ಕ್ರೀಡೆ

ಐಪಿಎಲ್‌ 2024 ಟೂರ್ನಿಗೆ ವರ್ಣರಂಜಿತ ಚಾಲನೆ

ಚೆನ್ನೈ: ಇಲ್ಲಿನ ಎಂಎ ಚಿದಂಬರಂ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಬಹು ನಿರೀಕ್ಷಿತ ಇಂಡಿಯನ್‌ ಪ್ರೀಮಿಯರ್‌ ಲೀಗ್‌ 17ನೇ ಆವೃತ್ತಿಗೆ ವರ್ಣರಂಜಿತ ಚಾಲನೆ ದೊರೆಯಿತು. ಉದ್ಘಾಟನಾ ಸಮಾರಂಭದಲ್ಲಿ ಮೊದಲಿಗೆ ನಟರಾದ ಅಕ್ಷಯ್‌ ಕುಮಾರ್‌ ಹಾಗೂ ಟೈಗರ್‌ ಶ್ರಾಫ್‌ ಹಲವು ಬಾಲಿವುಡ್‌ ಹಾಡುಗಳಿಗೆ ಹೆಜ್ಜೆ ಹಾಕಿದರು, ಸಾಹಸ ನೃತ್ಯಗಳನ್ನೂ ಸಹ ಮಾಡಿ ಕ್ರೀಡಾಭಿಮಾನಿಗಳಿಗೆ ಮನರಂಜನೆ ನೀಡಿದರು. ದೇಶಭಕ್ತಿ ಗೀತೆಗೆ ರಾಷ್ಟ್ರಧ್ವಜ ಹಿಡಿದು ಕ್ರೀಡಾಂಗಣವನ್ನು ಒಂದು ಸುತ್ತು ಹಾಕಿ ಸಂಭ್ರಮಿಸಿದರು.

 

ಖ್ಯಾತ ಹಿನ್ನೆಲೆ ಗಾಯಕ ಸೋನು ನಿಗಮ್‌ ʼವಂದೇ ಮಾತರಂʼ ಹಾಡಿ ರಂಜಿಸಿದರು. ಎಆರ್‌ ರೆಹಮಾನ್‌ ಸಹ ಸೋನು ನಿಗಮ್‌ ಜತೆ ಸೇರಿ ವಂದೇ ಮಾತರಂ ಹಾಡಿ ಬಳಿಕ ತಮ್ಮ ಸಂಯೋಜನೆಯ ಕೆಲ ಹಾಡುಗಳನ್ನು ಹಾಡಿದರು. ಗಾಯಕರಾದ ಮೋಹಿತ್‌ ಚೌಹಾಣ್‌, ಗಾಯಕಿಯರಾದ ನೀತಿ ಮೋಹನ್‌, ಶ್ರೇಯಾ ಘೋಷಾಲ್‌ ಸಹ ಈ ಕಾರ್ಯಕ್ರಮದಲ್ಲಿ ಹಾಡುಗಳನ್ನು ಹಾಡಿ ರಂಜಿಸಿದರು. ಎಆರ್‌ ರೆಹಮಾನ್‌ ಸಂಯೋಜನೆಯ ಜೈಹೋ ಹಾಡಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಎಲ್ಲಾ ಗಾಯಕರೂ ದನಿಗೂಡಿಸುವ ಮೂಲಕ ಮನರಂಜನಾ ಪ್ರದರ್ಶನಕ್ಕೆ ತೆರೆ ಎಳೆದರು. ಕ್ರೀಡಾಂಗಣದಲ್ಲಿ ಬಣ್ಣ ಬಣ್ಣದ ಬೃಹತ್‌ ಪಟಾಕಿಗಳನ್ನು ಸಿಡಿಸಲಾಯಿತು. ನೇರಪ್ರಸಾರದ ವೇಳೆ ಎಡಿಟಿಂಗ್‌ ಮೂಲಕ ಚಂದ್ರಯಾನ, ಇಂಡಿಯಾ ಗೇಟ್‌ ತೋರಿಸಲಾಯಿತು.

ನಂತರ ಬಿಸಿಸಿಐ ಅಧ್ಯಕ್ಷ ರೋಜರ್‌ ಬಿನ್ನಿ, ಕಾರ್ಯದರ್ಶಿ ಜಯ್‌ ಶಾ, ಐಪಿಎಲ್‌ ಅಧ್ಯಕ್ಷ ಅರುಣ್‌ ಧುಮಾಲ್‌, ಗಾಯಕರಾದ ಸೋನು ನಿಗಮ್‌, ಎಆರ್‌ ರೆಹಮಾನ್‌, ನಟರಾದ ಅಕ್ಷಯ್‌ ಕುಮಾರ್‌, ಟೈಗರ್‌ ಶ್ರಾಫ್‌ ವೇದಿಕೆಗೆ ಆಗಮಿಸಿದರು. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ನಾಯಕ ಫಾಫ್‌ ಡುಪ್ಲೆಸಿಸ್‌ ಮತ್ತು ಚೆನ್ನೈ ಸೂಪರ್ ಕಿಂಗ್ಸ್‌ನ ನೂತನ ನಾಯಕ ರುತುರಾಜ್‌ ಗಾಯಕ್ವಾಡ್‌ ಟ್ರೋಫಿಯೊಂದಿಗೆ ವೇದಿಕೆಯನ್ನೇರಿದರು. ಈ ಮೂಲಕ ಕ್ರಿಕೆಟ್‌ ಪ್ರಿಯರ ನೆಚ್ಚಿನ ಐಪಿಎಲ್ ಹೊಸ ಆವೃತ್ತಿಯನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು.

andolana

Recent Posts

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

15 mins ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

41 mins ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

2 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

2 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

2 hours ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

3 hours ago