ಕ್ರೀಡೆ

IPL 2024: ಗುಜರಾತ್‌ ತಂಡದ ನಾಯಕನ ಸ್ಥಾನಕ್ಕೆ ಅಚ್ಚರಿ ಆಯ್ಕೆ!

ನವದೆಹಲಿ : ಮಾಜಿ ಗುಜರಾತ್‌ ತಂಡ ನಾಯಕ ಹಾರ್ದಿಕ್‌ ಪಾಂಡ್ಯ ಮುಂಬೈ ಇಂಡಿಯನ್ಸ್‌ ತಂಡಕ್ಕೆ ಮರಳುವ ನಿರ್ಧಾರದ ನಂತರ ಗುಜರಾತ್ ಟೈಟಾನ್ಸ್ ಸೋಮವಾರ ಇಂಡಿಯನ್ ಪ್ರೀಮಿಯರ್ ಲೀಗ್ ನ (ಐಪಿಎಲ್) 2024 ರ ಸೀಸನ್ ಗೆ ನಾಯಕನಾಗಿ ಶುಭಮನ್‌ ಗಿಲ್ ಅವರನ್ನು ನೇಮಕಮಾಡಿದ್ದಾರೆ.

ಪಾಂಡ್ಯ ಅವರ ನಿರ್ಗಮನ ಖಚಿತವಾದ ನಂತರ, 24 ವರ್ಷದ ಆರಂಭಿಕ ಆಟಗಾರ ಗಿಲ್ ಅವರನ್ನು ನಾಯಕನನ್ನಾಗಿ ನೇಮಿಸಲಾಗಿದೆ. ಗಿಲ್ ಕಳೆದ ಋತುವಿನಲ್ಲಿ 890 ರನ್ಗಳೊಂದಿಗೆ ಆರೆಂಜ್‌ ಕ್ಯಾಪ್ ಪಡೆದಿದ್ದರು. ಇದು ವಿರಾಟ್ ಕೊಹ್ಲಿ ಅವರ ಐಪಿಎಲ್‌ ದಾಖಲೆಯಾದ 973 ರನ್ ಗಳ ನಂತರದ ಸ್ಥಾನದಲ್ಲಿದೆ.

ಗುಜರಾತ್ ಟೈಟಾನ್ಸ್ ತಂಡದ ಮುಖ್ಯಸ್ಥ ವಿಕ್ರಮ್ ಸೋಲಂಕಿ ಅವರು ಕಳೆದ ಎರಡು ಋತುಗಳಲ್ಲಿ ತಂಡದ ಯಶಸ್ಸಿಗೆ ಪಾಂಡ್ಯ ಕಾರಣ ಎಂದು ಹೊಗಳಿದ್ದಾರೆ. ಗುಜರಾತ್ ಟೈಟಾನ್ಸ್ ಮೊದಲ ನಾಯಕನಾಗಿ, ಹಾರ್ದಿಕ್ ಪಾಂಡ್ಯ ಫ್ರಾಂಚೈಸಿಗೆ ಎರಡು ಅದ್ಭುತ ಸೀಸನ್‌ಗಳಲ್ಲಿ ಒಂದು ಬಾರಿ ಚಾಂಪಿಯನ್‌ಶಿಪ್‌ ಮತ್ತೊಂದು ಬಾರಿ ಫೈನಲ್ ನಲ್ಲಿ ಸ್ಥಾನ ಪಡೆಯಲು ಕಾರಣವಾಯಿತು” ಎಂದು ಸೋಲಂಕಿ ತಿಳಿಸಿದ್ದಾರೆ.

ಪಾಂಡ್ಯ ಅವರು ಮುಂಬೈ ಸೇರುವ ಬಯಕೆಯನ್ನು ನಾವು ಗೌರವಿಸುತ್ತೇವೆ ಮತ್ತು ಶುಭ ಆರೈಸುತ್ತೇವೆ. ಹಾಗಯೇ ಗಿಲ್‌ ಸಾಮರ್ಥ್ಯವನ್ನು ನಾವು ಕಳೆದೆರೆಡು ಐಪಿಎಲ್‌ ಋತುವಿನಲ್ಲಿ ಗಿಲ್‌ ನೊಂದಿಗೆ ನಿಖಟವಾದ ಸಂಬಂಧ ಹೊಂದಿದ್ದೇವೆ. ಗಿಲ್‌ ಪ್ರಬುದ್ಧತೆ ತಂಡಕ್ಕೆ ಸಹಕರಿಸಲಿದೆ.  ಎಂದು ಸೋಲಂಕಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಅವರ ಪರಿಪಕ್ವತೆ ಮತ್ತು ಕೌಶಲ್ಯವು ಮೈದಾನದಲ್ಲಿನ ಅವರ ಪ್ರದರ್ಶನದಲ್ಲಿ ಸ್ಪಷ್ಟವಾಗಿದೆ. ಶುಭಮನ್ ಅವರಂತಹ ಯುವ ಆಟಗಾರ, ನಾಯಕನ ಚುಕ್ಕಾಣಿ ಹಿಡಿದಿದ್ದಾರೆ. ಅವರೊಂದಿಗೆ ಹೊಸ ಪ್ರಯಾಣವನ್ನು ಪ್ರಾರಂಭಿಸಲು ನಾವು ತುಂಬಾ ಉತ್ಸುಕರಾಗಿದ್ದೇವೆ” ಎಂದು ಜಿಟಿ ಥಿಂಕ್-ಟ್ಯಾಂಕ್ ಮುಖ್ಯಸ್ಥರು ಹೇಳಿದ್ದಾರೆ.

ಗಲ್‌ ಹೇಳಿದ್ದೇನು? : ಗುಜರಾತ್ ಟೈಟಾನ್ಸ್ ನ ನಾಯಕತ್ವವನ್ನು ವಹಿಸಿಕೊಳ್ಳಲು ನನಗೆ ಸಂತೋಷವಾಗಿದೆ ಮತ್ತು ಅಂತಹ ಉತ್ತಮ ತಂಡವನ್ನು ಮುನ್ನಡೆಸಲು ನನ್ನ ಮೇಲಿನ ನಂಬಿಕೆಗಾಗಿ ಫ್ರಾಂಚೈಸಿಗೆ ಧನ್ಯವಾದ ಹೇಳುತ್ತೇನೆ. ನಾವು ಎರಡು ಅಸಾಧಾರಣ ಋತುಗಳನ್ನು ಹೊಂದಿದ್ದೇವೆ ಮತ್ತು ನಮ್ಮ ಉತ್ತೇಜಕ ಬ್ಯಾಂಡ್ ಕ್ರಿಕೆಟ್ರೊಂದಿಗೆ ತಂಡವನ್ನು ಮುನ್ನಡೆಸಲು ನಾನು ಉತ್ಸುಕನಾಗಿದ್ದೇನೆ.,” ಗಿಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

andolanait

Recent Posts

ಡಿ.ಕೆ.ಶಿವಕುಮಾರ್‌ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್‌: ಬುಧವಾರ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…

1 hour ago

ಓದುಗರ ಪತ್ರ: ಕ್ರಿಕೆಟ್ ಕ್ರೀಡಾಂಗಣಕ್ಕೆ ಡಾ.ಅಂಬೇಡ್ಕರ್ ಹೆಸರಿಡಿ

ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…

2 hours ago

ಓದುಗರ ಪತ್ರ: ನಾಳಿನ ನೆರಳಿಗೆ ಇಂದೇ ಗಿಡ ನೆಡೋಣ

ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…

2 hours ago

ಓದುಗರ ಪತ್ರ: ಸಿದ್ದರಾಮಯ್ಯನವರ ಆಡಳಿತ ಮಾದರಿ

ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…

2 hours ago

ಸಿದ್ದು ರಾಜೀನಾಮೆ; ಒಂದು ಯುಗದ ಅಂತ್ಯ!

ಕೆ.ಪಿ.ನಾಗರಾಜ್, ಮೈಸೂರು ಕರ್ನಾಟಕ ರಾಜಕೀಯ ವ್ಯಾಕರಣವನ್ನೇ ಬದಲಾಯಿಸಿದ ಸಿದ್ದರಾಮಯ್ಯ ಮೈಸೂರು ರಾಜಕಾರಣ ಅಂದರೆ ಒಮ್ಮೆ ಒಡೆಯರ್ ಯುಗ, ನಂತರ ದೇವರಾಜ…

2 hours ago

ಗಾಂಧಿಯ ಸರಳತೆಯತ್ತ ನಡೆಯುತ್ತಿರುವ ಯುವಜನತೆ

ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…

5 hours ago