ಕ್ರೀಡೆ

IPL 2024: RCB vs CSK ಹೈವೋಲ್ಟೇಜ್‌ ಕದನ; ಆರ್‌ಸಿಬಿ ಪ್ಲೇಆಫ್ ಪ್ರವೇಶಿಸಲು ಇರುವ ದಾರಿಯೇನು?

ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು (ಮೇ.18) ಸಂಜೆ 7.30ಕ್ಕೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಚೆನ್ನೈಸೂಪರ್‌ ಕಿಂಗ್ಸ್‌ ನಡುವೆ ಹೈ-ವೋಲ್ಟೇಜ್‌ ಕದನಕ್ಕೆ ವೇದಿಕೆ ಸಜ್ಜಾಗಿದೆ.

ಈ ಸೀಸನ್‌ನಲ್ಲಿ ನಾಲ್ಕನೇ ಸ್ಥಾನಕ್ಕೇರಿ ಪ್ಲೇಆಫ್‌ ಸುತ್ತಿಗೆ ಕ್ವಾಲಿಫೈ ಆಗಲು ಇಂದಿನ ಪಂದ್ಯ ಬಹಳ ಮುಖ್ಯ ಆಗಲಿದ್ದು, ಸಿಎಸ್‌ಕೆ-ಆರ್‌ಸಿಬಿ ನಡುವಣ ಪಂದ್ಯ ಡಿಸೈಡರ್‌ ಗೇಮ್ ಆಗಿದೆ.

ಸಿಎಸ್‌ಕೆ‌ ಹಾಗೂ ಆರ್‌ಸಿಬಿ ಈವರೆಗೆ 31 ಬಾರಿ ಮುಖಾಮುಖಿಯಾಗಿದ್ದು, 21 ಬಾರಿ ಸಿಎಸ್‌ಕೆ ಗೆದ್ದಿದ್ದರೆ, 10 ಬಾರಿ ಆರ್‌ಸಿಬಿ ವಿಜಯ ದಾಖಲಿಸಿದೆ. ಇನ್ನು ಈ ಸೀಸನ್‌ನಲ್ಲಿ ಸಿಎಸ್‌ಕೆ 13 ಪಂದ್ಯಗಳಲ್ಲಿ 7 ಪಂದ್ಯ ಗೆದ್ದು, 6 ಪಂದ್ಯ ಸೋತು 14 ಪಾಯಿಂಟ್ಸ್‌ ಪಡೆದು ನಾಲ್ಕನೇ ಸ್ಥಾನದಲ್ಲಿದೆ. ಇತ್ತ 13 ಪಂದ್ಯಗಳನ್ನಾಡಿರುವ ಆರ್‌ಸಿಬಿ 6 ಪಂದ್ಯ ಗೆದ್ದು, 7 ಪಂದ್ಯ ಸೋತು 12 ಅಂಕ ಗಳಿಸಿ 6ನೇ ಸ್ಥಾನದಲ್ಲಿದೆ.

ಸಿಎಸ್‌ಕೆ ಈ ಪಂದ್ಯ ಗೆದ್ದರೆ ನೇರವಾಗಿ ಪ್ಲೇಆಫ್‌ಗೆ ಅರ್ಹತೆ ಪಡೆಯಲಿದೆ. ಅಥವಾ ಮಳೆಯಿಂದ ರದ್ದಾದರೂ ಕೂಡ ಒಂದು ಅಂಕ ಪಡೆದು ಕ್ವಾಲಿಫೈ ಆಗಲಿದೆ.

ಆರ್‌ಸಿಬಿಗೆ ಪ್ಲೇಆಫ್‌ ಹಾದಿ ಹೀಗಿದೆ: ಸದ್ಯ ನಾಲ್ಕನೇ ಸ್ಥಾನದಲ್ಲಿರುವ ಸಿಎಸ್‌ಕೆ 13 ಪಂದ್ಯಗಳಲ್ಲಿ 7 ಪಂದ್ಯ ಗೆದ್ದು 14 ಪಾಯಿಂಟ್ಸ್‌ನೊಂದಿಗೆ +0.528ರನ್‌ ರೇಟ್‌ ಹೊಂದಿದೆ. ಇತ್ತ ಆರ್‌ಸಿಬಿ 13ಪಂದ್ಯದಲ್ಲಿ 6 ಗೆದ್ದು, 12 ಪಾಯಿಂಟ್ಸ್‌ನೊಂದಿಗೆ +0.387 ರನ್‌ ರೇಟ್‌ ಗಳಿಸಿದೆ.

ಇತ್ತ ಆರ್‌ಸಿಬಿ ಕೊನೆಯ ಪಂದ್ಯ ಗೆದ್ದ ಮಾತ್ರಕ್ಕೆ ಪ್ಲೇಆಫ್‌ ಪ್ರವೇಶಿಸುವುದಿಲ್ಲ. ಆರ್‌ಸಿಬಿ ಬಹಳ ಅಂತರದಿಂದ ಗೆಲ್ಲಬೇಕು. ಇಲ್ಲವಾದಲ್ಲಿ ಆರ್‌ಸಿಬಿ ಗೆದ್ದರೂ ಟೂರ್ನಿಯಿಂದ ಹೊರ ಬೀಳುವುದು ನಿಶ್ಚಿತ.

ಆರ್‌ಸಿಬಿ ಈ ಪಂದ್ಯದಲ್ಲಿ ಟಾರ್ಗೆಟ್‌ ನೀಡಿದ್ದೇ ಆದರೆ ಕನಿಷ್ಟ 18 ರನ್‌ಗಳ ಅಂತರದಿಂದ ಗೆಲುವು ದಾಖಲಿಸಬೇಕು. ಇಲ್ಲ ಚೇಸ್‌ ಮಾಡಿದರೆ 18.1 ಓವರ್‌ಗಳ ಒಳಗಾಗಿ ಟಾರ್ಗೆಟ್‌ ಚೇಸ್‌ ಮಾಡಿ ಗೆಲ್ಲಬೇಕು. ಈ ಪಂದ್ಯದಲ್ಲಿ ವಿಕೆಟ್‌ಗಳ ಮಹತ್ವ ಇರುವುದಿಲ್ಲ.

ಒಟ್ಟಾರೆಯಾಗಿ ಆರ್‌ಸಿಬಿಗೆ ಡೂ ಆರ್‌ ಡೈ ಪಂದ್ಯ ಇದಾಗಿದ್ದು, ಸಿಎಸ್‌ಕೆ ಮಣಿಸಿ ಪ್ಲೇ ಆಫ್‌ ತಲುಪಲಿದೆಯಾ ಇಲ್ಲ, ಸೋತು ಟೂರ್ನಿಯಿಂದ ಹೊರ ಬೀಳಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

9 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

11 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

19 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

19 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

19 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

19 hours ago