ಮತ್ತು ರಾಹುಲ್‌ ತ್ರಿಪಾಟಿ ತಂಡಕ್ಕೆ ಚೇತರಿಕೆ ಆಟವಾಡಿದರು. ಅಭಿಷೇಕ್‌ ಶರ್ಮಾ 66(28) ರನ್‌ ಬಾರಿಸಿದರೇ, ರಾಹುಲ್‌ ತ್ರಿಪಾಟಿ 33(18) ರನ್‌ ಬಾರಿಸಿ ನಿರ್ಗಮಿಸಿದರು. ಈ ಜೋಡಿ 72ರನ್‌ಗಳ ಜೊತೆಯಾಟ ನೀಡಿದರು. ಉಳಿದಂತೆ ನಿತೀಶ್‌ ರೆಡ್ಡಿ 37(25) ರನ್‌, ಷಹಬಾಜ್‌ ಅಹ್ಮದ್‌ 3(6) ರನ್‌, ಕೊನೆಯಲ್ಲಿ ಅಬ್ಬರಿಸಿದ ಹೆನ್ರಿಚ್‌ ಕ್ಲಾಸೆನ್‌ 42(26) ರನ್‌ ಬಾರಿಸಿದರು.

ಕೊನೆಯಲ್ಲಿ ಔಟಾಗದೇ ಅಬ್ದುಲ್‌ ಸಮದ್‌ 11(8)ರನ್‌ ಮತು ಸನ್ವೀರ್‌ ಸಿಂಗ್‌ 2(3) ರನ್‌ ಗಳಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು.

ಪಂಜಾಬ್‌ ಪರ ಹರ್ಷಲ್‌ ಪಟೇಲ್‌ ಹಾಗೂ ಹರ್ಷ್‌ದೀಪ್‌ ಸಿಂಗ್‌ ತಲಾ 2 ವಿಕೆಟ್‌, ಹರ್ಪ್ರೀತ್‌ ಬ್ರಾರ್‌ ಮತ್ತು ಶಶಾಂಕ್‌ ಸಿಂಗ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

2 hours ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

2 hours ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

2 hours ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

3 hours ago

SIR ನೋಟಿಸ್: ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…

5 hours ago

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

10 hours ago