ಕ್ರೀಡೆ

IPL 2024: RCB vs CSK ಹೈವೋಲ್ಟೇಜ್‌ ಕದನ; ಆರ್‌ಸಿಬಿ ಪ್ಲೇಆಫ್ ಪ್ರವೇಶಿಸಲು ಇರುವ ದಾರಿಯೇನು?

ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು (ಮೇ.18) ಸಂಜೆ 7.30ಕ್ಕೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಚೆನ್ನೈಸೂಪರ್‌ ಕಿಂಗ್ಸ್‌ ನಡುವೆ ಹೈ-ವೋಲ್ಟೇಜ್‌ ಕದನಕ್ಕೆ ವೇದಿಕೆ ಸಜ್ಜಾಗಿದೆ.

ಈ ಸೀಸನ್‌ನಲ್ಲಿ ನಾಲ್ಕನೇ ಸ್ಥಾನಕ್ಕೇರಿ ಪ್ಲೇಆಫ್‌ ಸುತ್ತಿಗೆ ಕ್ವಾಲಿಫೈ ಆಗಲು ಇಂದಿನ ಪಂದ್ಯ ಬಹಳ ಮುಖ್ಯ ಆಗಲಿದ್ದು, ಸಿಎಸ್‌ಕೆ-ಆರ್‌ಸಿಬಿ ನಡುವಣ ಪಂದ್ಯ ಡಿಸೈಡರ್‌ ಗೇಮ್ ಆಗಿದೆ.

ಸಿಎಸ್‌ಕೆ‌ ಹಾಗೂ ಆರ್‌ಸಿಬಿ ಈವರೆಗೆ 31 ಬಾರಿ ಮುಖಾಮುಖಿಯಾಗಿದ್ದು, 21 ಬಾರಿ ಸಿಎಸ್‌ಕೆ ಗೆದ್ದಿದ್ದರೆ, 10 ಬಾರಿ ಆರ್‌ಸಿಬಿ ವಿಜಯ ದಾಖಲಿಸಿದೆ. ಇನ್ನು ಈ ಸೀಸನ್‌ನಲ್ಲಿ ಸಿಎಸ್‌ಕೆ 13 ಪಂದ್ಯಗಳಲ್ಲಿ 7 ಪಂದ್ಯ ಗೆದ್ದು, 6 ಪಂದ್ಯ ಸೋತು 14 ಪಾಯಿಂಟ್ಸ್‌ ಪಡೆದು ನಾಲ್ಕನೇ ಸ್ಥಾನದಲ್ಲಿದೆ. ಇತ್ತ 13 ಪಂದ್ಯಗಳನ್ನಾಡಿರುವ ಆರ್‌ಸಿಬಿ 6 ಪಂದ್ಯ ಗೆದ್ದು, 7 ಪಂದ್ಯ ಸೋತು 12 ಅಂಕ ಗಳಿಸಿ 6ನೇ ಸ್ಥಾನದಲ್ಲಿದೆ.

ಸಿಎಸ್‌ಕೆ ಈ ಪಂದ್ಯ ಗೆದ್ದರೆ ನೇರವಾಗಿ ಪ್ಲೇಆಫ್‌ಗೆ ಅರ್ಹತೆ ಪಡೆಯಲಿದೆ. ಅಥವಾ ಮಳೆಯಿಂದ ರದ್ದಾದರೂ ಕೂಡ ಒಂದು ಅಂಕ ಪಡೆದು ಕ್ವಾಲಿಫೈ ಆಗಲಿದೆ.

ಆರ್‌ಸಿಬಿಗೆ ಪ್ಲೇಆಫ್‌ ಹಾದಿ ಹೀಗಿದೆ: ಸದ್ಯ ನಾಲ್ಕನೇ ಸ್ಥಾನದಲ್ಲಿರುವ ಸಿಎಸ್‌ಕೆ 13 ಪಂದ್ಯಗಳಲ್ಲಿ 7 ಪಂದ್ಯ ಗೆದ್ದು 14 ಪಾಯಿಂಟ್ಸ್‌ನೊಂದಿಗೆ +0.528ರನ್‌ ರೇಟ್‌ ಹೊಂದಿದೆ. ಇತ್ತ ಆರ್‌ಸಿಬಿ 13ಪಂದ್ಯದಲ್ಲಿ 6 ಗೆದ್ದು, 12 ಪಾಯಿಂಟ್ಸ್‌ನೊಂದಿಗೆ +0.387 ರನ್‌ ರೇಟ್‌ ಗಳಿಸಿದೆ.

ಇತ್ತ ಆರ್‌ಸಿಬಿ ಕೊನೆಯ ಪಂದ್ಯ ಗೆದ್ದ ಮಾತ್ರಕ್ಕೆ ಪ್ಲೇಆಫ್‌ ಪ್ರವೇಶಿಸುವುದಿಲ್ಲ. ಆರ್‌ಸಿಬಿ ಬಹಳ ಅಂತರದಿಂದ ಗೆಲ್ಲಬೇಕು. ಇಲ್ಲವಾದಲ್ಲಿ ಆರ್‌ಸಿಬಿ ಗೆದ್ದರೂ ಟೂರ್ನಿಯಿಂದ ಹೊರ ಬೀಳುವುದು ನಿಶ್ಚಿತ.

ಆರ್‌ಸಿಬಿ ಈ ಪಂದ್ಯದಲ್ಲಿ ಟಾರ್ಗೆಟ್‌ ನೀಡಿದ್ದೇ ಆದರೆ ಕನಿಷ್ಟ 18 ರನ್‌ಗಳ ಅಂತರದಿಂದ ಗೆಲುವು ದಾಖಲಿಸಬೇಕು. ಇಲ್ಲ ಚೇಸ್‌ ಮಾಡಿದರೆ 18.1 ಓವರ್‌ಗಳ ಒಳಗಾಗಿ ಟಾರ್ಗೆಟ್‌ ಚೇಸ್‌ ಮಾಡಿ ಗೆಲ್ಲಬೇಕು. ಈ ಪಂದ್ಯದಲ್ಲಿ ವಿಕೆಟ್‌ಗಳ ಮಹತ್ವ ಇರುವುದಿಲ್ಲ.

ಒಟ್ಟಾರೆಯಾಗಿ ಆರ್‌ಸಿಬಿಗೆ ಡೂ ಆರ್‌ ಡೈ ಪಂದ್ಯ ಇದಾಗಿದ್ದು, ಸಿಎಸ್‌ಕೆ ಮಣಿಸಿ ಪ್ಲೇ ಆಫ್‌ ತಲುಪಲಿದೆಯಾ ಇಲ್ಲ, ಸೋತು ಟೂರ್ನಿಯಿಂದ ಹೊರ ಬೀಳಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

17 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

30 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

9 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

10 hours ago

ಮೈಸೂರು: ಬೆಳವಾಡಿ ರಾಯಲ್‌ ಬ್ರದರ್ಸ್‌ ವತಿಯಿಂದ 13ಅಡಿ ಗಣಪ ಪ್ರತಿಷ್ಠಾಪನೆ

ಮೈಸೂರು: ನಗರದಲ್ಲಿ ವಿನಾಯಕ ಚೌತಿ ಹಬ್ಬದ ಆಚರಣೆ ಚೋರಾಗಿಯೇ ನಡೆಯುತ್ತಿದೆ. ನಗರದ ಬೆಳವಾಡಿಯ ರಾಯಲ್‌ ಬ್ರದರ್ಸ್‌ ವತಿಯಿಂದ ಸತತ ಎಂಟು…

15 hours ago