ಕ್ರೀಡೆ

IPL 2024| ವಿಲ್‌ ಜಾಕ್‌ ಭರ್ಜರಿ ಶತಕ: ಜಿಟಿ ವಿರುದ್ಧ ಗೆದ್ದು, ಗೆಲುವಿನ ಲಯಕ್ಕೆ ಮರಳಿದ ಆರ್‌ಸಿಬಿ!

ಅಹಮದಾಬಾದ್‌: ವಿಲ್‌ ಜಾಕ್‌ ಭರ್ಜರಿ ಶತಕ, ವಿರಾಟ್‌ ಕೊಹ್ಲಿ ಅವರ ಅರ್ಧಶತಕ ಆಟದ ನೆರವಿನಿಂದ ಅತಿಥೇಯ ಗುಜರಾತ್‌ ಟೈಟನ್ಸ್‌ ತಂಡವನ್ನು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 9 ವಿಕೆಟ್‌ಗಳ ಅಂತರದಿಂದ ಮಣಿಸಿದೆ. ಆ ಮೂಲಕ ಮತ್ತೆ ಗೆಲುವಿನ ಲಯಕ್ಕೆ ಮರಳಿದೆ.

ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಸೀಸನ್‌ 17ರ ಟೂರ್ನಿಯ 45ನೇ ಪಂದ್ಯದಲ್ಲಿ ಆರ್‌ಸಿಬಿ ಮತ್ತು ಜಿಟಿ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಗುಜರಾತ್‌ ಟೈಟನ್ಸ್‌ ತಂಡ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 200 ರನ್‌ ಕಲೆಹಾಕಿದರು. ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಆರ್‌ಸಿಬಿಗೆ ವಿಲ್‌ ಜಾಕ್‌ ಹಾಗೂ ವಿರಾಟ್‌ ಕೊಹ್ಲಿ ಬೆನ್ನೆಲುಬಾದರು. ಆರ್‌ಸಿಬಿ ಅಂತಿಮವಾಗಿ 16 ಓವರ್‌ಗಳಲ್ಲಿ 1 ವಿಕೆಟ್‌ ಕಳೆದುಕೊಂಡು 206 ರನ್‌ ಕಲೆಹಾಕಿ ಗೆಲುವಿನ ನಗೆ ಬೀರಿತು.

ಜಿಟಿ ಇನ್ನಿಂಗ್ಸ್‌: ಪೇ ಬ್ಯಾಕ್‌ ವೀಕ್‌ನಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಜಿಟಿಗೆ ಉತ್ತಮ ಆರಂಭ ಸಿಗಲಿಲ್ಲ. ವೃದ್ದಿಮಾನ್‌ ಶಾ 5ರನ್‌ ಗಳಿಸಿ ಔಟಾದರು. ಮತ್ತು ನಾಯಕ ಶುಭ್‌ಮನ್‌ ಗಿಲ್‌ 16 ರನ್‌ ಗಳಿಸಿ ಬೇಗನೇ ಪೆವಿಲಿಯನ್‌ ಸೇರಿದರು.

ಬಳಿಕ ಜೊತೆಯಾದ ಸುದರ್ಶನ್‌ ಮತ್ತು ಶಾರುಖ್‌ ಖಾನ್‌ ಜಿಟಿಗೆ ಚೇತರಿಕೆ ನೀಡಿದರು. ಸಾಯ್‌ ಸುದರ್ಶನ್‌ 49 ಎಸೆತಗಳಲ್ಲಿ 8 ಬೌಂಡರಿ, 4 ಸಿಕ್ಸರ್‌ ಸಹಿತ 84 ರನ್‌ ಬಾರಿಸಿದರು. ಶಾರುಖ್‌ ಖಾನ್‌ 58(30 ಎಸೆತ) ಅರ್ಧಶತಕ ದಾಖಲಿಸಿದರು. ಕೊನೆಯಲ್ಲಿ ಮಿಲ್ಲರ್‌ 26 ರನ್‌ ಬಾರಿಸಿ ತಂಡದ ಮೊತ್ತ 200 ಗಡಿ ದಾಟಲು ಸಹಕರಿಸಿದರು.

ಆರ್‌ಸಿಬಿ ಪರ ಸ್ವಪ್ನಿಲ್‌, ಮ್ಯಾಕ್ಸ್‌ವೆಲ್‌ ಹಾಗೂ ಸಿರಾಜ್‌ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

ಆರ್‌ಸಿಬಿ ಇನ್ನಿಗ್ಸ್‌: ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಆರ್‌ಸಿಬಿಗೆ ಉತ್ತಮ ಆರಂಭ ದೊರೆಯಿತು. ನಾಯಕ ಫಾಫ್‌ ಡುಪ್ಲೆಸಿ 24(12) ರನ್‌ ಬಾರಿಸಿ ಸಾಯ್‌ ಕಿಶೋರ್‌ಗೆ ವಿಕೆಟ್‌ ಒಪ್ಪಿಸಿ ಹೊರ ನಡೆದರು. ನಂತರ ಜೊತೆಯಾದ ವಿರಾಟ್‌ ಕೊಹ್ಲಿ ಹಾಗೂ ವಿಲ್‌ ಜಾಕ್‌ ಪಂದ್ಯವನ್ನೇ ಮುಗಿಸಿದರು. ಈ ಜೋಡಿ ಜಿಟಿ ತಂಡವನ್ನು ಮನಬಂದಂತೆ ಚಚ್ಚಿದರು.

ವಿರಾಟ್‌ ಕೊಹ್ಲಿ 44 ಎಸೆತಗಳಲ್ಲಿ 6 ಬೌಂಡರಿ 3 ಸಿಕ್ಸರ್‌ ಸಹಿತ 70 ರನ್‌ ಬಾರಿಸಿದರೇ, ಮತ್ತೊಂದೆಡೆ ಮನಬಂದಂತೆ ಜಿಟಿ ಬೌಲರ್‌ಗಳನ್ನು ಚಚ್ಚಿದ ವಿಲ್‌ ಜಾಕ್‌ 41 ಎಸೆತ ಎದುರಿಸಿ 5ಬೌಂಡರಿ ಹಾಗೂ ಬರೋಬ್ಬರಿ 10 ಸಿಕ್ಸರ್‌ ಸಹಿತ 100 ಶತಕ ದಾಖಲಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಈ ಜೋಡಿ 163 ರನ್‌ ಗಳ ಜೊತೆಯಾಟ ಕಾಣಿಕೆ ಕೊಟ್ಟರು. ಆರ್‌ಸಿಬಿ ಕೇವಲ 16 ಓವರ್‌ಗಳಲ್ಲೇ ಪಂದ್ಯವನ್ನು ಮುಗಿಸಿ ಬಿಟ್ಟರು.

ಗುಜರಾತ್‌ ಪರ ಸಾಯ್‌ ಕಿಶೋರ್‌ ಒಂದು ವಿಕೆಟ್‌ ಪಡೆದರು.

ಪಂದ್ಯ ಶ್ರೇಷ್ಠ: ವಿಲ್‌ ಜಾಕ್‌

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕೃಷಿ ಕ್ಷೇತ್ರ ಅಭಿವೃದ್ಧಿ ಅಪರಿಮಿತ ಸಾಧನೆ : ಸಚಿವ ಎನ್ ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…

3 hours ago

ವಿದೇಶಿ ಉದ್ಯೋಗ ಆಮಿಷ : ವಿದ್ಯಾರ್ಥಿಗೆ 1.80 ಕೋಟಿ ವಂಚನೆ!

ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…

3 hours ago

ಟಿ20 ವಿಶ್ವಕಪ್ 2026 : ಕಣದಲ್ಲಿವೆ 20 ತಂಡಗಳು

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…

3 hours ago

ಅರಣ್ಯ ಭೂಮಿಯಲ್ಲಿ ನಿಯಮ ಬಾಹಿರ ರೆಸಾರ್ಟ್ ನಿರ್ಮಿಸಿದರೆ ನಿರ್ದಾಕ್ಷಿಣ್ಯ ಕ್ರಮ : ನಿತೇಶ್‌ ಪಾಟೀಲ್‌ ಎಚ್ಚರಿಕೆ

ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…

4 hours ago

ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ ; ಆರೋಪಿ ಬಂಧನ

ಬೆಂಗಳೂರು : ವಿಆರ್ ಗ್ರೂಪ್‌ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…

5 hours ago

ಯತೀಂದ್ರ ನಮ್ಮ ಹೈಕಮಾಂಡ್‌, ಅವರು ಹೇಳಿದ ಮೇಲೆ ಇನ್ನೇನಿದೆ : ಡಿಸಿಎಂ ಡಿಕೆಶಿ

ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…

6 hours ago