ಕ್ರೀಡೆ

IPL 2024: RCB vs CSK ಹೈವೋಲ್ಟೇಜ್‌ ಕದನ; ಆರ್‌ಸಿಬಿ ಪ್ಲೇಆಫ್ ಪ್ರವೇಶಿಸಲು ಇರುವ ದಾರಿಯೇನು?

ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು (ಮೇ.18) ಸಂಜೆ 7.30ಕ್ಕೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಚೆನ್ನೈಸೂಪರ್‌ ಕಿಂಗ್ಸ್‌ ನಡುವೆ ಹೈ-ವೋಲ್ಟೇಜ್‌ ಕದನಕ್ಕೆ ವೇದಿಕೆ ಸಜ್ಜಾಗಿದೆ.

ಈ ಸೀಸನ್‌ನಲ್ಲಿ ನಾಲ್ಕನೇ ಸ್ಥಾನಕ್ಕೇರಿ ಪ್ಲೇಆಫ್‌ ಸುತ್ತಿಗೆ ಕ್ವಾಲಿಫೈ ಆಗಲು ಇಂದಿನ ಪಂದ್ಯ ಬಹಳ ಮುಖ್ಯ ಆಗಲಿದ್ದು, ಸಿಎಸ್‌ಕೆ-ಆರ್‌ಸಿಬಿ ನಡುವಣ ಪಂದ್ಯ ಡಿಸೈಡರ್‌ ಗೇಮ್ ಆಗಿದೆ.

ಸಿಎಸ್‌ಕೆ‌ ಹಾಗೂ ಆರ್‌ಸಿಬಿ ಈವರೆಗೆ 31 ಬಾರಿ ಮುಖಾಮುಖಿಯಾಗಿದ್ದು, 21 ಬಾರಿ ಸಿಎಸ್‌ಕೆ ಗೆದ್ದಿದ್ದರೆ, 10 ಬಾರಿ ಆರ್‌ಸಿಬಿ ವಿಜಯ ದಾಖಲಿಸಿದೆ. ಇನ್ನು ಈ ಸೀಸನ್‌ನಲ್ಲಿ ಸಿಎಸ್‌ಕೆ 13 ಪಂದ್ಯಗಳಲ್ಲಿ 7 ಪಂದ್ಯ ಗೆದ್ದು, 6 ಪಂದ್ಯ ಸೋತು 14 ಪಾಯಿಂಟ್ಸ್‌ ಪಡೆದು ನಾಲ್ಕನೇ ಸ್ಥಾನದಲ್ಲಿದೆ. ಇತ್ತ 13 ಪಂದ್ಯಗಳನ್ನಾಡಿರುವ ಆರ್‌ಸಿಬಿ 6 ಪಂದ್ಯ ಗೆದ್ದು, 7 ಪಂದ್ಯ ಸೋತು 12 ಅಂಕ ಗಳಿಸಿ 6ನೇ ಸ್ಥಾನದಲ್ಲಿದೆ.

ಸಿಎಸ್‌ಕೆ ಈ ಪಂದ್ಯ ಗೆದ್ದರೆ ನೇರವಾಗಿ ಪ್ಲೇಆಫ್‌ಗೆ ಅರ್ಹತೆ ಪಡೆಯಲಿದೆ. ಅಥವಾ ಮಳೆಯಿಂದ ರದ್ದಾದರೂ ಕೂಡ ಒಂದು ಅಂಕ ಪಡೆದು ಕ್ವಾಲಿಫೈ ಆಗಲಿದೆ.

ಆರ್‌ಸಿಬಿಗೆ ಪ್ಲೇಆಫ್‌ ಹಾದಿ ಹೀಗಿದೆ: ಸದ್ಯ ನಾಲ್ಕನೇ ಸ್ಥಾನದಲ್ಲಿರುವ ಸಿಎಸ್‌ಕೆ 13 ಪಂದ್ಯಗಳಲ್ಲಿ 7 ಪಂದ್ಯ ಗೆದ್ದು 14 ಪಾಯಿಂಟ್ಸ್‌ನೊಂದಿಗೆ +0.528ರನ್‌ ರೇಟ್‌ ಹೊಂದಿದೆ. ಇತ್ತ ಆರ್‌ಸಿಬಿ 13ಪಂದ್ಯದಲ್ಲಿ 6 ಗೆದ್ದು, 12 ಪಾಯಿಂಟ್ಸ್‌ನೊಂದಿಗೆ +0.387 ರನ್‌ ರೇಟ್‌ ಗಳಿಸಿದೆ.

ಇತ್ತ ಆರ್‌ಸಿಬಿ ಕೊನೆಯ ಪಂದ್ಯ ಗೆದ್ದ ಮಾತ್ರಕ್ಕೆ ಪ್ಲೇಆಫ್‌ ಪ್ರವೇಶಿಸುವುದಿಲ್ಲ. ಆರ್‌ಸಿಬಿ ಬಹಳ ಅಂತರದಿಂದ ಗೆಲ್ಲಬೇಕು. ಇಲ್ಲವಾದಲ್ಲಿ ಆರ್‌ಸಿಬಿ ಗೆದ್ದರೂ ಟೂರ್ನಿಯಿಂದ ಹೊರ ಬೀಳುವುದು ನಿಶ್ಚಿತ.

ಆರ್‌ಸಿಬಿ ಈ ಪಂದ್ಯದಲ್ಲಿ ಟಾರ್ಗೆಟ್‌ ನೀಡಿದ್ದೇ ಆದರೆ ಕನಿಷ್ಟ 18 ರನ್‌ಗಳ ಅಂತರದಿಂದ ಗೆಲುವು ದಾಖಲಿಸಬೇಕು. ಇಲ್ಲ ಚೇಸ್‌ ಮಾಡಿದರೆ 18.1 ಓವರ್‌ಗಳ ಒಳಗಾಗಿ ಟಾರ್ಗೆಟ್‌ ಚೇಸ್‌ ಮಾಡಿ ಗೆಲ್ಲಬೇಕು. ಈ ಪಂದ್ಯದಲ್ಲಿ ವಿಕೆಟ್‌ಗಳ ಮಹತ್ವ ಇರುವುದಿಲ್ಲ.

ಒಟ್ಟಾರೆಯಾಗಿ ಆರ್‌ಸಿಬಿಗೆ ಡೂ ಆರ್‌ ಡೈ ಪಂದ್ಯ ಇದಾಗಿದ್ದು, ಸಿಎಸ್‌ಕೆ ಮಣಿಸಿ ಪ್ಲೇ ಆಫ್‌ ತಲುಪಲಿದೆಯಾ ಇಲ್ಲ, ಸೋತು ಟೂರ್ನಿಯಿಂದ ಹೊರ ಬೀಳಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಅಡಕೆಗೆ ಎಲೆಚುಕ್ಕಿ, ಹಳದಿ ರೋಗ ಬಾಧೆ

ಕೊಡಗು ಜಿಲ್ಲೆಯಲ್ಲಿಯೂ ಕಾಣಿಸಿಕೊಳ್ಳುತ್ತಿರುವ ರೋಗ; ಹತೋಟಿಗೆ ಔಷಧಿ ಜೊತೆಗೆ ಸೂಕ್ತ ಪರಿಹಾರಕ್ಕೆ ಒತ್ತಾಯ ಮಡಿಕೇರಿ: ವಾಣಿಜ್ಯ ಬೆಳೆಯಾಗಿ ಕೃಷಿಕರ ಬದುಕಿಗೆ ಆಶ್ರಯವಾಗಿರುವ…

3 mins ago

ಸಾರ್ವಜನಿಕ ಶೌಚಾಲಯ ‘ಎರಡೂ’ ಬಂದ್!

ಚಾ.ನಗರದ ತರಕಾರಿ ಮಾರುಕಟ್ಟೆ, ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ಮುಚ್ಚಿದ ಶೌಚಾಲಯಗಳು; ಜನರಿಗೆ ಸಮಸ್ಯೆ ಚಾಮರಾಜನಗರ: ನಗರದಲ್ಲಿನ ಎರಡು ಸಾರ್ವಜನಿಕ…

37 mins ago

30 ಹಾಡಿಗಳಿಗೂ ಅರಣ್ಯ ಹಕ್ಕು ಪತ್ರಗಳನ್ನು ನೀಡಲು ಆಗ್ರಹ

ಹುಣಸೂರು: ಹಾಡಿಗಳ ಅರಣ್ಯ ಹಕ್ಕು ಸಮಿತಿಗಳ ಪ್ರತಿನಿಧಿಗಳಿಂದ ಅರಣ್ಯ ಪ್ರವೇಶ ಅಭಿಯಾನ ಹುಣಸೂರು: ತಾಲ್ಲೂಕಿನ ಆದಿವಾಸಿಗಳು ೨೦೦೬ರ ಆರಣ್ಯ ಹಕ್ಕು…

3 hours ago

ದಶಕದಿಂದ ಕಾದಿದ್ದ ವಿದ್ಯಾರ್ಥಿಗಳ ವನವಾಸಕ್ಕೆ ಮುಕ್ತಿ!

ಕೆ.ಬಿ.ರಮೇಶ ನಾಯಕ ೨೦೧೩-೧೪, ೨೦೧೪-೧೫ನೇ ಸಾಲಿನಲ್ಲಿ ಪ್ರವೇಶ ಪಡೆದು ಉತ್ತೀರ್ಣರಾದವರಿಗೆ ಪದವಿ ಪ್ರಮಾಣಪತ್ರ ಮುಕ್ತ ವಿವಿಯ ಇನ್‌ಹೌಸ್‌ನಲ್ಲಿ ಪ್ರವೇಶ ಪಡೆದಿದ್ದವರಿಗೆ…

3 hours ago

ಎಚ್.ಡಿ.ಕೋಟೆ ಪೊಲೀಸ್ ಕ್ಯಾಂಟೀನ್ ಬಂದ್

ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಿದ್ದ ಕ್ಯಾಂಟೀನ್ ಮುಚ್ಚಿದ್ದರಿಂದ ಕೂಲಿ ಕಾರ್ಮಿಕರಿಗೆ, ಬಡವರಿಗೆ ತೊಂದರೆ  ಎಚ್.ಡಿ.ಕೋಟೆ: ಅನೇಕ ವಿದ್ಯಾರ್ಥಿಗಳಿಗೆ, ಕೂಲಿ…

3 hours ago

300 ಸಿಎ ನಿವೇಶನಗಳ ಹಂಚಿಕೆಗೆ ಎಂಡಿಎ ನಿರ್ಧಾರ

ನಾಲ್ವರು ನಿವೃತ್ತ ಪೊಲೀಸ್ ಅಧಿಕಾರಿಗಳ ನೇತೃತ್ವದ ಕ್ಷಿಪ್ರ ಕಾರ್ಯಪಡೆ ರಚನೆಗೆ ಒಪ್ಪಿಗೆ  ಮೈಸೂರು: ಶಿಕ್ಷಣ, ಸಾಮಾಜಿಕ, ಆರೋಗ್ಯ ಮತ್ತಿತರ ಸೇವಾ…

3 hours ago