ಅಹಮದಾಬಾದ್: ವಿಲ್ ಜಾಕ್ ಭರ್ಜರಿ ಶತಕ, ವಿರಾಟ್ ಕೊಹ್ಲಿ ಅವರ ಅರ್ಧಶತಕ ಆಟದ ನೆರವಿನಿಂದ ಅತಿಥೇಯ ಗುಜರಾತ್ ಟೈಟನ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 9 ವಿಕೆಟ್ಗಳ ಅಂತರದಿಂದ ಮಣಿಸಿದೆ. ಆ ಮೂಲಕ ಮತ್ತೆ ಗೆಲುವಿನ ಲಯಕ್ಕೆ ಮರಳಿದೆ.
ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಸೀಸನ್ 17ರ ಟೂರ್ನಿಯ 45ನೇ ಪಂದ್ಯದಲ್ಲಿ ಆರ್ಸಿಬಿ ಮತ್ತು ಜಿಟಿ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟನ್ಸ್ ತಂಡ ನಿಗದಿತ 20 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 200 ರನ್ ಕಲೆಹಾಕಿದರು. ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಆರ್ಸಿಬಿಗೆ ವಿಲ್ ಜಾಕ್ ಹಾಗೂ ವಿರಾಟ್ ಕೊಹ್ಲಿ ಬೆನ್ನೆಲುಬಾದರು. ಆರ್ಸಿಬಿ ಅಂತಿಮವಾಗಿ 16 ಓವರ್ಗಳಲ್ಲಿ 1 ವಿಕೆಟ್ ಕಳೆದುಕೊಂಡು 206 ರನ್ ಕಲೆಹಾಕಿ ಗೆಲುವಿನ ನಗೆ ಬೀರಿತು.
ಜಿಟಿ ಇನ್ನಿಂಗ್ಸ್: ಪೇ ಬ್ಯಾಕ್ ವೀಕ್ನಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಜಿಟಿಗೆ ಉತ್ತಮ ಆರಂಭ ಸಿಗಲಿಲ್ಲ. ವೃದ್ದಿಮಾನ್ ಶಾ 5ರನ್ ಗಳಿಸಿ ಔಟಾದರು. ಮತ್ತು ನಾಯಕ ಶುಭ್ಮನ್ ಗಿಲ್ 16 ರನ್ ಗಳಿಸಿ ಬೇಗನೇ ಪೆವಿಲಿಯನ್ ಸೇರಿದರು.
ಬಳಿಕ ಜೊತೆಯಾದ ಸುದರ್ಶನ್ ಮತ್ತು ಶಾರುಖ್ ಖಾನ್ ಜಿಟಿಗೆ ಚೇತರಿಕೆ ನೀಡಿದರು. ಸಾಯ್ ಸುದರ್ಶನ್ 49 ಎಸೆತಗಳಲ್ಲಿ 8 ಬೌಂಡರಿ, 4 ಸಿಕ್ಸರ್ ಸಹಿತ 84 ರನ್ ಬಾರಿಸಿದರು. ಶಾರುಖ್ ಖಾನ್ 58(30 ಎಸೆತ) ಅರ್ಧಶತಕ ದಾಖಲಿಸಿದರು. ಕೊನೆಯಲ್ಲಿ ಮಿಲ್ಲರ್ 26 ರನ್ ಬಾರಿಸಿ ತಂಡದ ಮೊತ್ತ 200 ಗಡಿ ದಾಟಲು ಸಹಕರಿಸಿದರು.
ಆರ್ಸಿಬಿ ಪರ ಸ್ವಪ್ನಿಲ್, ಮ್ಯಾಕ್ಸ್ವೆಲ್ ಹಾಗೂ ಸಿರಾಜ್ ತಲಾ ಒಂದೊಂದು ವಿಕೆಟ್ ಪಡೆದು ಮಿಂಚಿದರು.
ಆರ್ಸಿಬಿ ಇನ್ನಿಗ್ಸ್: ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಆರ್ಸಿಬಿಗೆ ಉತ್ತಮ ಆರಂಭ ದೊರೆಯಿತು. ನಾಯಕ ಫಾಫ್ ಡುಪ್ಲೆಸಿ 24(12) ರನ್ ಬಾರಿಸಿ ಸಾಯ್ ಕಿಶೋರ್ಗೆ ವಿಕೆಟ್ ಒಪ್ಪಿಸಿ ಹೊರ ನಡೆದರು. ನಂತರ ಜೊತೆಯಾದ ವಿರಾಟ್ ಕೊಹ್ಲಿ ಹಾಗೂ ವಿಲ್ ಜಾಕ್ ಪಂದ್ಯವನ್ನೇ ಮುಗಿಸಿದರು. ಈ ಜೋಡಿ ಜಿಟಿ ತಂಡವನ್ನು ಮನಬಂದಂತೆ ಚಚ್ಚಿದರು.
ವಿರಾಟ್ ಕೊಹ್ಲಿ 44 ಎಸೆತಗಳಲ್ಲಿ 6 ಬೌಂಡರಿ 3 ಸಿಕ್ಸರ್ ಸಹಿತ 70 ರನ್ ಬಾರಿಸಿದರೇ, ಮತ್ತೊಂದೆಡೆ ಮನಬಂದಂತೆ ಜಿಟಿ ಬೌಲರ್ಗಳನ್ನು ಚಚ್ಚಿದ ವಿಲ್ ಜಾಕ್ 41 ಎಸೆತ ಎದುರಿಸಿ 5ಬೌಂಡರಿ ಹಾಗೂ ಬರೋಬ್ಬರಿ 10 ಸಿಕ್ಸರ್ ಸಹಿತ 100 ಶತಕ ದಾಖಲಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಈ ಜೋಡಿ 163 ರನ್ ಗಳ ಜೊತೆಯಾಟ ಕಾಣಿಕೆ ಕೊಟ್ಟರು. ಆರ್ಸಿಬಿ ಕೇವಲ 16 ಓವರ್ಗಳಲ್ಲೇ ಪಂದ್ಯವನ್ನು ಮುಗಿಸಿ ಬಿಟ್ಟರು.
ಗುಜರಾತ್ ಪರ ಸಾಯ್ ಕಿಶೋರ್ ಒಂದು ವಿಕೆಟ್ ಪಡೆದರು.
ಪಂದ್ಯ ಶ್ರೇಷ್ಠ: ವಿಲ್ ಜಾಕ್
ಮೈಸೂರು : ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶಗಳನ್ನು ಕಳುಹಿಸಿ ರಾಜ್ಯದಲ್ಲಿ ಆತಂಕ ಸೃಷ್ಟಿಸುತ್ತಿದ್ದ ಓರ್ವ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.…
ಕಳೆದ ಬಾರಿಯ ಭೀಕರ ಕಾಲ್ತುಳಿತ ಬಳಿಕ ರಂಗೇರಿದ ಕ್ರಿಕೆಟ್ ಬೆಂಗಳೂರು : ಜಾಗತಿಕ ಮಟ್ಟದ ಅತ್ಯಂತ ಶ್ರೀಮಂತ, ಶ್ರೇಷ್ಠ ಕ್ರಿಕೆಟ್…
ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…
ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…
ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…
ಬಿಆರ್ಟಿ ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲೊಂದು ಬಿಳಿಗಿರಿ ರಂಗನ ಬೆಟ್ಟ (ಬಿಆರ್ಟಿ) ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲಿ…