ಕ್ರೀಡೆ

IPL 2025 | ಅಶುತೋಷ್‌ ಅಮೋಘ ಬ್ಯಾಟಿಂಗ್‌ ; ಡೆಲ್ಲಿಗೆ ರೋಚಕ ಜಯ

ವಿಶಾಖಪಟ್ಟಣಂ: ಇಂಪ್ಯಾಕ್ಟ್‌ ಪ್ಲೇಯರ್‌ ಅಶುತೋಷ್‌ ಶರ್ಮಾ ಅವರ ಅಮೋಘ ಬ್ಯಾಟಿಂಗ್‌ ನೆರವಿನಿಂದ ಡೆಲ್ಲಿ ತಂಡ ರೋಚಕ ಹಣಾಹಣಿಯಲ್ಲಿ ಒಂದು ವಿಕೆಟ್‌ಗಳ ಅಂತರದಿಂದ ಲಖನೌ ತಂಡವನ್ನು ಮಣಿಸುವ ಮೂಲಕ ಮೊದಲ ಗೆಲುವು ದಾಖಲಿಸಿ ಶುಭಾರಂಭ ಮಾಡಿತು.

ಇಲ್ಲಿನ ವೈ.ಎಸ್‌ ರಾಜಶೇಖರ ರೆಡ್ಡಿ ಕ್ರೀಡಾಂಗಣದ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಲಖನೌ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 209 ರನ್‌ ಕೆಲಹಾಕಿತು. ಈ ಮೊತ್ತ ಬೆನ್ನತ್ತಿದ ಡೆಲ್ಲಿ 19.3 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 211 ರನ್‌ ಗಳಸಿ 1 ವಿಕೆಟ್‌ಗಳ ಅಂತರದಿಂದ ರೋಚಕ ಗೆಲುವು ದಾಖಲಿಸಿತು.

ಲಖನೌ ಪರ ಮಿಚೆಲ್‌ ಮಾರ್ಷ್‌ 72(36), ನಿಕೋಲಸ್‌ ಪೂರನ್‌ 75(30) ರನ್‌ ಗಳ ನೆರವಿನಿಂದ ತಂಡ ಇನ್ನೂರರ ಗಡಿ ದಾಟಲು ಸಹಕರಿಸಿದರು. ಮಾರ್ಕ್ರಂ 15, , ಮಿಲ್ಲರ್‌ 27, ಆಯುಷ್‌ ಬದೋನಿ 4, ಶಹಬಾಜ್‌ ಅಹ್ಮದ್‌ 9, ನಾಯಕ ಪಂತ್‌, ರವಿ ಬಿಷ್ಣೋಯ್‌ ಹಾಗೂ ಶಾರ್ದುಲ್‌ ಠಾಕೂರ್‌ ಸೇರಿದಂತೆ ಮೂವರು ಬ್ಯಾಟ್ಸ್‌ಮನ್‌ಗಳು ಡಕ್‌ಔಟ್‌ ಆದರು.

ಡೆಲ್ಲಿ ಪರ ಮಿಚೆಲ್‌ ಸ್ಟಾರ್ಕ್‌ ಮೂರು, ಕುಲ್ದೀಪ್‌ ಯಾದವ್‌ ಎರಡು, ಮುಖೇಶ್‌ ಕುಮಾರ್‌ ಹಾಗೂ ವಿಪ್ರಾವ್‌ ನಿಗಮ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಡೆಲ್ಲಿಗೆ ಆರಂಭಿಕ ಆಘಾತ ಎದುರಾಯಿತು. ಜೇಕ್‌ ಫ್ರೆಸರ್‌ ಕೇವಲ ಒಂದು ರನ್‌ಗೆ ವಿಕೆಟ್‌ ಒಪ್ಪಿಸಿ ಹೊರನಡೆದರು. ನಂತರ ಬಂದ ಅಭಿಷೇಕ್‌ ಪೂರೆಲ್‌ ಡಕ್‌ಔಟ್‌ ಹೊರನಡೆದರು. ಸಮೀರ್‌ ರಿಜ್ವಿ ನಾಲ್ಕು ರನ್‌ಗಳಿಗೆ ಸುಸ್ತಾಗುವ ಮೂಲಕ ತಂಡವನ್ನು ಸಂಕಷ್ಟಕ್ಕೆ ದೂಡಿದರು. ಡೆಲ್ಲಿ ಕೇವಲ 8 ರನ್‌ಗಳಿಗೆ ಪ್ರಮುಖ 3 ವಿಕೆಟ್‌ ಕಳೆದುಕೊಂಡಿತು.

ಬಳಿಕ ಜೊತೆಯಾದ ಫಾಫ್‌ ಡು ಪ್ಲೆಸಿ ಹಾಗೂ ನಾಯಕ ಅಕ್ಷರ್‌ ಪಟೇಲ್‌ ತಂಡಕ್ಕೆ ಚೇತರಿಕೆ ಆಟವಾಡಿದರು. ಈ ಇಬ್ಬರು ಕ್ರಮವಾಗಿ 29(18) ಮತ್ತು 22(11) ರನ್‌ ಗಳಿಸಿ ಔಟಾದರು. ನಂತರ ಸ್ಟಬ್ಸ್‌ 34(22), ವಿಪ್ರಾಜ್‌ ನಿಗಮ್‌ 39(15), ಮಿಚೆಲ್‌ ಸ್ಟಾರ್ಕ್‌ 2, ಕಲ್ದೀಪ್‌ ಯಾದವ್‌ 5 ರನ್‌ ಗಳಿಸಿ ಔಟಾದರು.

ಆದರೆ ಮತ್ತೊಂದೆಡೆ ಛಲ ಬಿಡದೇ ಬ್ಯಾಟ್‌ ಬೀಸಿದ ಇಂಪ್ಯಾಕ್ಟ್‌ ಪ್ಲೇಯರ್‌ ಅಶುತೋಶ್‌ ಶರ್ಮಾ ಔಟಾಗದೇ 31 ಎಸತಗಳಲ್ಲಿ 5 ಬೌಂಡರಿ 5 ಸಿಕ್ಸರ್‌ ಸಹಿತ 66 ರನ್‌ ಬಾರಿಸಿ ತಂಡದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದರು. ಮೋಹಿತ್‌ ಶರ್ಮಾ ಒಂದು ರನ್‌ ಗಳಿಸಿ ಔಟಾಗದೇ ಉಳಿದರು.

ಲಖನೌ ಪರ ಶಾರ್ದುಲ್‌ ಠಾಕೂರ್‌, ಸಿದ್ಧಾರ್ಥ್‌, ದಿಗ್ವೇಶ್‌ ಹಾಗೂ ರವಿ ಬಿಷ್ಣೋಯ್‌ ತಲಾ ಎರಡೆರೆಡು ವಿಕೆಟ್‌ ಕಬಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…

23 mins ago

ಹೈದರಾಬಾದ್‌ನಲ್ಲಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

ಹೈದರಾಬಾದ್:‌ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…

4 hours ago

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ: ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…

5 hours ago

ಬೆಂಗಳೂರು| 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ: ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…

5 hours ago

ಕೋಲ್ಕತ್ತಾ: ಟೆನಿಸ್‌ ದಂತಕಥೆ ಲಿಯಾಂಡರ್‌ ಪೇಸ್‌ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್‌ ಐಕಾನ್‌ ಲಿಯಾಂಡರ್‌ ಪೇಸ್‌ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

5 hours ago

ಖಾಸಗಿ ಶಾಲೆಗಳಿಂದ ಶುಲ್ಕ ಏರಿಕೆ: ಮಧ್ಯಮ ವರ್ಗದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…

5 hours ago