ಕ್ರೀಡೆ

IPL-2024: ಪಂದ್ಯಗಳ ವೇಳಾಪಟ್ಟಿ, ನೇರಪ್ರಸಾರದ ಬಗೆಗಿನ ಮಾಹಿತಿ ಇಲ್ಲಿದೆ ನೋಡಿ!

ಚೆನ್ನೈ: ಐಪಿಎಲ್‌ ಸೀಸನ್‌ 17 ಇದೇ ಮಾರ್ಚ್‌ 22ರಿಂದ (ನಾಳೆ) ನಡೆಯಲಿದೆ. ಆ ಮೂಲಕ ಚುಟುಕು ಕ್ರಿಕೆಟ್‌ಗೆ ಅದ್ದೂರಿ ಚಾಲನೆ ದೊರೆಯಲಿದೆ.

ಈ ಸೀಸನ್‌ನ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಚೆನ್ನೈ ಸೂಪರ್‌ ಕಿಂಗ್ಸ್‌ (ಸಿಎಸ್‌ಕೆ) ಮತ್ತು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಅರ್‌ಸಿಬಿ) ತಂಡಗಳು ಚೆನ್ನೈನ ಪಿ.ಚಿದಂಬರಂ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಐಪಿಎಲ್‌ ಮೊದಲ ಹಂತದ ಪಂದ್ಯಗಳ ವೇಳಾಪಟ್ಟಿ ಮಾತ್ರ ಬಿಡುಗಡೆಯಾಗಿದೆ. ಮಾರ್ಚ್ 22ರಿಂದ ಏಪ್ರಿಲ್ 7ರವರೆಗೆ ಮೊದಲ ಹಂತದಲ್ಲೆ ಕೇವಲ 21 ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಬಿಸಿಸಿಐ ಬಿಡುಗಡೆ ಮಾಡಿದೆ. ಈ ಸೀಸನ್‌ನ ಫೈನಲ್ ಪಂದ್ಯವು ಮೇ 26ರಂದು ನಡೆಯಲಿದೆ.

ಉದ್ಘಾಟನಾ ಸಮಾರಂಭ ಹಿನ್ನೆಲೆಯಲ್ಲಿ ಐಪಿಎಲ್‌ ಆರಂಭಿಕ ಪಂದ್ಯ ಮಾತ್ರ ರಾತ್ರಿ 8 ಗಂಟೆಗೆ ಆರಂಭವಾಗಲಿದೆ. ಉಳಿದ ಪಂದ್ಯಗಳು ಸಂಜೆ 7.30ಕ್ಕೆ ಆರಂಭವಾಗಲಿವೆ. ಕೆಲವು ದಿನಗಳಲ್ಲಿ ಎರಡೆರಡು ಪಂದ್ಯಗಳು ನಡೆಯಲಿದ್ದು, ಆ ದಿನದ ಮೊದಲ ಪಂದ್ಯ ಮಧ್ಯಾಹ್ನ 3:30ಕ್ಕೆ ಪ್ರಾರಂಭವಾಗಲಿದೆ.

ನೇರ ಪ್ರಸಾರ ವೀಕ್ಷಣೆ ಹೇಗೆ?
ಭಾರತದಲ್ಲಿ ಟಿವಿ ಮೂಲಕ ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ ನಲ್ಲಿ ಐಪಿಎಲ್ 2024ರ ಆವೃತ್ತಿಯ ಪಂದ್ಯಗಳನ್ನು ನೇರಪ್ರಸಾರ ಮಾಡುತ್ತಿವೆ. ಲೈವ್‌ ಸ್ಟ್ರೀಮಿಂಗ್‌ನ್ನು ಜಿಯೋ ಸಿನಿಮಾದಲ್ಲಿ ವೀಕ್ಷಿಸಬಹುದಾಗಿದೆ.

ಐಪಿಎಲ್ 2024ರ ಮೊದಲ ಹಂತದ ವೇಳಾಪಟ್ಟಿ

ಮಾರ್ಚ್ 22- ರಾತ್ರಿ 8:00 ಗಂಟೆ: ಸಿಎಸ್‌ಕೆ vs ಆರ್‌ಸಿಬಿ, ಚೆನ್ನೈ.

ಮಾರ್ಚ್ 23- ಮಧ್ಯಾಹ್ನ 3:30: ಪಿಬಿಕೆಎಸ್ vs ಡಿಸಿ, ಮೊಹಾಲಿ.

ಮಾರ್ಚ್ 23- ಸಂಜೆ 7:30: ಕೆಕೆಆರ್ vs ಎಸ್ಆರ್‌ಹೆಚ್, ಕೋಲ್ಕತಾ.

ಮಾರ್ಚ್ 24- ಮಧ್ಯಾಹ್ನ 3:30: ಆರ್‌ಆರ್ vs ಎಲ್ಎಸ್‌ಜಿ, ಜೈಪುರ.

ಮಾರ್ಚ್ 24- ಸಂಜೆ 7:30: ಜಿಟಿ vs ಎಂಐ, ಅಹಮದಾಬಾದ್.

ಮಾರ್ಚ್ 25- ಸಂಜೆ 7:30: ಆರ್‌ಸಿಬಿ vs ಪಿಬಿಕೆಎಸ್, ಬೆಂಗಳೂರು.

ಮಾರ್ಚ್ 26- ಸಂಜೆ 7:30: ಸಿಎಸ್‌ಕೆ vs ಜಿಟಿ, ಚೆನ್ನೈ.

ಮಾರ್ಚ್ 27- ಸಂಜೆ 7:30: ಎಸ್ಆರ್‌ಹೆಚ್ vs ಎಂಐ, ಹೈದರಾಬಾದ್.

ಮಾರ್ಚ್ 28- ಸಂಜೆ 7:30: ಆರ್‌ಆರ್ vs ಡಿಸಿ, ಜೈಪುರ.

ಮಾರ್ಚ್ 29- ಸಂಜೆ 7.30: ಆರ್‌ಸಿಬಿ vs ಕೆಕೆಆರ್, ಬೆಂಗಳೂರು.

ಮಾರ್ಚ್ 30- ಸಂಜೆ 7:30: ಎಲ್ಎಸ್‌ಜಿ vs ಪಿಬಿಕೆಎಸ್, ಲಕ್ನೋ.

ಮಾರ್ಚ್ 31- ಮಧ್ಯಾಹ್ನ 3:30: ಜಿಟಿ vs ಎಸ್ಆರ್‌ಹೆಚ್, ಅಹಮದಾಬಾದ್.

ಮಾರ್ಚ್ 31- ಸಂಜೆ 7:30: ಡಿಸಿ vs ಸಿಎಸ್‌ಕೆ, ವಿಶಾಖಪಟ್ಟಣಂ.

ಏಪ್ರಿಲ್ 1- ಸಂಜೆ 7:30: ಮುಂಬೈ vs ಆರ್‌ಆರ್, ಮುಂಬೈ.

ಏಪ್ರಿಲ್ 2- ಸಂಜೆ 7:30: ಆರ್‌ಸಿಬಿ vs ಎಲ್ಎಸ್‌ಜಿ, ಬೆಂಗಳೂರು.

ಏಪ್ರಿಲ್ 3- ಸಂಜೆ 7:30: ಡಿಸಿ vs ಕೆಕೆಆರ್, ವಿಶಾಖಪಟ್ಟಣಂ.

ಏಪ್ರಿಲ್ 4- ಸಂಜೆ 7:30: ಜಿಟಿ vs ಪಿಬಿಕೆಎಸ್, ಅಹಮದಾಬಾದ್.

ಏಪ್ರಿಲ್ 5- ಸಂಜೆ 7:30: ಎಸ್ಆರ್‌ಎಚ್ vs ಸಿಎಸ್ಕೆ, ಹೈದರಾಬಾದ್.

ಏಪ್ರಿಲ್ 6- ಸಂಜೆ 7:30: ಆರ್‌ಆರ್ vs ಆರ್‌ಸಿಬಿ, ಜೈಪುರ.

ಏಪ್ರಿಲ್ 7- ಮಧ್ಯಾಹ್ನ 3:30: ಮುಂಬೈ vs ಡಿಸಿ.

ಏಪ್ರಿಲ್ 7- ಸಂಜೆ 7:30: ಎಲ್ಎಸ್‌ಜಿ vs ಜಿಟಿ, ಲಕ್ನೋ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

23 mins ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

49 mins ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

2 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

2 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

2 hours ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

3 hours ago