ಚೆನ್ನೈ: ಇಲ್ಲಿನ ಎಂಎ ಚಿದಂಬರಂ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಆವೃತ್ತಿಗೆ ವರ್ಣರಂಜಿತ ಚಾಲನೆ ದೊರೆಯಿತು. ಉದ್ಘಾಟನಾ ಸಮಾರಂಭದಲ್ಲಿ ಮೊದಲಿಗೆ ನಟರಾದ ಅಕ್ಷಯ್ ಕುಮಾರ್ ಹಾಗೂ ಟೈಗರ್ ಶ್ರಾಫ್ ಹಲವು ಬಾಲಿವುಡ್ ಹಾಡುಗಳಿಗೆ ಹೆಜ್ಜೆ ಹಾಕಿದರು, ಸಾಹಸ ನೃತ್ಯಗಳನ್ನೂ ಸಹ ಮಾಡಿ ಕ್ರೀಡಾಭಿಮಾನಿಗಳಿಗೆ ಮನರಂಜನೆ ನೀಡಿದರು. ದೇಶಭಕ್ತಿ ಗೀತೆಗೆ ರಾಷ್ಟ್ರಧ್ವಜ ಹಿಡಿದು ಕ್ರೀಡಾಂಗಣವನ್ನು ಒಂದು ಸುತ್ತು ಹಾಕಿ ಸಂಭ್ರಮಿಸಿದರು.
ಖ್ಯಾತ ಹಿನ್ನೆಲೆ ಗಾಯಕ ಸೋನು ನಿಗಮ್ ʼವಂದೇ ಮಾತರಂʼ ಹಾಡಿ ರಂಜಿಸಿದರು. ಎಆರ್ ರೆಹಮಾನ್ ಸಹ ಸೋನು ನಿಗಮ್ ಜತೆ ಸೇರಿ ವಂದೇ ಮಾತರಂ ಹಾಡಿ ಬಳಿಕ ತಮ್ಮ ಸಂಯೋಜನೆಯ ಕೆಲ ಹಾಡುಗಳನ್ನು ಹಾಡಿದರು. ಗಾಯಕರಾದ ಮೋಹಿತ್ ಚೌಹಾಣ್, ಗಾಯಕಿಯರಾದ ನೀತಿ ಮೋಹನ್, ಶ್ರೇಯಾ ಘೋಷಾಲ್ ಸಹ ಈ ಕಾರ್ಯಕ್ರಮದಲ್ಲಿ ಹಾಡುಗಳನ್ನು ಹಾಡಿ ರಂಜಿಸಿದರು. ಎಆರ್ ರೆಹಮಾನ್ ಸಂಯೋಜನೆಯ ಜೈಹೋ ಹಾಡಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಎಲ್ಲಾ ಗಾಯಕರೂ ದನಿಗೂಡಿಸುವ ಮೂಲಕ ಮನರಂಜನಾ ಪ್ರದರ್ಶನಕ್ಕೆ ತೆರೆ ಎಳೆದರು. ಕ್ರೀಡಾಂಗಣದಲ್ಲಿ ಬಣ್ಣ ಬಣ್ಣದ ಬೃಹತ್ ಪಟಾಕಿಗಳನ್ನು ಸಿಡಿಸಲಾಯಿತು. ನೇರಪ್ರಸಾರದ ವೇಳೆ ಎಡಿಟಿಂಗ್ ಮೂಲಕ ಚಂದ್ರಯಾನ, ಇಂಡಿಯಾ ಗೇಟ್ ತೋರಿಸಲಾಯಿತು.
ನಂತರ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ, ಕಾರ್ಯದರ್ಶಿ ಜಯ್ ಶಾ, ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್, ಗಾಯಕರಾದ ಸೋನು ನಿಗಮ್, ಎಆರ್ ರೆಹಮಾನ್, ನಟರಾದ ಅಕ್ಷಯ್ ಕುಮಾರ್, ಟೈಗರ್ ಶ್ರಾಫ್ ವೇದಿಕೆಗೆ ಆಗಮಿಸಿದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕ ಫಾಫ್ ಡುಪ್ಲೆಸಿಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ನ ನೂತನ ನಾಯಕ ರುತುರಾಜ್ ಗಾಯಕ್ವಾಡ್ ಟ್ರೋಫಿಯೊಂದಿಗೆ ವೇದಿಕೆಯನ್ನೇರಿದರು. ಈ ಮೂಲಕ ಕ್ರಿಕೆಟ್ ಪ್ರಿಯರ ನೆಚ್ಚಿನ ಐಪಿಎಲ್ ಹೊಸ ಆವೃತ್ತಿಯನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು.
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…
ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…
ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್ಗಳನ್ನು ಚಾಲನೆ ಮಾಡುವ ಬಗ್ಗೆ…
ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…
ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ. ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…