ಕ್ರೀಡೆ

IPL 2024: ಗುಜರಾತ್‌ ತಂಡದ ನಾಯಕನ ಸ್ಥಾನಕ್ಕೆ ಅಚ್ಚರಿ ಆಯ್ಕೆ!

ನವದೆಹಲಿ : ಮಾಜಿ ಗುಜರಾತ್‌ ತಂಡ ನಾಯಕ ಹಾರ್ದಿಕ್‌ ಪಾಂಡ್ಯ ಮುಂಬೈ ಇಂಡಿಯನ್ಸ್‌ ತಂಡಕ್ಕೆ ಮರಳುವ ನಿರ್ಧಾರದ ನಂತರ ಗುಜರಾತ್ ಟೈಟಾನ್ಸ್ ಸೋಮವಾರ ಇಂಡಿಯನ್ ಪ್ರೀಮಿಯರ್ ಲೀಗ್ ನ (ಐಪಿಎಲ್) 2024 ರ ಸೀಸನ್ ಗೆ ನಾಯಕನಾಗಿ ಶುಭಮನ್‌ ಗಿಲ್ ಅವರನ್ನು ನೇಮಕಮಾಡಿದ್ದಾರೆ.

ಪಾಂಡ್ಯ ಅವರ ನಿರ್ಗಮನ ಖಚಿತವಾದ ನಂತರ, 24 ವರ್ಷದ ಆರಂಭಿಕ ಆಟಗಾರ ಗಿಲ್ ಅವರನ್ನು ನಾಯಕನನ್ನಾಗಿ ನೇಮಿಸಲಾಗಿದೆ. ಗಿಲ್ ಕಳೆದ ಋತುವಿನಲ್ಲಿ 890 ರನ್ಗಳೊಂದಿಗೆ ಆರೆಂಜ್‌ ಕ್ಯಾಪ್ ಪಡೆದಿದ್ದರು. ಇದು ವಿರಾಟ್ ಕೊಹ್ಲಿ ಅವರ ಐಪಿಎಲ್‌ ದಾಖಲೆಯಾದ 973 ರನ್ ಗಳ ನಂತರದ ಸ್ಥಾನದಲ್ಲಿದೆ.

ಗುಜರಾತ್ ಟೈಟಾನ್ಸ್ ತಂಡದ ಮುಖ್ಯಸ್ಥ ವಿಕ್ರಮ್ ಸೋಲಂಕಿ ಅವರು ಕಳೆದ ಎರಡು ಋತುಗಳಲ್ಲಿ ತಂಡದ ಯಶಸ್ಸಿಗೆ ಪಾಂಡ್ಯ ಕಾರಣ ಎಂದು ಹೊಗಳಿದ್ದಾರೆ. ಗುಜರಾತ್ ಟೈಟಾನ್ಸ್ ಮೊದಲ ನಾಯಕನಾಗಿ, ಹಾರ್ದಿಕ್ ಪಾಂಡ್ಯ ಫ್ರಾಂಚೈಸಿಗೆ ಎರಡು ಅದ್ಭುತ ಸೀಸನ್‌ಗಳಲ್ಲಿ ಒಂದು ಬಾರಿ ಚಾಂಪಿಯನ್‌ಶಿಪ್‌ ಮತ್ತೊಂದು ಬಾರಿ ಫೈನಲ್ ನಲ್ಲಿ ಸ್ಥಾನ ಪಡೆಯಲು ಕಾರಣವಾಯಿತು” ಎಂದು ಸೋಲಂಕಿ ತಿಳಿಸಿದ್ದಾರೆ.

ಪಾಂಡ್ಯ ಅವರು ಮುಂಬೈ ಸೇರುವ ಬಯಕೆಯನ್ನು ನಾವು ಗೌರವಿಸುತ್ತೇವೆ ಮತ್ತು ಶುಭ ಆರೈಸುತ್ತೇವೆ. ಹಾಗಯೇ ಗಿಲ್‌ ಸಾಮರ್ಥ್ಯವನ್ನು ನಾವು ಕಳೆದೆರೆಡು ಐಪಿಎಲ್‌ ಋತುವಿನಲ್ಲಿ ಗಿಲ್‌ ನೊಂದಿಗೆ ನಿಖಟವಾದ ಸಂಬಂಧ ಹೊಂದಿದ್ದೇವೆ. ಗಿಲ್‌ ಪ್ರಬುದ್ಧತೆ ತಂಡಕ್ಕೆ ಸಹಕರಿಸಲಿದೆ.  ಎಂದು ಸೋಲಂಕಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಅವರ ಪರಿಪಕ್ವತೆ ಮತ್ತು ಕೌಶಲ್ಯವು ಮೈದಾನದಲ್ಲಿನ ಅವರ ಪ್ರದರ್ಶನದಲ್ಲಿ ಸ್ಪಷ್ಟವಾಗಿದೆ. ಶುಭಮನ್ ಅವರಂತಹ ಯುವ ಆಟಗಾರ, ನಾಯಕನ ಚುಕ್ಕಾಣಿ ಹಿಡಿದಿದ್ದಾರೆ. ಅವರೊಂದಿಗೆ ಹೊಸ ಪ್ರಯಾಣವನ್ನು ಪ್ರಾರಂಭಿಸಲು ನಾವು ತುಂಬಾ ಉತ್ಸುಕರಾಗಿದ್ದೇವೆ” ಎಂದು ಜಿಟಿ ಥಿಂಕ್-ಟ್ಯಾಂಕ್ ಮುಖ್ಯಸ್ಥರು ಹೇಳಿದ್ದಾರೆ.

ಗಲ್‌ ಹೇಳಿದ್ದೇನು? : ಗುಜರಾತ್ ಟೈಟಾನ್ಸ್ ನ ನಾಯಕತ್ವವನ್ನು ವಹಿಸಿಕೊಳ್ಳಲು ನನಗೆ ಸಂತೋಷವಾಗಿದೆ ಮತ್ತು ಅಂತಹ ಉತ್ತಮ ತಂಡವನ್ನು ಮುನ್ನಡೆಸಲು ನನ್ನ ಮೇಲಿನ ನಂಬಿಕೆಗಾಗಿ ಫ್ರಾಂಚೈಸಿಗೆ ಧನ್ಯವಾದ ಹೇಳುತ್ತೇನೆ. ನಾವು ಎರಡು ಅಸಾಧಾರಣ ಋತುಗಳನ್ನು ಹೊಂದಿದ್ದೇವೆ ಮತ್ತು ನಮ್ಮ ಉತ್ತೇಜಕ ಬ್ಯಾಂಡ್ ಕ್ರಿಕೆಟ್ರೊಂದಿಗೆ ತಂಡವನ್ನು ಮುನ್ನಡೆಸಲು ನಾನು ಉತ್ಸುಕನಾಗಿದ್ದೇನೆ.,” ಗಿಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

andolanait

Recent Posts

ಮಂಡ್ಯ ವಿವಿ ಅಭಿವೃದ್ಧಿಗೆ ಅನುಮಾನವೇ ಅಡ್ಡಿ

ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು…

5 hours ago

ಕೊಡಗು ವಿಶ್ವವಿದ್ಯಾಲಯ ಬಗೆಹರಿಯದ ಕೊರಗು!

ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು…

5 hours ago

ಚಾ.ನಗರ ವಿವಿಗೆ ಅತಿಥಿ ಅಧ್ಯಾಪಕರೇ ಆಧಾರ!

ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು,…

5 hours ago

ಮೈಸೂರು ವಿವಿಗೆ ಹಣಕಾಸು ಮುಗ್ಗಟ್ಟು

ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು…

5 hours ago

ಓದುಗರ ಪತ್ರ: ಒಣಗಿದ ಮರ ತೆರವುಗೊಳಿಸಿ

ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…

8 hours ago

ಓದುಗರ ಪತ್ರ: ಎಸ್.ಜಾನಕಿ ಅಜರಾಮರ

ದಕ್ಷಿಣ ಭಾರತದ ಕೋಗಿಲೆ ಎಂದೇ ಜನಪ್ರಿಯರಾಗಿದ್ದ, ಎಸ್. ಜಾನಕಿಯವರು ತಮ್ಮ ಅಂತಿಮ ಇಚ್ಛೆಯಂತೆ ಕನ್ನಡದ ನೆಲದಲ್ಲಿ ಅದರಲ್ಲೂ ಸಾಂಸ್ಕೃತಿಕ ನಗರಿ…

8 hours ago