ಕ್ರೀಡೆ

IPL 2025 | ಅಶುತೋಷ್‌ ಅಮೋಘ ಬ್ಯಾಟಿಂಗ್‌ ; ಡೆಲ್ಲಿಗೆ ರೋಚಕ ಜಯ

ವಿಶಾಖಪಟ್ಟಣಂ: ಇಂಪ್ಯಾಕ್ಟ್‌ ಪ್ಲೇಯರ್‌ ಅಶುತೋಷ್‌ ಶರ್ಮಾ ಅವರ ಅಮೋಘ ಬ್ಯಾಟಿಂಗ್‌ ನೆರವಿನಿಂದ ಡೆಲ್ಲಿ ತಂಡ ರೋಚಕ ಹಣಾಹಣಿಯಲ್ಲಿ ಒಂದು ವಿಕೆಟ್‌ಗಳ ಅಂತರದಿಂದ ಲಖನೌ ತಂಡವನ್ನು ಮಣಿಸುವ ಮೂಲಕ ಮೊದಲ ಗೆಲುವು ದಾಖಲಿಸಿ ಶುಭಾರಂಭ ಮಾಡಿತು.

ಇಲ್ಲಿನ ವೈ.ಎಸ್‌ ರಾಜಶೇಖರ ರೆಡ್ಡಿ ಕ್ರೀಡಾಂಗಣದ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಲಖನೌ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 209 ರನ್‌ ಕೆಲಹಾಕಿತು. ಈ ಮೊತ್ತ ಬೆನ್ನತ್ತಿದ ಡೆಲ್ಲಿ 19.3 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 211 ರನ್‌ ಗಳಸಿ 1 ವಿಕೆಟ್‌ಗಳ ಅಂತರದಿಂದ ರೋಚಕ ಗೆಲುವು ದಾಖಲಿಸಿತು.

ಲಖನೌ ಪರ ಮಿಚೆಲ್‌ ಮಾರ್ಷ್‌ 72(36), ನಿಕೋಲಸ್‌ ಪೂರನ್‌ 75(30) ರನ್‌ ಗಳ ನೆರವಿನಿಂದ ತಂಡ ಇನ್ನೂರರ ಗಡಿ ದಾಟಲು ಸಹಕರಿಸಿದರು. ಮಾರ್ಕ್ರಂ 15, , ಮಿಲ್ಲರ್‌ 27, ಆಯುಷ್‌ ಬದೋನಿ 4, ಶಹಬಾಜ್‌ ಅಹ್ಮದ್‌ 9, ನಾಯಕ ಪಂತ್‌, ರವಿ ಬಿಷ್ಣೋಯ್‌ ಹಾಗೂ ಶಾರ್ದುಲ್‌ ಠಾಕೂರ್‌ ಸೇರಿದಂತೆ ಮೂವರು ಬ್ಯಾಟ್ಸ್‌ಮನ್‌ಗಳು ಡಕ್‌ಔಟ್‌ ಆದರು.

ಡೆಲ್ಲಿ ಪರ ಮಿಚೆಲ್‌ ಸ್ಟಾರ್ಕ್‌ ಮೂರು, ಕುಲ್ದೀಪ್‌ ಯಾದವ್‌ ಎರಡು, ಮುಖೇಶ್‌ ಕುಮಾರ್‌ ಹಾಗೂ ವಿಪ್ರಾವ್‌ ನಿಗಮ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಡೆಲ್ಲಿಗೆ ಆರಂಭಿಕ ಆಘಾತ ಎದುರಾಯಿತು. ಜೇಕ್‌ ಫ್ರೆಸರ್‌ ಕೇವಲ ಒಂದು ರನ್‌ಗೆ ವಿಕೆಟ್‌ ಒಪ್ಪಿಸಿ ಹೊರನಡೆದರು. ನಂತರ ಬಂದ ಅಭಿಷೇಕ್‌ ಪೂರೆಲ್‌ ಡಕ್‌ಔಟ್‌ ಹೊರನಡೆದರು. ಸಮೀರ್‌ ರಿಜ್ವಿ ನಾಲ್ಕು ರನ್‌ಗಳಿಗೆ ಸುಸ್ತಾಗುವ ಮೂಲಕ ತಂಡವನ್ನು ಸಂಕಷ್ಟಕ್ಕೆ ದೂಡಿದರು. ಡೆಲ್ಲಿ ಕೇವಲ 8 ರನ್‌ಗಳಿಗೆ ಪ್ರಮುಖ 3 ವಿಕೆಟ್‌ ಕಳೆದುಕೊಂಡಿತು.

ಬಳಿಕ ಜೊತೆಯಾದ ಫಾಫ್‌ ಡು ಪ್ಲೆಸಿ ಹಾಗೂ ನಾಯಕ ಅಕ್ಷರ್‌ ಪಟೇಲ್‌ ತಂಡಕ್ಕೆ ಚೇತರಿಕೆ ಆಟವಾಡಿದರು. ಈ ಇಬ್ಬರು ಕ್ರಮವಾಗಿ 29(18) ಮತ್ತು 22(11) ರನ್‌ ಗಳಿಸಿ ಔಟಾದರು. ನಂತರ ಸ್ಟಬ್ಸ್‌ 34(22), ವಿಪ್ರಾಜ್‌ ನಿಗಮ್‌ 39(15), ಮಿಚೆಲ್‌ ಸ್ಟಾರ್ಕ್‌ 2, ಕಲ್ದೀಪ್‌ ಯಾದವ್‌ 5 ರನ್‌ ಗಳಿಸಿ ಔಟಾದರು.

ಆದರೆ ಮತ್ತೊಂದೆಡೆ ಛಲ ಬಿಡದೇ ಬ್ಯಾಟ್‌ ಬೀಸಿದ ಇಂಪ್ಯಾಕ್ಟ್‌ ಪ್ಲೇಯರ್‌ ಅಶುತೋಶ್‌ ಶರ್ಮಾ ಔಟಾಗದೇ 31 ಎಸತಗಳಲ್ಲಿ 5 ಬೌಂಡರಿ 5 ಸಿಕ್ಸರ್‌ ಸಹಿತ 66 ರನ್‌ ಬಾರಿಸಿ ತಂಡದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದರು. ಮೋಹಿತ್‌ ಶರ್ಮಾ ಒಂದು ರನ್‌ ಗಳಿಸಿ ಔಟಾಗದೇ ಉಳಿದರು.

ಲಖನೌ ಪರ ಶಾರ್ದುಲ್‌ ಠಾಕೂರ್‌, ಸಿದ್ಧಾರ್ಥ್‌, ದಿಗ್ವೇಶ್‌ ಹಾಗೂ ರವಿ ಬಿಷ್ಣೋಯ್‌ ತಲಾ ಎರಡೆರೆಡು ವಿಕೆಟ್‌ ಕಬಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾರು ಅಪಘಾತ : ಕಾರಿನಲ್ಲಿ‌10ಕ್ಕೂ ಹೆಚ್ಚು ಕರುಗಳು ಪತ್ತೆ

ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…

2 hours ago

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

4 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

6 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

6 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

6 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

6 hours ago