ಚೆನ್ನೈ: ಇಲ್ಲಿನ ಎಂಎ ಚಿದಂಬರಂ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಆವೃತ್ತಿಗೆ ವರ್ಣರಂಜಿತ ಚಾಲನೆ ದೊರೆಯಿತು. ಉದ್ಘಾಟನಾ ಸಮಾರಂಭದಲ್ಲಿ ಮೊದಲಿಗೆ ನಟರಾದ ಅಕ್ಷಯ್ ಕುಮಾರ್ ಹಾಗೂ ಟೈಗರ್ ಶ್ರಾಫ್ ಹಲವು ಬಾಲಿವುಡ್ ಹಾಡುಗಳಿಗೆ ಹೆಜ್ಜೆ ಹಾಕಿದರು, ಸಾಹಸ ನೃತ್ಯಗಳನ್ನೂ ಸಹ ಮಾಡಿ ಕ್ರೀಡಾಭಿಮಾನಿಗಳಿಗೆ ಮನರಂಜನೆ ನೀಡಿದರು. ದೇಶಭಕ್ತಿ ಗೀತೆಗೆ ರಾಷ್ಟ್ರಧ್ವಜ ಹಿಡಿದು ಕ್ರೀಡಾಂಗಣವನ್ನು ಒಂದು ಸುತ್ತು ಹಾಕಿ ಸಂಭ್ರಮಿಸಿದರು.
ಖ್ಯಾತ ಹಿನ್ನೆಲೆ ಗಾಯಕ ಸೋನು ನಿಗಮ್ ʼವಂದೇ ಮಾತರಂʼ ಹಾಡಿ ರಂಜಿಸಿದರು. ಎಆರ್ ರೆಹಮಾನ್ ಸಹ ಸೋನು ನಿಗಮ್ ಜತೆ ಸೇರಿ ವಂದೇ ಮಾತರಂ ಹಾಡಿ ಬಳಿಕ ತಮ್ಮ ಸಂಯೋಜನೆಯ ಕೆಲ ಹಾಡುಗಳನ್ನು ಹಾಡಿದರು. ಗಾಯಕರಾದ ಮೋಹಿತ್ ಚೌಹಾಣ್, ಗಾಯಕಿಯರಾದ ನೀತಿ ಮೋಹನ್, ಶ್ರೇಯಾ ಘೋಷಾಲ್ ಸಹ ಈ ಕಾರ್ಯಕ್ರಮದಲ್ಲಿ ಹಾಡುಗಳನ್ನು ಹಾಡಿ ರಂಜಿಸಿದರು. ಎಆರ್ ರೆಹಮಾನ್ ಸಂಯೋಜನೆಯ ಜೈಹೋ ಹಾಡಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಎಲ್ಲಾ ಗಾಯಕರೂ ದನಿಗೂಡಿಸುವ ಮೂಲಕ ಮನರಂಜನಾ ಪ್ರದರ್ಶನಕ್ಕೆ ತೆರೆ ಎಳೆದರು. ಕ್ರೀಡಾಂಗಣದಲ್ಲಿ ಬಣ್ಣ ಬಣ್ಣದ ಬೃಹತ್ ಪಟಾಕಿಗಳನ್ನು ಸಿಡಿಸಲಾಯಿತು. ನೇರಪ್ರಸಾರದ ವೇಳೆ ಎಡಿಟಿಂಗ್ ಮೂಲಕ ಚಂದ್ರಯಾನ, ಇಂಡಿಯಾ ಗೇಟ್ ತೋರಿಸಲಾಯಿತು.
ನಂತರ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ, ಕಾರ್ಯದರ್ಶಿ ಜಯ್ ಶಾ, ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್, ಗಾಯಕರಾದ ಸೋನು ನಿಗಮ್, ಎಆರ್ ರೆಹಮಾನ್, ನಟರಾದ ಅಕ್ಷಯ್ ಕುಮಾರ್, ಟೈಗರ್ ಶ್ರಾಫ್ ವೇದಿಕೆಗೆ ಆಗಮಿಸಿದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕ ಫಾಫ್ ಡುಪ್ಲೆಸಿಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ನ ನೂತನ ನಾಯಕ ರುತುರಾಜ್ ಗಾಯಕ್ವಾಡ್ ಟ್ರೋಫಿಯೊಂದಿಗೆ ವೇದಿಕೆಯನ್ನೇರಿದರು. ಈ ಮೂಲಕ ಕ್ರಿಕೆಟ್ ಪ್ರಿಯರ ನೆಚ್ಚಿನ ಐಪಿಎಲ್ ಹೊಸ ಆವೃತ್ತಿಯನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು.
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…