ಕ್ರೀಡೆ

IPL 2024| ವಿಲ್‌ ಜಾಕ್‌ ಭರ್ಜರಿ ಶತಕ: ಜಿಟಿ ವಿರುದ್ಧ ಗೆದ್ದು, ಗೆಲುವಿನ ಲಯಕ್ಕೆ ಮರಳಿದ ಆರ್‌ಸಿಬಿ!

ಅಹಮದಾಬಾದ್‌: ವಿಲ್‌ ಜಾಕ್‌ ಭರ್ಜರಿ ಶತಕ, ವಿರಾಟ್‌ ಕೊಹ್ಲಿ ಅವರ ಅರ್ಧಶತಕ ಆಟದ ನೆರವಿನಿಂದ ಅತಿಥೇಯ ಗುಜರಾತ್‌ ಟೈಟನ್ಸ್‌ ತಂಡವನ್ನು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 9 ವಿಕೆಟ್‌ಗಳ ಅಂತರದಿಂದ ಮಣಿಸಿದೆ. ಆ ಮೂಲಕ ಮತ್ತೆ ಗೆಲುವಿನ ಲಯಕ್ಕೆ ಮರಳಿದೆ.

ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಸೀಸನ್‌ 17ರ ಟೂರ್ನಿಯ 45ನೇ ಪಂದ್ಯದಲ್ಲಿ ಆರ್‌ಸಿಬಿ ಮತ್ತು ಜಿಟಿ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಗುಜರಾತ್‌ ಟೈಟನ್ಸ್‌ ತಂಡ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 200 ರನ್‌ ಕಲೆಹಾಕಿದರು. ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಆರ್‌ಸಿಬಿಗೆ ವಿಲ್‌ ಜಾಕ್‌ ಹಾಗೂ ವಿರಾಟ್‌ ಕೊಹ್ಲಿ ಬೆನ್ನೆಲುಬಾದರು. ಆರ್‌ಸಿಬಿ ಅಂತಿಮವಾಗಿ 16 ಓವರ್‌ಗಳಲ್ಲಿ 1 ವಿಕೆಟ್‌ ಕಳೆದುಕೊಂಡು 206 ರನ್‌ ಕಲೆಹಾಕಿ ಗೆಲುವಿನ ನಗೆ ಬೀರಿತು.

ಜಿಟಿ ಇನ್ನಿಂಗ್ಸ್‌: ಪೇ ಬ್ಯಾಕ್‌ ವೀಕ್‌ನಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಜಿಟಿಗೆ ಉತ್ತಮ ಆರಂಭ ಸಿಗಲಿಲ್ಲ. ವೃದ್ದಿಮಾನ್‌ ಶಾ 5ರನ್‌ ಗಳಿಸಿ ಔಟಾದರು. ಮತ್ತು ನಾಯಕ ಶುಭ್‌ಮನ್‌ ಗಿಲ್‌ 16 ರನ್‌ ಗಳಿಸಿ ಬೇಗನೇ ಪೆವಿಲಿಯನ್‌ ಸೇರಿದರು.

ಬಳಿಕ ಜೊತೆಯಾದ ಸುದರ್ಶನ್‌ ಮತ್ತು ಶಾರುಖ್‌ ಖಾನ್‌ ಜಿಟಿಗೆ ಚೇತರಿಕೆ ನೀಡಿದರು. ಸಾಯ್‌ ಸುದರ್ಶನ್‌ 49 ಎಸೆತಗಳಲ್ಲಿ 8 ಬೌಂಡರಿ, 4 ಸಿಕ್ಸರ್‌ ಸಹಿತ 84 ರನ್‌ ಬಾರಿಸಿದರು. ಶಾರುಖ್‌ ಖಾನ್‌ 58(30 ಎಸೆತ) ಅರ್ಧಶತಕ ದಾಖಲಿಸಿದರು. ಕೊನೆಯಲ್ಲಿ ಮಿಲ್ಲರ್‌ 26 ರನ್‌ ಬಾರಿಸಿ ತಂಡದ ಮೊತ್ತ 200 ಗಡಿ ದಾಟಲು ಸಹಕರಿಸಿದರು.

ಆರ್‌ಸಿಬಿ ಪರ ಸ್ವಪ್ನಿಲ್‌, ಮ್ಯಾಕ್ಸ್‌ವೆಲ್‌ ಹಾಗೂ ಸಿರಾಜ್‌ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

ಆರ್‌ಸಿಬಿ ಇನ್ನಿಗ್ಸ್‌: ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಆರ್‌ಸಿಬಿಗೆ ಉತ್ತಮ ಆರಂಭ ದೊರೆಯಿತು. ನಾಯಕ ಫಾಫ್‌ ಡುಪ್ಲೆಸಿ 24(12) ರನ್‌ ಬಾರಿಸಿ ಸಾಯ್‌ ಕಿಶೋರ್‌ಗೆ ವಿಕೆಟ್‌ ಒಪ್ಪಿಸಿ ಹೊರ ನಡೆದರು. ನಂತರ ಜೊತೆಯಾದ ವಿರಾಟ್‌ ಕೊಹ್ಲಿ ಹಾಗೂ ವಿಲ್‌ ಜಾಕ್‌ ಪಂದ್ಯವನ್ನೇ ಮುಗಿಸಿದರು. ಈ ಜೋಡಿ ಜಿಟಿ ತಂಡವನ್ನು ಮನಬಂದಂತೆ ಚಚ್ಚಿದರು.

ವಿರಾಟ್‌ ಕೊಹ್ಲಿ 44 ಎಸೆತಗಳಲ್ಲಿ 6 ಬೌಂಡರಿ 3 ಸಿಕ್ಸರ್‌ ಸಹಿತ 70 ರನ್‌ ಬಾರಿಸಿದರೇ, ಮತ್ತೊಂದೆಡೆ ಮನಬಂದಂತೆ ಜಿಟಿ ಬೌಲರ್‌ಗಳನ್ನು ಚಚ್ಚಿದ ವಿಲ್‌ ಜಾಕ್‌ 41 ಎಸೆತ ಎದುರಿಸಿ 5ಬೌಂಡರಿ ಹಾಗೂ ಬರೋಬ್ಬರಿ 10 ಸಿಕ್ಸರ್‌ ಸಹಿತ 100 ಶತಕ ದಾಖಲಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಈ ಜೋಡಿ 163 ರನ್‌ ಗಳ ಜೊತೆಯಾಟ ಕಾಣಿಕೆ ಕೊಟ್ಟರು. ಆರ್‌ಸಿಬಿ ಕೇವಲ 16 ಓವರ್‌ಗಳಲ್ಲೇ ಪಂದ್ಯವನ್ನು ಮುಗಿಸಿ ಬಿಟ್ಟರು.

ಗುಜರಾತ್‌ ಪರ ಸಾಯ್‌ ಕಿಶೋರ್‌ ಒಂದು ವಿಕೆಟ್‌ ಪಡೆದರು.

ಪಂದ್ಯ ಶ್ರೇಷ್ಠ: ವಿಲ್‌ ಜಾಕ್‌

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

3 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago