ಚೆನ್ನೈ: ಇಲ್ಲಿನ ಎಂಎ ಚಿದಂಬರಂ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಆವೃತ್ತಿಗೆ ವರ್ಣರಂಜಿತ ಚಾಲನೆ ದೊರೆಯಿತು. ಉದ್ಘಾಟನಾ ಸಮಾರಂಭದಲ್ಲಿ ಮೊದಲಿಗೆ ನಟರಾದ ಅಕ್ಷಯ್ ಕುಮಾರ್ ಹಾಗೂ ಟೈಗರ್ ಶ್ರಾಫ್ ಹಲವು ಬಾಲಿವುಡ್ ಹಾಡುಗಳಿಗೆ ಹೆಜ್ಜೆ ಹಾಕಿದರು, ಸಾಹಸ ನೃತ್ಯಗಳನ್ನೂ ಸಹ ಮಾಡಿ ಕ್ರೀಡಾಭಿಮಾನಿಗಳಿಗೆ ಮನರಂಜನೆ ನೀಡಿದರು. ದೇಶಭಕ್ತಿ ಗೀತೆಗೆ ರಾಷ್ಟ್ರಧ್ವಜ ಹಿಡಿದು ಕ್ರೀಡಾಂಗಣವನ್ನು ಒಂದು ಸುತ್ತು ಹಾಕಿ ಸಂಭ್ರಮಿಸಿದರು.
ಖ್ಯಾತ ಹಿನ್ನೆಲೆ ಗಾಯಕ ಸೋನು ನಿಗಮ್ ʼವಂದೇ ಮಾತರಂʼ ಹಾಡಿ ರಂಜಿಸಿದರು. ಎಆರ್ ರೆಹಮಾನ್ ಸಹ ಸೋನು ನಿಗಮ್ ಜತೆ ಸೇರಿ ವಂದೇ ಮಾತರಂ ಹಾಡಿ ಬಳಿಕ ತಮ್ಮ ಸಂಯೋಜನೆಯ ಕೆಲ ಹಾಡುಗಳನ್ನು ಹಾಡಿದರು. ಗಾಯಕರಾದ ಮೋಹಿತ್ ಚೌಹಾಣ್, ಗಾಯಕಿಯರಾದ ನೀತಿ ಮೋಹನ್, ಶ್ರೇಯಾ ಘೋಷಾಲ್ ಸಹ ಈ ಕಾರ್ಯಕ್ರಮದಲ್ಲಿ ಹಾಡುಗಳನ್ನು ಹಾಡಿ ರಂಜಿಸಿದರು. ಎಆರ್ ರೆಹಮಾನ್ ಸಂಯೋಜನೆಯ ಜೈಹೋ ಹಾಡಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಎಲ್ಲಾ ಗಾಯಕರೂ ದನಿಗೂಡಿಸುವ ಮೂಲಕ ಮನರಂಜನಾ ಪ್ರದರ್ಶನಕ್ಕೆ ತೆರೆ ಎಳೆದರು. ಕ್ರೀಡಾಂಗಣದಲ್ಲಿ ಬಣ್ಣ ಬಣ್ಣದ ಬೃಹತ್ ಪಟಾಕಿಗಳನ್ನು ಸಿಡಿಸಲಾಯಿತು. ನೇರಪ್ರಸಾರದ ವೇಳೆ ಎಡಿಟಿಂಗ್ ಮೂಲಕ ಚಂದ್ರಯಾನ, ಇಂಡಿಯಾ ಗೇಟ್ ತೋರಿಸಲಾಯಿತು.
ನಂತರ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ, ಕಾರ್ಯದರ್ಶಿ ಜಯ್ ಶಾ, ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್, ಗಾಯಕರಾದ ಸೋನು ನಿಗಮ್, ಎಆರ್ ರೆಹಮಾನ್, ನಟರಾದ ಅಕ್ಷಯ್ ಕುಮಾರ್, ಟೈಗರ್ ಶ್ರಾಫ್ ವೇದಿಕೆಗೆ ಆಗಮಿಸಿದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕ ಫಾಫ್ ಡುಪ್ಲೆಸಿಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ನ ನೂತನ ನಾಯಕ ರುತುರಾಜ್ ಗಾಯಕ್ವಾಡ್ ಟ್ರೋಫಿಯೊಂದಿಗೆ ವೇದಿಕೆಯನ್ನೇರಿದರು. ಈ ಮೂಲಕ ಕ್ರಿಕೆಟ್ ಪ್ರಿಯರ ನೆಚ್ಚಿನ ಐಪಿಎಲ್ ಹೊಸ ಆವೃತ್ತಿಯನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು.
ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…
ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್ ಡಾ.ಗಿರೀಶ್ ಭಾರದ್ವಾಜ್ ಅವರು ಇಂದು ನಿಧನರಾಗಿದ್ದಾರೆ.…
ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…
ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಗ್ರಾಮದಲ್ಲಿ ತಡರಾತ್ರಿ ಭೀಕರ ಕೊಲೆ ನಡೆದಿದ್ದು, ಯುವಕನೊಬ್ಬನನ್ನು ದುಷ್ಕರ್ಮಿಗಳು ಅತ್ಯಂತ ಬರ್ಬರವಾಗಿ…
ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…
ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…