ಕ್ರೀಡೆ

IPL-2024: ಹೈದರಾಬಾದ್‌ ಎದುರು ಸೋತು ಗೆದ್ದ ಕೆಕೆಆರ್‌!

ಕೊಲ್ಕತ್ತಾ: ರಸೆಲ್‌ ಅವರ ತುಫಾನ್‌ ಬ್ಯಾಟಿಂಗ್‌ ಹಾಗೂ ಹರ್ಷಿತ್‌ ರಾಣಾ ಅವರ ಸಮಯೋಚಿತ ಬೌಲಿಂಗ್‌ ದಾಳಿಗೆ ಮಂಕಾದ ಪ್ಯಾಟ್‌ ಕಮಿನ್ಸ್‌ ಪಡೆ 4 ರನ್‌ಗಳ ಅಂತರದಿಂದ ಸೋಲನುಭವಿಸಿದೆ.

ಇಲ್ಲಿನ ಈಡೆನ್‌ ಗಾರ್ಡನ್‌ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಹದಿನೇಳನೇ ಆವೃತ್ತಿಯ ಐಪಿಎಲ್‌ ಪಂದ್ಯದಲ್ಲಿ ಕೊಲ್ಕತ್ತಾ ನೈಟ್‌ ರೈಡರ್ಸ್‌ ಮತ್ತು ಸನ್‌ರೈಸರ್ಸ್‌ ಹೈದರಾಬಾದ್‌ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಕೆಕೆಆರ್‌ ಗೆದ್ದು ಬೀಗಿದೆ.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಕೆಕೆಆರ್‌ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 208 ರನ್‌ ಕಲೆ ಹಾಕಿ 209 ರನ್‌ ಗುರಿ ನೀಡಿದರು. ಇದನ್ನು ಬೆನ್ನತ್ತಿದ ಎಸ್‌ಆರ್‌ಎಚ್‌ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 204 ರನ್‌ ಕಲೆಹಾಕಿ 4 ರನ್‌ ಅಂತದ ಸೋಲು ಕಂಡಿತು.

ಮೊದಲು ಬ್ಯಾಟ್‌ ಮಾಡಿದ ಕೆಕೆಆರ್‌ಗೆ ನಿರೀಕ್ಷಿತ ಆರಂಭ ಸಿಗಲಿಲ್ಲ. ಸುನೀಲ್‌ ನರೈನ್‌ ಕೇವಲ 2 ರನ್‌ ಗಳಿಗೆ ನಿರ್ಗಮಿಸಿದರೇ, ವೆಂಕಟೇಶ್‌ ಅಯ್ಯರ್‌ (7)ಕ್ಕೆ ಸುಸ್ತಾದರು. ನಂತರ ಬಂದ ನಾಯಕ ನಟರಾಜನ್‌ ದಾಳಿಗೆ ಸೊನ್ನೆ ಸುತ್ತಿ ಪೆವಿಲಿಯನ್‌ ಸೇರಿದರು. ನಿತೀಶ್‌ ರಾಣಾ ಕೇವಲ (9) ರನ್‌ ಬಾರಿಸಿ ಹಿಂದಿರುಗಿದರು.

ಒಂದೆಡೆ ವಿಕೆಟ್‌ ಬೀಳುತ್ತಿದ್ದರು ದೃತಿಗೆಡದ ಪಿಲಿಪ್‌ ಸಾಲ್ಟ್‌ 40 ಎಸೆತಗಳಲ್ಲಿ 3 ಸಿಕ್ಸರ್‌ ಮತ್ತು 3 ಬೌಂಡರಿ ಮೂಲಕ 54 ರನ್‌ ಬಾರಿಸಿ ತಂಡಕ್ಕೆ ಆಸರೆಯಾದರು.

ರಮಣ್‌ದೀಪ್‌ ಸಿಂಗ್‌ (35), ರಿಂಕು ಸಿಂಗ್‌ (23) ಸ್ವಲ್ಪ ಚೇತರಿಕೆಯ ಆಟವಾಡಿದರು. ನಂತರ ಬಂದ ರಸೆಲ್‌ ಮನ ಬಂದಂತೆ ಹೈದರಾಬಾದ್‌ ತಂಡ್‌ ಬೌಲರ್‌ಗಳನ್ನು ಚಚ್ಚಿದರು. ಕೇವಲ 25 ಎಸೆತಗಳಲ್ಲಿ 3 ಬೌಂಡರಿ ಮತ್ತು ಭರ್ಜರಿ 7 ಸಿಕ್ಸರ್‌ ಸಹಿತ 64 ರನ್‌ ಕಲೆ ಹಾಕಿ ತಂಡವನ್ನು ಇನ್ನೂರರ ಗಡಿ ದಾಟಿಸಿದರು.

ಹೈದರಾಬಾದ್‌ ಪರ ನಟರಾಜನ್‌ 3, ಮಾರ್ಕಂಡೆ 2 ವಿಕೆಟ್‌ ಪಡೆದು ಗಮನ ಸೆಳೆದರು.

ಈ ಬೃಹತ್‌ ಮೊತ್ತ ಬೆನ್ನತ್ತಿದ ಹೈದರಾಬಾದ್‌ ತಂಡಕ್ಕೆ ಉತ್ತಮ ಆರಂಭ ಸಿಕ್ಕಿತು. ಮಯಾಂಕ್‌ ಹಾಗೂ ಇಂಪ್ಯಾಕ್ಟ್‌ ಪ್ಲೇಯರ್‌ ಅಭೀಷೇಕ್‌ ಶರ್ಮಾ ಜೋಡಿ ಕೇವಲ 5.3 ಓವರ್‌ಗಳಲ್ಲಿಯೇ 61 ರನ್‌ ಬಾರಿಸಿ ಕೆಕೆಆರ್‌ ಬೌಲರ್‌ಗಳನ್ನು ಕಾಡಿದರು. ಈ ಇಬ್ಬರು ತಲಾ 32 ರನ್‌ ಬಾರಿಸಿ ಔಟಾಗಿ ಹೊರ ನಡೆದರು. ಬಳಿಕ ಬಂದ ರಾಹುಲ್‌ ತ್ರಿಪಾಟಿ (20), ಐಡೆನ್‌ ಮಾರ್ಕ್ರಂ (18), ಅಬುಲ್‌ ಸಮದ್‌ (15) ರನ್‌ ಗಳಿಸಿದರು.

ಕೊನೆಯಲ್ಲಿ ಕ್ಲಾಸೆನ್‌ ಹಾಗೂ ಷಹಬಾಜ್‌ ಅಬ್ಬರಿಸಿದರು. ಕೇವಲ 5 ಎಸೆತಗಳಲ್ಲಿ 16 ರನ್‌ ಬಾರಿಸಿ ಷಹಬಾಜ್‌ ನಿರ್ಗಮಿಸಿದರು. ಆದರೆ ಮತ್ತೊಂದು ಕಡೆ ಭದ್ರವಾಗಿ ನಿಂತಿದ್ದ ಕ್ಲಾಸೆನ್‌ 29 ಎಸೆತ ಎದುರಿಸಿ 8 ಸಿಕ್ಸರ್‌ ಸಹಿತ 63 ರನ್‌ ಬಾರಿಸಿ ಕೆಕೆಆರ್‌ ಕನಸನ್ನು ಕಸಿದುಬಿಟ್ಟರು ಎಂದೇ ಭಾವಿಸಲಾಗಿತ್ತು. ಕೊನೆ ಓವರ್‌ನಲ್ಲಿ ಕ್ಲಾಸೆನ್‌ ಔಟ್‌ ಮಾಡಿದ ಹರ್ಷಿತ್‌ ರಾಣಾ ಪಂದ್ಯವನ್ನು ಉಳಿಸಿಬಿಟ್ಟರು. ಕೊನೆಯ ಎಸೆತಕ್ಕೆ ಐದು ರನ್‌ ಬೇಕಾಗಿದ್ದಾಗ ನಾಯಕ ಪ್ಯಾಟ್‌ ಕಮಿನ್ಸ್‌ಗೆ ಡಾಟ್‌ ಬಾಲ್‌ ಹಾಕುವ ಮೂಲಕ ಕೆಕೆಆರ್‌ ಗೆಲುವಿಗೆ ಕಾರಣರಾದರು.

ಕೆಕೆಆರ್‌ ಪರ ಹರ್ಷಿತ್‌ ರಾಣಾ 3, ರಸೆಲ್‌ 2 ವಿಕೆಟ್‌ ಪಡೆದು ಮಿಂಚಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

20 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

20 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

20 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

20 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

20 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

23 hours ago