ಬೆಂಗಳೂರು: ಟೀಂ ಇಂಡಿಯಾ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ತರಬೇತಿ ಶಿಬಿರದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿದ್ದಾರೆ.
ವಿರಾಟ್ ಕೊಹ್ಲಿ ಭಾನುವಾರ ಲಂಡನ್ನಿಂದ ಭಾರತಕ್ಕೆ ಬಂದಿಳಿದಿದ್ದರು. ಸೋಮವಾರ ಆರ್ಸಿಬಿ ತಂಡವನ್ನು ಸೇರಿಕೊಂಡಿದ್ದಾರೆ. ತಮ್ಮ ಎರಡನೇ ಮಗು ಅಕಾಯ್ ಜನನದ ಕಾರಣ ಕೊಹ್ಲಿ ಲಂಡನ್ನಲ್ಲಿದ್ದರು.
ಇದೇ ಮಾ.22 ರಿಂದ ಆರಂಭವಾಗಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17ರ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ತಂಡಗಳು ಮುಖಾಮುಖಿಯಾಗಲಿದೆ.
ಮಗು ಜನನದ ಹಿನ್ನಲೆ ವಿರಾಟ್ ಕೊಹ್ಲಿ ಟೀಂ ಇಂಡಿಯಾ ಮತ್ತು ಇಂಗ್ಲೆಂಡ್ ನಡುವಿನ ಐದು ಟೆಸ್ಟ್ ಸರಣಿಗೆ ಅಲಭ್ಯರಾಗಿದ್ದರು.
ಇದೇ ಜೂನ್ನಿಂದ ಅಮೇರಿಕಾ ಮತ್ತು ಕೆರೆಬಿಯನ್ ನಾಡಿನಲ್ಲಿ ಆರಂಭವಾಗಲಿರುವ ಟಿ20 ವಿಶ್ವಕಪ್ಗೆ ವಿರಾಟ್ ಕೊಹ್ಲಿಯನ್ನು ಕೈಬಿಡುವ ಬಗ್ಗೆ ಚರ್ಚೆಗಳು ಆರಂಭವಾಗಿದ್ದು, ಈ ಕಾರಣದಿಂದಾಗಿ ಈ ಬಾರಿಯ ಐಪಿಎಲ್ ಪ್ರದರ್ಶನದ ಮೇಲೆ ಎಲ್ಲರ ಗಮನ ನೆಟ್ಟಿದೆ.
ಈ ಹಿಂದಿನ ಆವೃತ್ತಿಯಲ್ಲಿ ಕೊಹ್ಲಿ 2 ಶತಕ ಮತ್ತು 6 ಅರ್ಧಶತಕ ಸೇರಿದಂತೆ ಒಟ್ಟು 639 ರನ್ ಬಾರಿಸಿದ್ದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…