ಕ್ರೀಡೆ

IPL-2024: ಪಂದ್ಯಗಳ ವೇಳಾಪಟ್ಟಿ, ನೇರಪ್ರಸಾರದ ಬಗೆಗಿನ ಮಾಹಿತಿ ಇಲ್ಲಿದೆ ನೋಡಿ!

ಚೆನ್ನೈ: ಐಪಿಎಲ್‌ ಸೀಸನ್‌ 17 ಇದೇ ಮಾರ್ಚ್‌ 22ರಿಂದ (ನಾಳೆ) ನಡೆಯಲಿದೆ. ಆ ಮೂಲಕ ಚುಟುಕು ಕ್ರಿಕೆಟ್‌ಗೆ ಅದ್ದೂರಿ ಚಾಲನೆ ದೊರೆಯಲಿದೆ.

ಈ ಸೀಸನ್‌ನ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಚೆನ್ನೈ ಸೂಪರ್‌ ಕಿಂಗ್ಸ್‌ (ಸಿಎಸ್‌ಕೆ) ಮತ್ತು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಅರ್‌ಸಿಬಿ) ತಂಡಗಳು ಚೆನ್ನೈನ ಪಿ.ಚಿದಂಬರಂ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಐಪಿಎಲ್‌ ಮೊದಲ ಹಂತದ ಪಂದ್ಯಗಳ ವೇಳಾಪಟ್ಟಿ ಮಾತ್ರ ಬಿಡುಗಡೆಯಾಗಿದೆ. ಮಾರ್ಚ್ 22ರಿಂದ ಏಪ್ರಿಲ್ 7ರವರೆಗೆ ಮೊದಲ ಹಂತದಲ್ಲೆ ಕೇವಲ 21 ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಬಿಸಿಸಿಐ ಬಿಡುಗಡೆ ಮಾಡಿದೆ. ಈ ಸೀಸನ್‌ನ ಫೈನಲ್ ಪಂದ್ಯವು ಮೇ 26ರಂದು ನಡೆಯಲಿದೆ.

ಉದ್ಘಾಟನಾ ಸಮಾರಂಭ ಹಿನ್ನೆಲೆಯಲ್ಲಿ ಐಪಿಎಲ್‌ ಆರಂಭಿಕ ಪಂದ್ಯ ಮಾತ್ರ ರಾತ್ರಿ 8 ಗಂಟೆಗೆ ಆರಂಭವಾಗಲಿದೆ. ಉಳಿದ ಪಂದ್ಯಗಳು ಸಂಜೆ 7.30ಕ್ಕೆ ಆರಂಭವಾಗಲಿವೆ. ಕೆಲವು ದಿನಗಳಲ್ಲಿ ಎರಡೆರಡು ಪಂದ್ಯಗಳು ನಡೆಯಲಿದ್ದು, ಆ ದಿನದ ಮೊದಲ ಪಂದ್ಯ ಮಧ್ಯಾಹ್ನ 3:30ಕ್ಕೆ ಪ್ರಾರಂಭವಾಗಲಿದೆ.

ನೇರ ಪ್ರಸಾರ ವೀಕ್ಷಣೆ ಹೇಗೆ?
ಭಾರತದಲ್ಲಿ ಟಿವಿ ಮೂಲಕ ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ ನಲ್ಲಿ ಐಪಿಎಲ್ 2024ರ ಆವೃತ್ತಿಯ ಪಂದ್ಯಗಳನ್ನು ನೇರಪ್ರಸಾರ ಮಾಡುತ್ತಿವೆ. ಲೈವ್‌ ಸ್ಟ್ರೀಮಿಂಗ್‌ನ್ನು ಜಿಯೋ ಸಿನಿಮಾದಲ್ಲಿ ವೀಕ್ಷಿಸಬಹುದಾಗಿದೆ.

ಐಪಿಎಲ್ 2024ರ ಮೊದಲ ಹಂತದ ವೇಳಾಪಟ್ಟಿ

ಮಾರ್ಚ್ 22- ರಾತ್ರಿ 8:00 ಗಂಟೆ: ಸಿಎಸ್‌ಕೆ vs ಆರ್‌ಸಿಬಿ, ಚೆನ್ನೈ.

ಮಾರ್ಚ್ 23- ಮಧ್ಯಾಹ್ನ 3:30: ಪಿಬಿಕೆಎಸ್ vs ಡಿಸಿ, ಮೊಹಾಲಿ.

ಮಾರ್ಚ್ 23- ಸಂಜೆ 7:30: ಕೆಕೆಆರ್ vs ಎಸ್ಆರ್‌ಹೆಚ್, ಕೋಲ್ಕತಾ.

ಮಾರ್ಚ್ 24- ಮಧ್ಯಾಹ್ನ 3:30: ಆರ್‌ಆರ್ vs ಎಲ್ಎಸ್‌ಜಿ, ಜೈಪುರ.

ಮಾರ್ಚ್ 24- ಸಂಜೆ 7:30: ಜಿಟಿ vs ಎಂಐ, ಅಹಮದಾಬಾದ್.

ಮಾರ್ಚ್ 25- ಸಂಜೆ 7:30: ಆರ್‌ಸಿಬಿ vs ಪಿಬಿಕೆಎಸ್, ಬೆಂಗಳೂರು.

ಮಾರ್ಚ್ 26- ಸಂಜೆ 7:30: ಸಿಎಸ್‌ಕೆ vs ಜಿಟಿ, ಚೆನ್ನೈ.

ಮಾರ್ಚ್ 27- ಸಂಜೆ 7:30: ಎಸ್ಆರ್‌ಹೆಚ್ vs ಎಂಐ, ಹೈದರಾಬಾದ್.

ಮಾರ್ಚ್ 28- ಸಂಜೆ 7:30: ಆರ್‌ಆರ್ vs ಡಿಸಿ, ಜೈಪುರ.

ಮಾರ್ಚ್ 29- ಸಂಜೆ 7.30: ಆರ್‌ಸಿಬಿ vs ಕೆಕೆಆರ್, ಬೆಂಗಳೂರು.

ಮಾರ್ಚ್ 30- ಸಂಜೆ 7:30: ಎಲ್ಎಸ್‌ಜಿ vs ಪಿಬಿಕೆಎಸ್, ಲಕ್ನೋ.

ಮಾರ್ಚ್ 31- ಮಧ್ಯಾಹ್ನ 3:30: ಜಿಟಿ vs ಎಸ್ಆರ್‌ಹೆಚ್, ಅಹಮದಾಬಾದ್.

ಮಾರ್ಚ್ 31- ಸಂಜೆ 7:30: ಡಿಸಿ vs ಸಿಎಸ್‌ಕೆ, ವಿಶಾಖಪಟ್ಟಣಂ.

ಏಪ್ರಿಲ್ 1- ಸಂಜೆ 7:30: ಮುಂಬೈ vs ಆರ್‌ಆರ್, ಮುಂಬೈ.

ಏಪ್ರಿಲ್ 2- ಸಂಜೆ 7:30: ಆರ್‌ಸಿಬಿ vs ಎಲ್ಎಸ್‌ಜಿ, ಬೆಂಗಳೂರು.

ಏಪ್ರಿಲ್ 3- ಸಂಜೆ 7:30: ಡಿಸಿ vs ಕೆಕೆಆರ್, ವಿಶಾಖಪಟ್ಟಣಂ.

ಏಪ್ರಿಲ್ 4- ಸಂಜೆ 7:30: ಜಿಟಿ vs ಪಿಬಿಕೆಎಸ್, ಅಹಮದಾಬಾದ್.

ಏಪ್ರಿಲ್ 5- ಸಂಜೆ 7:30: ಎಸ್ಆರ್‌ಎಚ್ vs ಸಿಎಸ್ಕೆ, ಹೈದರಾಬಾದ್.

ಏಪ್ರಿಲ್ 6- ಸಂಜೆ 7:30: ಆರ್‌ಆರ್ vs ಆರ್‌ಸಿಬಿ, ಜೈಪುರ.

ಏಪ್ರಿಲ್ 7- ಮಧ್ಯಾಹ್ನ 3:30: ಮುಂಬೈ vs ಡಿಸಿ.

ಏಪ್ರಿಲ್ 7- ಸಂಜೆ 7:30: ಎಲ್ಎಸ್‌ಜಿ vs ಜಿಟಿ, ಲಕ್ನೋ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹೊರ್ಮುಜ್‌ ಬಿಕ್ಕಟ್ಟು | ಇರಾನ್‌ನ ಬಂದರುಗಳಿಗೆ ಅಮೆರಿಕದ ದಿಗ್ಬಂಧನ ಪ್ರಾರಂಭ

ಟೆಹ್ರಾನ್‌ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…

3 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…

4 hours ago

ಅನಗತ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ ; ಕೈ ಶಾಸಕರಿಗೆ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…

4 hours ago

ಹೆದ್ದಾರಿ ತಡೆದು ಪ್ರತಿಭಟನೆ : ಬಂಡೀಪುರ ರಾತ್ರಿ ಸಂಚಾರ ತೆರವು ಮಾಡದಂತೆ ಆಗ್ರಹ

ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…

5 hours ago

ಕೊಡಗು | ತೆರೆದ ಬಾವಿಗೆ ಬಿದ್ದ ಕಾಡಾನೆ ಮರಿ , ರಕ್ಷಣೆ

ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…

5 hours ago

ಹೊರ್ಮುಜ್‌ ಬಿಕ್ಕಟ್ಟು | ಅಮೆರಿಕ ದಿಗ್ಬಂಧನ ಬೆನ್ನಲ್ಲೇ ಇರಾನ್‌ ವಾರ್ನಿಂಗ್‌

ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…

6 hours ago