Categories: ಕ್ರೀಡೆ

IPL 2025: ಐಪಿಎಲ್ ಮೆಗಾ ಆಕ್ಷನ್ ಪಟ್ಟಿಯಲ್ಲಿ ಕರ್ನಾಟಕದ ಸ್ಟಾರ್‌ ಆಟಗಾರರು

ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಸೀಸನ್‌ 18ರ ಮೆಗಾ ಹರಾಜಿಗೆ ದಿನಗಣನೆ ಶುರುವಾಗಿದ್ದು, ಸೌದಿ ಅರೇಬಿಯಾದಲ್ಲಿ ನವೆಂಬರ್‌.24 ಮತ್ತು 25ರಂದು ನಡೆಯಲಿರುವ ಮೆಗಾ ಹರಾಜಿನಲ್ಲಿ ಕರ್ನಾಟಕದ 24 ಆಟಗಾರರ ಹೆಸರು ಪಟ್ಟಿಯಲ್ಲಿ ಕಾಣಿಸಿಕೊಳ್ಳಲಿದೆ.

ಐಪಿಎಲ್‌ ಸೀಸನ್‌ 18ರ ಹರಾಜಿನಲ್ಲಿ ಒಟ್ಟು 574 ಆಟಗಾರರ ಹೆಸರು ಪಟ್ಟಿಯಲ್ಲಿದ್ದು, 366 ಭಾರತೀಯ ಆಟಗಾರರಿದ್ದಾರೆ. ಅದರಲ್ಲಿ ಕರ್ನಾಟಕದ ಸ್ಟಾರ್‌ ಆಟಗಾರರ ಜೊತೆ ಭವಿಷ್ಯದ ಯುವ ಆಟಗಾರರು ಈ ಆಕ್ಷನ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಐಪಿಎಲ್‌ ಮೆಗಾ ಆಕ್ಷನ್‌ನಲ್ಲಿ ಕರ್ನಾಟಕ ಆಟಗಾರರ ಹೆಸರು ಕೆಳಕಂಡಂತಿದೆ.

ಕೆ.ಎಲ್‌.ರಾಹುಲ್:‌ ಐಪಿಎಲ್‌ ಸೀಸನ್‌ 18ರ ಸ್ಟಾರ್‌ ಆಟಗಾರ. ಕಳೆದ ಸೀಸನ್‌ನ ಐಪಿಎಲ್‌ನಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ತಂಡವನ್ನು ಮನ್ನಡೆಸಿದ್ದರು.

ಮಯಾಂಕ್‌ ಅಗರವಾಲ್‌: ಕಳೆದ ಸೀಸನ್‌ನಲ್ಲಿ ಸನ್‌ ರೈಸರ್ಸ್‌ ತಂಡ ಪ್ರತಿನಿಧಿಸಿದ್ದರು.

ಮನೀಶ್‌ ಪಾಂಡೆ: ಐಪಿಎಲ್‌ 2024ರ ಚಾಂಪಿಯನ್ ತಂಡದ ಭಾಗವಾಗಿದ್ದರು.

ಪ್ರಸಿದ್ಧ್ ಕೃಷ್ಣ:‌ 2024ರ ಐಪಿಎಲ್‌ನಲ್ಲಿ ರಾಜಸ್ತಾನ ರಾಯಲ್ಸ್‌ ತಂಡದಲ್ಲಿ ಕಾಣಿಸಿಕೊಂಡಿದ್ದರು.

ಮುಂದುವರಿದು ಶ್ರೇಯಸ್‌ ಗೋಪಾಲ್‌, ಅಭಿನವ್‌ ಮನೋಹರ್‌, ಮನೋಜ್‌ ಭಾಂಡಗೆ, ಕೃಷ್ಣಪ್ಪ ಗೌತಮ್‌, ದೇವದತ್ತ ಪಡಿಕಲ್‌, ಪ್ರವೀಣ್‌ ದುಬೆ, ವಿದ್ವತ್‌ ಕಾವೇರಪ್ಪ, ವಿಜಯ್‌ ಕುಮಾರ್‌ ವೈಶಾಖ್‌, ಲವನೀತ್‌ ಸಿಸೋಡಿಯಾ, ಎಲ್‌.ಆರ್‌.ಚೇತನ್‌, ಆರ್‌.ಸ್ಮರಣ್‌, ಅಭಿಲಾಶ್‌ ಶೆಟ್ಟಿ, ಮನ್ವಂತ್‌ ಕುಮಾರ್‌, ಹಾರ್ದಿಕ್‌ ರಾಜ್‌, ಬಿ.ಆರ್.‌ಶರತ್‌, ಕೃಷ್ಣನ್‌ ಶ್ರೀಜಿತ್‌, ದೀಪಕ್‌ ದೇವಾಡಿಗ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಆಂದೋಲನ ಡೆಸ್ಕ್

Recent Posts

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

8 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

9 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

10 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

11 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

14 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

15 hours ago