ಕ್ರೀಡೆ

IPL-2024: ಪಂದ್ಯಗಳ ವೇಳಾಪಟ್ಟಿ, ನೇರಪ್ರಸಾರದ ಬಗೆಗಿನ ಮಾಹಿತಿ ಇಲ್ಲಿದೆ ನೋಡಿ!

ಚೆನ್ನೈ: ಐಪಿಎಲ್‌ ಸೀಸನ್‌ 17 ಇದೇ ಮಾರ್ಚ್‌ 22ರಿಂದ (ನಾಳೆ) ನಡೆಯಲಿದೆ. ಆ ಮೂಲಕ ಚುಟುಕು ಕ್ರಿಕೆಟ್‌ಗೆ ಅದ್ದೂರಿ ಚಾಲನೆ ದೊರೆಯಲಿದೆ.

ಈ ಸೀಸನ್‌ನ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಚೆನ್ನೈ ಸೂಪರ್‌ ಕಿಂಗ್ಸ್‌ (ಸಿಎಸ್‌ಕೆ) ಮತ್ತು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಅರ್‌ಸಿಬಿ) ತಂಡಗಳು ಚೆನ್ನೈನ ಪಿ.ಚಿದಂಬರಂ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಐಪಿಎಲ್‌ ಮೊದಲ ಹಂತದ ಪಂದ್ಯಗಳ ವೇಳಾಪಟ್ಟಿ ಮಾತ್ರ ಬಿಡುಗಡೆಯಾಗಿದೆ. ಮಾರ್ಚ್ 22ರಿಂದ ಏಪ್ರಿಲ್ 7ರವರೆಗೆ ಮೊದಲ ಹಂತದಲ್ಲೆ ಕೇವಲ 21 ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಬಿಸಿಸಿಐ ಬಿಡುಗಡೆ ಮಾಡಿದೆ. ಈ ಸೀಸನ್‌ನ ಫೈನಲ್ ಪಂದ್ಯವು ಮೇ 26ರಂದು ನಡೆಯಲಿದೆ.

ಉದ್ಘಾಟನಾ ಸಮಾರಂಭ ಹಿನ್ನೆಲೆಯಲ್ಲಿ ಐಪಿಎಲ್‌ ಆರಂಭಿಕ ಪಂದ್ಯ ಮಾತ್ರ ರಾತ್ರಿ 8 ಗಂಟೆಗೆ ಆರಂಭವಾಗಲಿದೆ. ಉಳಿದ ಪಂದ್ಯಗಳು ಸಂಜೆ 7.30ಕ್ಕೆ ಆರಂಭವಾಗಲಿವೆ. ಕೆಲವು ದಿನಗಳಲ್ಲಿ ಎರಡೆರಡು ಪಂದ್ಯಗಳು ನಡೆಯಲಿದ್ದು, ಆ ದಿನದ ಮೊದಲ ಪಂದ್ಯ ಮಧ್ಯಾಹ್ನ 3:30ಕ್ಕೆ ಪ್ರಾರಂಭವಾಗಲಿದೆ.

ನೇರ ಪ್ರಸಾರ ವೀಕ್ಷಣೆ ಹೇಗೆ?
ಭಾರತದಲ್ಲಿ ಟಿವಿ ಮೂಲಕ ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ ನಲ್ಲಿ ಐಪಿಎಲ್ 2024ರ ಆವೃತ್ತಿಯ ಪಂದ್ಯಗಳನ್ನು ನೇರಪ್ರಸಾರ ಮಾಡುತ್ತಿವೆ. ಲೈವ್‌ ಸ್ಟ್ರೀಮಿಂಗ್‌ನ್ನು ಜಿಯೋ ಸಿನಿಮಾದಲ್ಲಿ ವೀಕ್ಷಿಸಬಹುದಾಗಿದೆ.

ಐಪಿಎಲ್ 2024ರ ಮೊದಲ ಹಂತದ ವೇಳಾಪಟ್ಟಿ

ಮಾರ್ಚ್ 22- ರಾತ್ರಿ 8:00 ಗಂಟೆ: ಸಿಎಸ್‌ಕೆ vs ಆರ್‌ಸಿಬಿ, ಚೆನ್ನೈ.

ಮಾರ್ಚ್ 23- ಮಧ್ಯಾಹ್ನ 3:30: ಪಿಬಿಕೆಎಸ್ vs ಡಿಸಿ, ಮೊಹಾಲಿ.

ಮಾರ್ಚ್ 23- ಸಂಜೆ 7:30: ಕೆಕೆಆರ್ vs ಎಸ್ಆರ್‌ಹೆಚ್, ಕೋಲ್ಕತಾ.

ಮಾರ್ಚ್ 24- ಮಧ್ಯಾಹ್ನ 3:30: ಆರ್‌ಆರ್ vs ಎಲ್ಎಸ್‌ಜಿ, ಜೈಪುರ.

ಮಾರ್ಚ್ 24- ಸಂಜೆ 7:30: ಜಿಟಿ vs ಎಂಐ, ಅಹಮದಾಬಾದ್.

ಮಾರ್ಚ್ 25- ಸಂಜೆ 7:30: ಆರ್‌ಸಿಬಿ vs ಪಿಬಿಕೆಎಸ್, ಬೆಂಗಳೂರು.

ಮಾರ್ಚ್ 26- ಸಂಜೆ 7:30: ಸಿಎಸ್‌ಕೆ vs ಜಿಟಿ, ಚೆನ್ನೈ.

ಮಾರ್ಚ್ 27- ಸಂಜೆ 7:30: ಎಸ್ಆರ್‌ಹೆಚ್ vs ಎಂಐ, ಹೈದರಾಬಾದ್.

ಮಾರ್ಚ್ 28- ಸಂಜೆ 7:30: ಆರ್‌ಆರ್ vs ಡಿಸಿ, ಜೈಪುರ.

ಮಾರ್ಚ್ 29- ಸಂಜೆ 7.30: ಆರ್‌ಸಿಬಿ vs ಕೆಕೆಆರ್, ಬೆಂಗಳೂರು.

ಮಾರ್ಚ್ 30- ಸಂಜೆ 7:30: ಎಲ್ಎಸ್‌ಜಿ vs ಪಿಬಿಕೆಎಸ್, ಲಕ್ನೋ.

ಮಾರ್ಚ್ 31- ಮಧ್ಯಾಹ್ನ 3:30: ಜಿಟಿ vs ಎಸ್ಆರ್‌ಹೆಚ್, ಅಹಮದಾಬಾದ್.

ಮಾರ್ಚ್ 31- ಸಂಜೆ 7:30: ಡಿಸಿ vs ಸಿಎಸ್‌ಕೆ, ವಿಶಾಖಪಟ್ಟಣಂ.

ಏಪ್ರಿಲ್ 1- ಸಂಜೆ 7:30: ಮುಂಬೈ vs ಆರ್‌ಆರ್, ಮುಂಬೈ.

ಏಪ್ರಿಲ್ 2- ಸಂಜೆ 7:30: ಆರ್‌ಸಿಬಿ vs ಎಲ್ಎಸ್‌ಜಿ, ಬೆಂಗಳೂರು.

ಏಪ್ರಿಲ್ 3- ಸಂಜೆ 7:30: ಡಿಸಿ vs ಕೆಕೆಆರ್, ವಿಶಾಖಪಟ್ಟಣಂ.

ಏಪ್ರಿಲ್ 4- ಸಂಜೆ 7:30: ಜಿಟಿ vs ಪಿಬಿಕೆಎಸ್, ಅಹಮದಾಬಾದ್.

ಏಪ್ರಿಲ್ 5- ಸಂಜೆ 7:30: ಎಸ್ಆರ್‌ಎಚ್ vs ಸಿಎಸ್ಕೆ, ಹೈದರಾಬಾದ್.

ಏಪ್ರಿಲ್ 6- ಸಂಜೆ 7:30: ಆರ್‌ಆರ್ vs ಆರ್‌ಸಿಬಿ, ಜೈಪುರ.

ಏಪ್ರಿಲ್ 7- ಮಧ್ಯಾಹ್ನ 3:30: ಮುಂಬೈ vs ಡಿಸಿ.

ಏಪ್ರಿಲ್ 7- ಸಂಜೆ 7:30: ಎಲ್ಎಸ್‌ಜಿ vs ಜಿಟಿ, ಲಕ್ನೋ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

8 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

11 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

11 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

11 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

15 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 day ago