ಕ್ರೀಡೆ

IPL 2024: ಗುಜರಾತ್‌ ತಂಡದ ನಾಯಕನ ಸ್ಥಾನಕ್ಕೆ ಅಚ್ಚರಿ ಆಯ್ಕೆ!

ನವದೆಹಲಿ : ಮಾಜಿ ಗುಜರಾತ್‌ ತಂಡ ನಾಯಕ ಹಾರ್ದಿಕ್‌ ಪಾಂಡ್ಯ ಮುಂಬೈ ಇಂಡಿಯನ್ಸ್‌ ತಂಡಕ್ಕೆ ಮರಳುವ ನಿರ್ಧಾರದ ನಂತರ ಗುಜರಾತ್ ಟೈಟಾನ್ಸ್ ಸೋಮವಾರ ಇಂಡಿಯನ್ ಪ್ರೀಮಿಯರ್ ಲೀಗ್ ನ (ಐಪಿಎಲ್) 2024 ರ ಸೀಸನ್ ಗೆ ನಾಯಕನಾಗಿ ಶುಭಮನ್‌ ಗಿಲ್ ಅವರನ್ನು ನೇಮಕಮಾಡಿದ್ದಾರೆ.

ಪಾಂಡ್ಯ ಅವರ ನಿರ್ಗಮನ ಖಚಿತವಾದ ನಂತರ, 24 ವರ್ಷದ ಆರಂಭಿಕ ಆಟಗಾರ ಗಿಲ್ ಅವರನ್ನು ನಾಯಕನನ್ನಾಗಿ ನೇಮಿಸಲಾಗಿದೆ. ಗಿಲ್ ಕಳೆದ ಋತುವಿನಲ್ಲಿ 890 ರನ್ಗಳೊಂದಿಗೆ ಆರೆಂಜ್‌ ಕ್ಯಾಪ್ ಪಡೆದಿದ್ದರು. ಇದು ವಿರಾಟ್ ಕೊಹ್ಲಿ ಅವರ ಐಪಿಎಲ್‌ ದಾಖಲೆಯಾದ 973 ರನ್ ಗಳ ನಂತರದ ಸ್ಥಾನದಲ್ಲಿದೆ.

ಗುಜರಾತ್ ಟೈಟಾನ್ಸ್ ತಂಡದ ಮುಖ್ಯಸ್ಥ ವಿಕ್ರಮ್ ಸೋಲಂಕಿ ಅವರು ಕಳೆದ ಎರಡು ಋತುಗಳಲ್ಲಿ ತಂಡದ ಯಶಸ್ಸಿಗೆ ಪಾಂಡ್ಯ ಕಾರಣ ಎಂದು ಹೊಗಳಿದ್ದಾರೆ. ಗುಜರಾತ್ ಟೈಟಾನ್ಸ್ ಮೊದಲ ನಾಯಕನಾಗಿ, ಹಾರ್ದಿಕ್ ಪಾಂಡ್ಯ ಫ್ರಾಂಚೈಸಿಗೆ ಎರಡು ಅದ್ಭುತ ಸೀಸನ್‌ಗಳಲ್ಲಿ ಒಂದು ಬಾರಿ ಚಾಂಪಿಯನ್‌ಶಿಪ್‌ ಮತ್ತೊಂದು ಬಾರಿ ಫೈನಲ್ ನಲ್ಲಿ ಸ್ಥಾನ ಪಡೆಯಲು ಕಾರಣವಾಯಿತು” ಎಂದು ಸೋಲಂಕಿ ತಿಳಿಸಿದ್ದಾರೆ.

ಪಾಂಡ್ಯ ಅವರು ಮುಂಬೈ ಸೇರುವ ಬಯಕೆಯನ್ನು ನಾವು ಗೌರವಿಸುತ್ತೇವೆ ಮತ್ತು ಶುಭ ಆರೈಸುತ್ತೇವೆ. ಹಾಗಯೇ ಗಿಲ್‌ ಸಾಮರ್ಥ್ಯವನ್ನು ನಾವು ಕಳೆದೆರೆಡು ಐಪಿಎಲ್‌ ಋತುವಿನಲ್ಲಿ ಗಿಲ್‌ ನೊಂದಿಗೆ ನಿಖಟವಾದ ಸಂಬಂಧ ಹೊಂದಿದ್ದೇವೆ. ಗಿಲ್‌ ಪ್ರಬುದ್ಧತೆ ತಂಡಕ್ಕೆ ಸಹಕರಿಸಲಿದೆ.  ಎಂದು ಸೋಲಂಕಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಅವರ ಪರಿಪಕ್ವತೆ ಮತ್ತು ಕೌಶಲ್ಯವು ಮೈದಾನದಲ್ಲಿನ ಅವರ ಪ್ರದರ್ಶನದಲ್ಲಿ ಸ್ಪಷ್ಟವಾಗಿದೆ. ಶುಭಮನ್ ಅವರಂತಹ ಯುವ ಆಟಗಾರ, ನಾಯಕನ ಚುಕ್ಕಾಣಿ ಹಿಡಿದಿದ್ದಾರೆ. ಅವರೊಂದಿಗೆ ಹೊಸ ಪ್ರಯಾಣವನ್ನು ಪ್ರಾರಂಭಿಸಲು ನಾವು ತುಂಬಾ ಉತ್ಸುಕರಾಗಿದ್ದೇವೆ” ಎಂದು ಜಿಟಿ ಥಿಂಕ್-ಟ್ಯಾಂಕ್ ಮುಖ್ಯಸ್ಥರು ಹೇಳಿದ್ದಾರೆ.

ಗಲ್‌ ಹೇಳಿದ್ದೇನು? : ಗುಜರಾತ್ ಟೈಟಾನ್ಸ್ ನ ನಾಯಕತ್ವವನ್ನು ವಹಿಸಿಕೊಳ್ಳಲು ನನಗೆ ಸಂತೋಷವಾಗಿದೆ ಮತ್ತು ಅಂತಹ ಉತ್ತಮ ತಂಡವನ್ನು ಮುನ್ನಡೆಸಲು ನನ್ನ ಮೇಲಿನ ನಂಬಿಕೆಗಾಗಿ ಫ್ರಾಂಚೈಸಿಗೆ ಧನ್ಯವಾದ ಹೇಳುತ್ತೇನೆ. ನಾವು ಎರಡು ಅಸಾಧಾರಣ ಋತುಗಳನ್ನು ಹೊಂದಿದ್ದೇವೆ ಮತ್ತು ನಮ್ಮ ಉತ್ತೇಜಕ ಬ್ಯಾಂಡ್ ಕ್ರಿಕೆಟ್ರೊಂದಿಗೆ ತಂಡವನ್ನು ಮುನ್ನಡೆಸಲು ನಾನು ಉತ್ಸುಕನಾಗಿದ್ದೇನೆ.,” ಗಿಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

andolanait

Recent Posts

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

3 hours ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

3 hours ago

ಓದುಗರ ಪತ್ರ: ಅಪಾಯಕಾರಿ ಮರದ ಕೊಂಬೆ ತೆರವುಗೊಳಿಸಿ

ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…

3 hours ago

ಓದುಗರ ಪತ್ರ: ನವ ಭಾರತದ ನಿರ್ಮಾತೃ ಡಾ.ಅಂಬೇಡ್ಕರ್

ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…

3 hours ago

ಆಂತರಿಕ ಕ್ಷೋಭೆಯಿಂದ ಭಾರತ ರಕ್ಷಿಸಿದ ಅಂಬೇಡ್ಕರ್

ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…

3 hours ago

ಕೊಡಗು ಜಿಲ್ಲೆಯಲ್ಲೂ ಹೆಚ್ಚುತ್ತಿರುವ ತಾಪಮಾನ

ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ  ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ…

3 hours ago