ಅಹಮದಾಬಾದ್: ವಿಲ್ ಜಾಕ್ ಭರ್ಜರಿ ಶತಕ, ವಿರಾಟ್ ಕೊಹ್ಲಿ ಅವರ ಅರ್ಧಶತಕ ಆಟದ ನೆರವಿನಿಂದ ಅತಿಥೇಯ ಗುಜರಾತ್ ಟೈಟನ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 9 ವಿಕೆಟ್ಗಳ ಅಂತರದಿಂದ ಮಣಿಸಿದೆ. ಆ ಮೂಲಕ ಮತ್ತೆ ಗೆಲುವಿನ ಲಯಕ್ಕೆ ಮರಳಿದೆ.
ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಸೀಸನ್ 17ರ ಟೂರ್ನಿಯ 45ನೇ ಪಂದ್ಯದಲ್ಲಿ ಆರ್ಸಿಬಿ ಮತ್ತು ಜಿಟಿ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟನ್ಸ್ ತಂಡ ನಿಗದಿತ 20 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 200 ರನ್ ಕಲೆಹಾಕಿದರು. ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಆರ್ಸಿಬಿಗೆ ವಿಲ್ ಜಾಕ್ ಹಾಗೂ ವಿರಾಟ್ ಕೊಹ್ಲಿ ಬೆನ್ನೆಲುಬಾದರು. ಆರ್ಸಿಬಿ ಅಂತಿಮವಾಗಿ 16 ಓವರ್ಗಳಲ್ಲಿ 1 ವಿಕೆಟ್ ಕಳೆದುಕೊಂಡು 206 ರನ್ ಕಲೆಹಾಕಿ ಗೆಲುವಿನ ನಗೆ ಬೀರಿತು.
ಜಿಟಿ ಇನ್ನಿಂಗ್ಸ್: ಪೇ ಬ್ಯಾಕ್ ವೀಕ್ನಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಜಿಟಿಗೆ ಉತ್ತಮ ಆರಂಭ ಸಿಗಲಿಲ್ಲ. ವೃದ್ದಿಮಾನ್ ಶಾ 5ರನ್ ಗಳಿಸಿ ಔಟಾದರು. ಮತ್ತು ನಾಯಕ ಶುಭ್ಮನ್ ಗಿಲ್ 16 ರನ್ ಗಳಿಸಿ ಬೇಗನೇ ಪೆವಿಲಿಯನ್ ಸೇರಿದರು.
ಬಳಿಕ ಜೊತೆಯಾದ ಸುದರ್ಶನ್ ಮತ್ತು ಶಾರುಖ್ ಖಾನ್ ಜಿಟಿಗೆ ಚೇತರಿಕೆ ನೀಡಿದರು. ಸಾಯ್ ಸುದರ್ಶನ್ 49 ಎಸೆತಗಳಲ್ಲಿ 8 ಬೌಂಡರಿ, 4 ಸಿಕ್ಸರ್ ಸಹಿತ 84 ರನ್ ಬಾರಿಸಿದರು. ಶಾರುಖ್ ಖಾನ್ 58(30 ಎಸೆತ) ಅರ್ಧಶತಕ ದಾಖಲಿಸಿದರು. ಕೊನೆಯಲ್ಲಿ ಮಿಲ್ಲರ್ 26 ರನ್ ಬಾರಿಸಿ ತಂಡದ ಮೊತ್ತ 200 ಗಡಿ ದಾಟಲು ಸಹಕರಿಸಿದರು.
ಆರ್ಸಿಬಿ ಪರ ಸ್ವಪ್ನಿಲ್, ಮ್ಯಾಕ್ಸ್ವೆಲ್ ಹಾಗೂ ಸಿರಾಜ್ ತಲಾ ಒಂದೊಂದು ವಿಕೆಟ್ ಪಡೆದು ಮಿಂಚಿದರು.
ಆರ್ಸಿಬಿ ಇನ್ನಿಗ್ಸ್: ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಆರ್ಸಿಬಿಗೆ ಉತ್ತಮ ಆರಂಭ ದೊರೆಯಿತು. ನಾಯಕ ಫಾಫ್ ಡುಪ್ಲೆಸಿ 24(12) ರನ್ ಬಾರಿಸಿ ಸಾಯ್ ಕಿಶೋರ್ಗೆ ವಿಕೆಟ್ ಒಪ್ಪಿಸಿ ಹೊರ ನಡೆದರು. ನಂತರ ಜೊತೆಯಾದ ವಿರಾಟ್ ಕೊಹ್ಲಿ ಹಾಗೂ ವಿಲ್ ಜಾಕ್ ಪಂದ್ಯವನ್ನೇ ಮುಗಿಸಿದರು. ಈ ಜೋಡಿ ಜಿಟಿ ತಂಡವನ್ನು ಮನಬಂದಂತೆ ಚಚ್ಚಿದರು.
ವಿರಾಟ್ ಕೊಹ್ಲಿ 44 ಎಸೆತಗಳಲ್ಲಿ 6 ಬೌಂಡರಿ 3 ಸಿಕ್ಸರ್ ಸಹಿತ 70 ರನ್ ಬಾರಿಸಿದರೇ, ಮತ್ತೊಂದೆಡೆ ಮನಬಂದಂತೆ ಜಿಟಿ ಬೌಲರ್ಗಳನ್ನು ಚಚ್ಚಿದ ವಿಲ್ ಜಾಕ್ 41 ಎಸೆತ ಎದುರಿಸಿ 5ಬೌಂಡರಿ ಹಾಗೂ ಬರೋಬ್ಬರಿ 10 ಸಿಕ್ಸರ್ ಸಹಿತ 100 ಶತಕ ದಾಖಲಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಈ ಜೋಡಿ 163 ರನ್ ಗಳ ಜೊತೆಯಾಟ ಕಾಣಿಕೆ ಕೊಟ್ಟರು. ಆರ್ಸಿಬಿ ಕೇವಲ 16 ಓವರ್ಗಳಲ್ಲೇ ಪಂದ್ಯವನ್ನು ಮುಗಿಸಿ ಬಿಟ್ಟರು.
ಗುಜರಾತ್ ಪರ ಸಾಯ್ ಕಿಶೋರ್ ಒಂದು ವಿಕೆಟ್ ಪಡೆದರು.
ಪಂದ್ಯ ಶ್ರೇಷ್ಠ: ವಿಲ್ ಜಾಕ್
ಮೈಸೂರು: ದೇಶ-ವಿದೇಶಗಳಲ್ಲಿ ಜನ ಸಮೂಹವನ್ನು ಹೊಂದಿರುವ ಅವಧೂತ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ನೂತನ ಶಾಖೆಯನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ…
ಕುಲಪತಿ ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ೧೦೬ನೇ ಘಟಿಕೋತ್ಸವವನ್ನು ಜ.೫ರಂದುನಡೆಸಲು ತೀರ್ಮಾನಿಸಲಾಗಿದ್ದು, ಘಟಿಕೋತ್ಸವ…
ಲಕ್ಷ್ಮೀಕಾಂತ್ ಕೊಮಾರಪ್ಪ ಶೀತಗಾಳಿಯಿಂದ ಪಾರಾಗಲು ಬೆಚ್ಚನೆಯ ಬಟ್ಟೆ, ಹೊದಿಕೆ, ಬೆಂಕಿಯ ಮೊರೆ ಸೋಮವಾರಪೇಟೆ: ಶೀತಗಾಳಿಯಿಂದ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಕಳೆದೆರಡು…
ಕೊಳ್ಳೇಗಾಲ: ಶಾಸಕರು ಮೊದಲಿದ್ದ ಡಾಂಬರು ರಸ್ತೆಯನ್ನು ಕಿತ್ತು ಕಾಂಕ್ರೀಟ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಮುಂದಾದರೆ ಗುತ್ತಿಗೆದಾರ ನಡೆಸಿದ ಕಳಪೆಕಾಮಗಾರಿಯಿಂದ ಜಲ್ಲಿಕಲ್ಲುಗಳು ಮೇಲೆದ್ದು…
ಹನಗೋಡು ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಆತಂಕ; ಜಮೀನಿಗೆ ತೆರಳಲು ಹಿಂದೇಟು ವೀರನಹೊಸಹಳ್ಳಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ಬಫರ್…