ಕ್ರೀಡೆ

IPL 2024: RCB vs CSK ಹೈವೋಲ್ಟೇಜ್‌ ಕದನ; ಆರ್‌ಸಿಬಿ ಪ್ಲೇಆಫ್ ಪ್ರವೇಶಿಸಲು ಇರುವ ದಾರಿಯೇನು?

ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು (ಮೇ.18) ಸಂಜೆ 7.30ಕ್ಕೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಚೆನ್ನೈಸೂಪರ್‌ ಕಿಂಗ್ಸ್‌ ನಡುವೆ ಹೈ-ವೋಲ್ಟೇಜ್‌ ಕದನಕ್ಕೆ ವೇದಿಕೆ ಸಜ್ಜಾಗಿದೆ.

ಈ ಸೀಸನ್‌ನಲ್ಲಿ ನಾಲ್ಕನೇ ಸ್ಥಾನಕ್ಕೇರಿ ಪ್ಲೇಆಫ್‌ ಸುತ್ತಿಗೆ ಕ್ವಾಲಿಫೈ ಆಗಲು ಇಂದಿನ ಪಂದ್ಯ ಬಹಳ ಮುಖ್ಯ ಆಗಲಿದ್ದು, ಸಿಎಸ್‌ಕೆ-ಆರ್‌ಸಿಬಿ ನಡುವಣ ಪಂದ್ಯ ಡಿಸೈಡರ್‌ ಗೇಮ್ ಆಗಿದೆ.

ಸಿಎಸ್‌ಕೆ‌ ಹಾಗೂ ಆರ್‌ಸಿಬಿ ಈವರೆಗೆ 31 ಬಾರಿ ಮುಖಾಮುಖಿಯಾಗಿದ್ದು, 21 ಬಾರಿ ಸಿಎಸ್‌ಕೆ ಗೆದ್ದಿದ್ದರೆ, 10 ಬಾರಿ ಆರ್‌ಸಿಬಿ ವಿಜಯ ದಾಖಲಿಸಿದೆ. ಇನ್ನು ಈ ಸೀಸನ್‌ನಲ್ಲಿ ಸಿಎಸ್‌ಕೆ 13 ಪಂದ್ಯಗಳಲ್ಲಿ 7 ಪಂದ್ಯ ಗೆದ್ದು, 6 ಪಂದ್ಯ ಸೋತು 14 ಪಾಯಿಂಟ್ಸ್‌ ಪಡೆದು ನಾಲ್ಕನೇ ಸ್ಥಾನದಲ್ಲಿದೆ. ಇತ್ತ 13 ಪಂದ್ಯಗಳನ್ನಾಡಿರುವ ಆರ್‌ಸಿಬಿ 6 ಪಂದ್ಯ ಗೆದ್ದು, 7 ಪಂದ್ಯ ಸೋತು 12 ಅಂಕ ಗಳಿಸಿ 6ನೇ ಸ್ಥಾನದಲ್ಲಿದೆ.

ಸಿಎಸ್‌ಕೆ ಈ ಪಂದ್ಯ ಗೆದ್ದರೆ ನೇರವಾಗಿ ಪ್ಲೇಆಫ್‌ಗೆ ಅರ್ಹತೆ ಪಡೆಯಲಿದೆ. ಅಥವಾ ಮಳೆಯಿಂದ ರದ್ದಾದರೂ ಕೂಡ ಒಂದು ಅಂಕ ಪಡೆದು ಕ್ವಾಲಿಫೈ ಆಗಲಿದೆ.

ಆರ್‌ಸಿಬಿಗೆ ಪ್ಲೇಆಫ್‌ ಹಾದಿ ಹೀಗಿದೆ: ಸದ್ಯ ನಾಲ್ಕನೇ ಸ್ಥಾನದಲ್ಲಿರುವ ಸಿಎಸ್‌ಕೆ 13 ಪಂದ್ಯಗಳಲ್ಲಿ 7 ಪಂದ್ಯ ಗೆದ್ದು 14 ಪಾಯಿಂಟ್ಸ್‌ನೊಂದಿಗೆ +0.528ರನ್‌ ರೇಟ್‌ ಹೊಂದಿದೆ. ಇತ್ತ ಆರ್‌ಸಿಬಿ 13ಪಂದ್ಯದಲ್ಲಿ 6 ಗೆದ್ದು, 12 ಪಾಯಿಂಟ್ಸ್‌ನೊಂದಿಗೆ +0.387 ರನ್‌ ರೇಟ್‌ ಗಳಿಸಿದೆ.

ಇತ್ತ ಆರ್‌ಸಿಬಿ ಕೊನೆಯ ಪಂದ್ಯ ಗೆದ್ದ ಮಾತ್ರಕ್ಕೆ ಪ್ಲೇಆಫ್‌ ಪ್ರವೇಶಿಸುವುದಿಲ್ಲ. ಆರ್‌ಸಿಬಿ ಬಹಳ ಅಂತರದಿಂದ ಗೆಲ್ಲಬೇಕು. ಇಲ್ಲವಾದಲ್ಲಿ ಆರ್‌ಸಿಬಿ ಗೆದ್ದರೂ ಟೂರ್ನಿಯಿಂದ ಹೊರ ಬೀಳುವುದು ನಿಶ್ಚಿತ.

ಆರ್‌ಸಿಬಿ ಈ ಪಂದ್ಯದಲ್ಲಿ ಟಾರ್ಗೆಟ್‌ ನೀಡಿದ್ದೇ ಆದರೆ ಕನಿಷ್ಟ 18 ರನ್‌ಗಳ ಅಂತರದಿಂದ ಗೆಲುವು ದಾಖಲಿಸಬೇಕು. ಇಲ್ಲ ಚೇಸ್‌ ಮಾಡಿದರೆ 18.1 ಓವರ್‌ಗಳ ಒಳಗಾಗಿ ಟಾರ್ಗೆಟ್‌ ಚೇಸ್‌ ಮಾಡಿ ಗೆಲ್ಲಬೇಕು. ಈ ಪಂದ್ಯದಲ್ಲಿ ವಿಕೆಟ್‌ಗಳ ಮಹತ್ವ ಇರುವುದಿಲ್ಲ.

ಒಟ್ಟಾರೆಯಾಗಿ ಆರ್‌ಸಿಬಿಗೆ ಡೂ ಆರ್‌ ಡೈ ಪಂದ್ಯ ಇದಾಗಿದ್ದು, ಸಿಎಸ್‌ಕೆ ಮಣಿಸಿ ಪ್ಲೇ ಆಫ್‌ ತಲುಪಲಿದೆಯಾ ಇಲ್ಲ, ಸೋತು ಟೂರ್ನಿಯಿಂದ ಹೊರ ಬೀಳಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

1 hour ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

2 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

4 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

4 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

9 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

11 hours ago